ಕೇಂದ್ರ ಸರ್ಕಾರ ಕೆಲವೊಂದು ಬೆಳೆಗಳಿಗೆ ಮಾತ್ರ ಬೆಳೆ ವಿಮೆಯನ್ನು ನೀಡುತ್ತಿತ್ತು. ಆದರೆ ಈಗ ಧಾರವಾಡ ಜಿಲ್ಲೆಯಲ್ಲಿ ಶೇಂಗಾ ಮತ್ತು ಸೋಯಾಬಿನ್ (Groundnut, Soybean) ಬೆಳೆಗಳಿಗೂ ಮಧ್ಯಂತರ ಬೆಳೆ ವಿಮೆ (Insurance) ನೀಡುವಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ತಿಳಿಸಿದ್ದಾರೆ. ಧಾರವಾಡ ಸಂಸದರೂ ಆಗಿರುವ ಕೇಂದ್ರ ಸಂಸದೀಯ ಸಚಿವ ಜೋಶಿ ಅವರು ಈ ಬಗ್ಗೆ ಎಕ್ಸ್ನಲ್ಲಿ ಮಾಹಿತಿ ಹಂಚಿಕೊಡಿದ್ದಾರೆ.
ಪೋಸ್ಟ್ನಲ್ಲಿ ಏನಿದೆ? : ಬೆಳೆ ಹಾನಿ ಸಮೀಕ್ಷೆಗೂ ಮೊದಲೇ ಶೇಂಗಾ ಹಾಗೂ ಸೋಯಾಬಿನ್ ಬೆಳೆ ಕಟವು ಆಗಿದ್ದರಿಂದ ಈ ಎರಡೂ ಬೆಳೆಗಳನ್ನು ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಮಧ್ಯಂತರ ಪರಿಹಾರ ಪ್ರಕ್ರಿಯೆಯಿಂದ ವಿಮಾ ಕಂಪನಿ ಕೈ ಬಿಟ್ಟಿತ್ತು. ಧಾರವಾಡ ಜಿಲ್ಲಾಡಳಿತ ಮಧ್ಯಂತರ ಬೆಳೆ ವಿಮೆ ಪರಿಹಾರಕ್ಕೆ ಸಲ್ಲಿಸಿದ ರಿಪೋರ್ಟ್ ನಲ್ಲಿ ಸೋಯಾಬಿನ್ ಮತ್ತು ಶೇಂಗಾ ಬೆಳೆಗಳನ್ನ ಹೊರತುಪಡಿಸಿ ಮಿಕ್ಕ ಎಲ್ಲಾ ಬೆಳೆಗಳನ್ನು SBI ವಿಮೆ ಕಂಪನಿ ಅಂಗೀಕರಿಸಿ ಮಧ್ಯಂತರ ವಿಮೆ ಹಣ ಬಿಡುಗಡೆ ಮಾಡಿತ್ತು.
ಈ ವಿಚಾರ ಗಮನಕ್ಕೆ ಬರುತ್ತಲೇ ಕೇಂದ್ರ ಸರ್ಕಾರದ ಹಿರಿಯ ಅಧಿಕಾರಿಗಳು ಮತ್ತು ವಿಮೆ ಕಂಪನಿಯನ್ನು ಸಂಪರ್ಕಿಸಿ, ಸಭೆ ನಡೆಸಿ ಮುಂಗಾರಿನ ಶೇಂಗಾ ಮತ್ತು ಸೋಯಾಬೀನ್ ಬೆಳೆಗಳಿಗೂ ಬೆಳೆ ವಿಮೆ ಪರಿಹಾರ ಬಿಡುಗಡೆಗೆ ಕ್ರಮ ಕೈಗೊಳ್ಳಲಾಗಿದೆ. ಎಂದು ಸಚಿವ ಜೋಶಿ ತಿಳಿಸಿದ್ದಾರೆ. ಈ ಬೆಳೆಗಾರರ ಸಮಸ್ಯೆ ಅರಿತು ಕೇಂದ್ರ ಕೃಷಿ ಸಚಿವ ಅರ್ಜುನ್ ಅವರೊಂದಿಗೂ ಚರ್ಚೆ ನಡೆಸಿ, ಫಸಲ್ ಬಿಮಾ CEO ರಿತೇಶ್ ಚೌಹಾನ್ ಮತ್ತು SBI ವಿಮೆ ಕಂಪನಿಯ ರಾಷ್ಟ್ರೀಯ ಮುಖ್ಯಸ್ಥ ಪಿಯೂಷ್ ಸಿಂಗ್ ಅವರ ಗಮನ ಸೆಳೆದು ಶೇಂಗಾ, ಸೋಯಾಬೀನ್ ಬೆಳೆ ಗಾರರಿಗೂ ಮಧ್ಯಂತರ ಬೆಳೆ ವಿಮೆ ಪರಿಹಾರ ಕೈ ಸೇರುವಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಜೋಶಿ ಹೇಳಿದ್ದಾರೆ.
ಧಾರವಾಡ ಜಿಲ್ಲೆಯ ಶೇಂಗಾ ಹಾಗೂ ಸೋಯಾಬೀನ್ ಬೆಳೆಗಳಿಗೂ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಮಧ್ಯಂತರ ಪರಿಹಾರ ನೀಡುವಂತೆ ರಾಜ್ಯ ಸರ್ಕಾರಕ್ಕೆ ಅತಿ ಶೀಘ್ರದಲ್ಲಿ ಪತ್ರ ತಲುಪಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
– ಅಂತರ್ಜಾಲ ಮಾಹಿತಿ
Union Minister Pralhad Joshi said that steps have been taken to provide interim crop insurance for groundnut and soybean crops in Dharwad district. Union Parliamentary Minister Joshi, who is also a Dharwad MP, has shared information about this in X.
ಹೆಚ್ಚಿನ ವಿವರಗಳನ್ನು ಪಡೆಯಲು ಜ್ಯೋತಿಷ್ಯರೊಂದಿಗೆ ಸಂಪರ್ಕಿಸಬಹುದು. 9535156490
ಜಗತ್ತಿನಲ್ಲಿ ಎಲ್ಲವನ್ನೂ ಹಣದಿಂದಲೇ ಖರೀದಿ ಮಾಡಲು ಸಾಧ್ಯವಿಲ್ಲ. ನೀತಿ, ನಡತೆ, ಬದ್ಧತೆಗಳು ಹಣ ಕೊಟ್ಟರೂ…
ಯಕ್ಷಗುರು, ಭಾಗವತ ಶ್ರೀ ಪಾಲೆಚ್ಚಾರು ಗೋವಿಂದ ನಾಯಕ್ ಅವರಿಗೆ ‘ಈಶಾವಾಸ್ಯ ಪ್ರಶಸ್ತಿ ಪುರಸ್ಕಾರ’…
ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಲಿಮೀಟರ್ ಮಳೆಯಾಗಿದ್ದು, ಇದು ಸಾರ್ವಕಾಲಿಕ ದಾಖಲೆಯಾಗಿದೆ.…
ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿಯಲ್ಲಿದ್ದು, ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನದ…
ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನ…