Advertisement
MIRROR FOCUS

ಶೇಂಗಾ, ಸೋಯಾಬೀನ್ ಬೆಳೆಗಾರರಿಗೆ ಮಧ್ಯಂತರ ಬೆಳೆ ವಿಮೆ ಬಿಡುಗಡೆಗೆ ಕ್ರಮ | ಪ್ರಹ್ಲಾದ್ ಜೋಶಿ

Share

ಕೇಂದ್ರ ಸರ್ಕಾರ ಕೆಲವೊಂದು ಬೆಳೆಗಳಿಗೆ ಮಾತ್ರ ಬೆಳೆ ವಿಮೆಯನ್ನು ನೀಡುತ್ತಿತ್ತು. ಆದರೆ ಈಗ ಧಾರವಾಡ ಜಿಲ್ಲೆಯಲ್ಲಿ ಶೇಂಗಾ ಮತ್ತು ಸೋಯಾಬಿನ್ (Groundnut, Soybean) ಬೆಳೆಗಳಿಗೂ ಮಧ್ಯಂತರ ಬೆಳೆ ವಿಮೆ (Insurance) ನೀಡುವಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ (Pralhad Joshi) ತಿಳಿಸಿದ್ದಾರೆ. ಧಾರವಾಡ ಸಂಸದರೂ ಆಗಿರುವ ಕೇಂದ್ರ ಸಂಸದೀಯ ಸಚಿವ ಜೋಶಿ ಅವರು ಈ ಬಗ್ಗೆ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಡಿದ್ದಾರೆ.

ಪೋಸ್ಟ್‌ನಲ್ಲಿ ಏನಿದೆ?‌ : ಬೆಳೆ ಹಾನಿ ಸಮೀಕ್ಷೆಗೂ ಮೊದಲೇ ಶೇಂಗಾ ಹಾಗೂ ಸೋಯಾಬಿನ್ ಬೆಳೆ ಕಟವು ಆಗಿದ್ದರಿಂದ ಈ ಎರಡೂ ಬೆಳೆಗಳನ್ನು ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಮಧ್ಯಂತರ ಪರಿಹಾರ ಪ್ರಕ್ರಿಯೆಯಿಂದ ವಿಮಾ ಕಂಪನಿ ಕೈ ಬಿಟ್ಟಿತ್ತು.  ಧಾರವಾಡ ಜಿಲ್ಲಾಡಳಿತ ಮಧ್ಯಂತರ ಬೆಳೆ ವಿಮೆ ಪರಿಹಾರಕ್ಕೆ ಸಲ್ಲಿಸಿದ ರಿಪೋರ್ಟ್ ನಲ್ಲಿ ಸೋಯಾಬಿನ್ ಮತ್ತು ಶೇಂಗಾ ಬೆಳೆಗಳನ್ನ ಹೊರತುಪಡಿಸಿ ಮಿಕ್ಕ ಎಲ್ಲಾ ಬೆಳೆಗಳನ್ನು SBI ವಿಮೆ ಕಂಪನಿ ಅಂಗೀಕರಿಸಿ ಮಧ್ಯಂತರ ವಿಮೆ ಹಣ ಬಿಡುಗಡೆ ಮಾಡಿತ್ತು.

ಈ ವಿಚಾರ ಗಮನಕ್ಕೆ ಬರುತ್ತಲೇ ಕೇಂದ್ರ ಸರ್ಕಾರದ ಹಿರಿಯ ಅಧಿಕಾರಿಗಳು ಮತ್ತು ವಿಮೆ ಕಂಪನಿಯನ್ನು ಸಂಪರ್ಕಿಸಿ, ಸಭೆ ನಡೆಸಿ ಮುಂಗಾರಿನ ಶೇಂಗಾ ಮತ್ತು ಸೋಯಾಬೀನ್ ಬೆಳೆಗಳಿಗೂ ಬೆಳೆ ವಿಮೆ ಪರಿಹಾರ ಬಿಡುಗಡೆಗೆ ಕ್ರಮ ಕೈಗೊಳ್ಳಲಾಗಿದೆ. ಎಂದು ಸಚಿವ ಜೋಶಿ ತಿಳಿಸಿದ್ದಾರೆ.   ಈ ಬೆಳೆಗಾರರ ಸಮಸ್ಯೆ ಅರಿತು ಕೇಂದ್ರ ಕೃಷಿ ಸಚಿವ ಅರ್ಜುನ್ ಅವರೊಂದಿಗೂ ಚರ್ಚೆ ನಡೆಸಿ, ಫಸಲ್ ಬಿಮಾ CEO ರಿತೇಶ್ ಚೌಹಾನ್ ಮತ್ತು SBI ವಿಮೆ ಕಂಪನಿಯ ರಾಷ್ಟ್ರೀಯ ಮುಖ್ಯಸ್ಥ ಪಿಯೂಷ್ ಸಿಂಗ್ ಅವರ ಗಮನ ಸೆಳೆದು ಶೇಂಗಾ, ಸೋಯಾಬೀನ್ ಬೆಳೆ ಗಾರರಿಗೂ ಮಧ್ಯಂತರ ಬೆಳೆ ವಿಮೆ ಪರಿಹಾರ ಕೈ ಸೇರುವಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಜೋಶಿ ಹೇಳಿದ್ದಾರೆ.

ಧಾರವಾಡ ಜಿಲ್ಲೆಯ ಶೇಂಗಾ ಹಾಗೂ ಸೋಯಾಬೀನ್ ಬೆಳೆಗಳಿಗೂ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಮಧ್ಯಂತರ ಪರಿಹಾರ ನೀಡುವಂತೆ ರಾಜ್ಯ ಸರ್ಕಾರಕ್ಕೆ ಅತಿ ಶೀಘ್ರದಲ್ಲಿ ಪತ್ರ ತಲುಪಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

– ಅಂತರ್ಜಾಲ ಮಾಹಿತಿ

Union Minister Pralhad Joshi said that steps have been taken to provide interim crop insurance for groundnut and soybean crops in Dharwad district. Union Parliamentary Minister Joshi, who is also a Dharwad MP, has shared information about this in X.
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

17 hours ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

24 hours ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

1 day ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

1 day ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

1 day ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

2 days ago