Advertisement
MIRROR FOCUS

ಕಡಲೆ, ತೊಗರಿ, ಉದ್ದಿನ ಬೇಳೆಕಾಳುಗಳ ಬೆಲೆ ಇಳಿಕೆಗೆ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಸೂಚನೆ | ಬೆಲೆ ಇಳಿಕೆಗೆ ಕ್ರಮ ಕೈಗೊಳ್ಳುವಂತೆ ಉನ್ನತಮಟ್ಟದ ಅಧಿಕಾರಿಗಳ ಜೊತೆ ಸಭೆ

Share

ದಿನನಿತ್ಯದ ಆಹಾರ ಪದಾರ್ಥಗಳ ಬೆಲೆ(Rate) ದಿನದಿಂದ ದಿನಕ್ಕೆ ಗಗನಕ್ಕೇರುತ್ತಿದೆ. ಭಾರಿ ಮಳೆಯ ಹಿನ್ನೆಲೆ ತರಕಾರಿ ಬೆಲೆ ಏರಿಕೆಯಿಂದ ಹಣದುಬ್ಬರ ಉಂಟಾಗಿದೆ. ತರಕಾರಿ ಮಾತ್ರವಲ್ಲದೆ ಬೇಳೆ-ಕಾಳುಗಳ ದರವೂ ಏರಿದೆ. ಇದೀಗ ಬೇಳೆ-ಕಾಳು ಬೆಲೆ ಇಳಿಸುವಂತೆ ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಹ್ಲಾದ್‌ ಜೋಶಿ ಸೂಚಿಸಿದ್ದಾರೆ. ನವದೆಹಲಿಯಲ್ಲಿ ಗ್ರಾಹಕ ವ್ಯವಹಾರಗಳ ಸಚಿವಾಲಯದ  ಉನ್ನತ ಅಧಿಕಾರಿಗಳ ಸಭೆ ನಡೆಸಿ ಚರ್ಚಿಸಿದ ಸಚಿವರು ಈ ಬಗ್ಗೆ ತ್ವರಿತ ಕ್ರಮಕ್ಕೆ ಸಲಹೆ ನೀಡಿದ್ದಾರೆ.

ದೇಶದ ಪ್ರಮುಖ ಮಾರುಕಟ್ಟೆಗಳಲ್ಲಿ ತೊಗರಿ, ಕಡಲೆ (Chana Dal), ಉದ್ದು (Urad Dal) ಮತ್ತಿತರ ಬೇಳೆಗಳ ಬೆಲೆಯಲ್ಲಿ ಶೇ.4ರಷ್ಟು ಕುಸಿತ ಕಂಡಿದೆ. ಹಾಗಿದ್ದರೂ ವ್ಯಾಪಾರಿಗಳು ದರ ಇಳಿಸದಿರುವುದು ಗಮನಕ್ಕೆ ಬಂದಿದೆ. ಎಲ್ಲ ವರ್ತಕರು ಬೇಳೆ – ಕಾಳು ಬೆಲೆ ಕಡಿಮೆ ಮಾಡುವಂತೆ ಕ್ರಮ ಕೈಗೊಳ್ಳಿ ಎಂದು ಸಚಿವರು ಸೂಚಿಸಿದರು. ಗ್ರಾಹಕರಿಗೆ ಕೈಗೆಟುಕುವ ದರದಲ್ಲಿ ಧಾನ್ಯಗಳು ಲಭಿಸುವಂತೆ ಮಾಡಲು ಕೇಂದ್ರ ಗ್ರಾಹಕ ವ್ಯವಹಾರಗಳ ಇಲಾಖೆ ಸಕ್ರೀಯವಾಗಿ ಕಾರ್ಯನಿರ್ವಹಿಸುತ್ತಿದೆ ಎಂದೂ ಸಚಿವರು ಹೇಳಿದರು.

ಸಣ್ಣ-ಸಣ್ಣ ವ್ಯಾಪಾರದ ಮಳಿಗೆಗಳಲ್ಲಿ ಮಾತ್ರ ತೊಗರಿ, ಉದ್ದು, ಕಡಲೆ ಬೇಳೆ ಬೆಲೆ ಇಳಿಸಲಾಗಿದೆ. ಆದರೆ, ದೊಡ್ಡ ದೊಡ್ಡ ವ್ಯಾಪಾರಿ ಮಳಿಗೆಗಳಲ್ಲಿ ಬೆಲೆ ಇಳಿಸದಿರುವುದು ಗಮನಕ್ಕೆ ಬಂದಿದೆ. ಕೂಡಲೇ ಇದರ ವಿರುದ್ಧ ಕ್ರಮಕ್ಕೆ ಮುಂದಾಗಿದೆ ಎಂದು ಅಧಿಕಾರಿಗಳಿಗೆ ಸೂಚಿಸಿದರು. ಈಗಾಗಲೇ ಬೇಳೆಗಳ ಬೆಲೆಯನ್ನು ಕೂಡಲೇ ಇಳಿಸುವಂತೆ ಈ ದೊಡ್ಡ ವರ್ತಕರಿಗೂ ಸೂಚನೆ ನೀಡಲಾಗಿದೆ. ಈ ನಿರ್ದೇಶನ ಅನುಸರಿಸಲು ವಿಫಲವಾದರೇ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಸಚಿವ ಜೋಶಿ ಎಚ್ಚರಿಸಿದ್ದಾರೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ

ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…

1 day ago

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…

2 days ago

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…

2 days ago

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

2 days ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

2 days ago