ದಿನನಿತ್ಯದ ಆಹಾರ ಪದಾರ್ಥಗಳ ಬೆಲೆ(Rate) ದಿನದಿಂದ ದಿನಕ್ಕೆ ಗಗನಕ್ಕೇರುತ್ತಿದೆ. ಭಾರಿ ಮಳೆಯ ಹಿನ್ನೆಲೆ ತರಕಾರಿ ಬೆಲೆ ಏರಿಕೆಯಿಂದ ಹಣದುಬ್ಬರ ಉಂಟಾಗಿದೆ. ತರಕಾರಿ ಮಾತ್ರವಲ್ಲದೆ ಬೇಳೆ-ಕಾಳುಗಳ ದರವೂ ಏರಿದೆ. ಇದೀಗ ಬೇಳೆ-ಕಾಳು ಬೆಲೆ ಇಳಿಸುವಂತೆ ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಸೂಚಿಸಿದ್ದಾರೆ. ನವದೆಹಲಿಯಲ್ಲಿ ಗ್ರಾಹಕ ವ್ಯವಹಾರಗಳ ಸಚಿವಾಲಯದ ಉನ್ನತ ಅಧಿಕಾರಿಗಳ ಸಭೆ ನಡೆಸಿ ಚರ್ಚಿಸಿದ ಸಚಿವರು ಈ ಬಗ್ಗೆ ತ್ವರಿತ ಕ್ರಮಕ್ಕೆ ಸಲಹೆ ನೀಡಿದ್ದಾರೆ.
ದೇಶದ ಪ್ರಮುಖ ಮಾರುಕಟ್ಟೆಗಳಲ್ಲಿ ತೊಗರಿ, ಕಡಲೆ (Chana Dal), ಉದ್ದು (Urad Dal) ಮತ್ತಿತರ ಬೇಳೆಗಳ ಬೆಲೆಯಲ್ಲಿ ಶೇ.4ರಷ್ಟು ಕುಸಿತ ಕಂಡಿದೆ. ಹಾಗಿದ್ದರೂ ವ್ಯಾಪಾರಿಗಳು ದರ ಇಳಿಸದಿರುವುದು ಗಮನಕ್ಕೆ ಬಂದಿದೆ. ಎಲ್ಲ ವರ್ತಕರು ಬೇಳೆ – ಕಾಳು ಬೆಲೆ ಕಡಿಮೆ ಮಾಡುವಂತೆ ಕ್ರಮ ಕೈಗೊಳ್ಳಿ ಎಂದು ಸಚಿವರು ಸೂಚಿಸಿದರು. ಗ್ರಾಹಕರಿಗೆ ಕೈಗೆಟುಕುವ ದರದಲ್ಲಿ ಧಾನ್ಯಗಳು ಲಭಿಸುವಂತೆ ಮಾಡಲು ಕೇಂದ್ರ ಗ್ರಾಹಕ ವ್ಯವಹಾರಗಳ ಇಲಾಖೆ ಸಕ್ರೀಯವಾಗಿ ಕಾರ್ಯನಿರ್ವಹಿಸುತ್ತಿದೆ ಎಂದೂ ಸಚಿವರು ಹೇಳಿದರು.
ಸಣ್ಣ-ಸಣ್ಣ ವ್ಯಾಪಾರದ ಮಳಿಗೆಗಳಲ್ಲಿ ಮಾತ್ರ ತೊಗರಿ, ಉದ್ದು, ಕಡಲೆ ಬೇಳೆ ಬೆಲೆ ಇಳಿಸಲಾಗಿದೆ. ಆದರೆ, ದೊಡ್ಡ ದೊಡ್ಡ ವ್ಯಾಪಾರಿ ಮಳಿಗೆಗಳಲ್ಲಿ ಬೆಲೆ ಇಳಿಸದಿರುವುದು ಗಮನಕ್ಕೆ ಬಂದಿದೆ. ಕೂಡಲೇ ಇದರ ವಿರುದ್ಧ ಕ್ರಮಕ್ಕೆ ಮುಂದಾಗಿದೆ ಎಂದು ಅಧಿಕಾರಿಗಳಿಗೆ ಸೂಚಿಸಿದರು. ಈಗಾಗಲೇ ಬೇಳೆಗಳ ಬೆಲೆಯನ್ನು ಕೂಡಲೇ ಇಳಿಸುವಂತೆ ಈ ದೊಡ್ಡ ವರ್ತಕರಿಗೂ ಸೂಚನೆ ನೀಡಲಾಗಿದೆ. ಈ ನಿರ್ದೇಶನ ಅನುಸರಿಸಲು ವಿಫಲವಾದರೇ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಸಚಿವ ಜೋಶಿ ಎಚ್ಚರಿಸಿದ್ದಾರೆ.
ಅಕ್ರಮ ಅಡಿಕೆ ಆಮದು, ಜಿಎಸ್ಟಿ ತಾರತಮ್ಯ ಹಾಗೂ ಸಹಕಾರ ಸಂಘಗಳ ಸಮಸ್ಯೆಗಳ ಕುರಿತು…
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್…
ಮ್ಯಾನ್ಮಾರ್ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…
ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…