Advertisement
MIRROR FOCUS

ಶೇಂಗಾ, ಸೋಯಾಬೀನ್ ಬೆಳೆಗಾರರಿಗೆ ಮಧ್ಯಂತರ ಬೆಳೆ ವಿಮೆ ಬಿಡುಗಡೆಗೆ ಕ್ರಮ | ಪ್ರಹ್ಲಾದ್ ಜೋಶಿ

Share

ಕೇಂದ್ರ ಸರ್ಕಾರ ಕೆಲವೊಂದು ಬೆಳೆಗಳಿಗೆ ಮಾತ್ರ ಬೆಳೆ ವಿಮೆಯನ್ನು ನೀಡುತ್ತಿತ್ತು. ಆದರೆ ಈಗ ಧಾರವಾಡ ಜಿಲ್ಲೆಯಲ್ಲಿ ಶೇಂಗಾ ಮತ್ತು ಸೋಯಾಬಿನ್ (Groundnut, Soybean) ಬೆಳೆಗಳಿಗೂ ಮಧ್ಯಂತರ ಬೆಳೆ ವಿಮೆ (Insurance) ನೀಡುವಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ (Pralhad Joshi) ತಿಳಿಸಿದ್ದಾರೆ. ಧಾರವಾಡ ಸಂಸದರೂ ಆಗಿರುವ ಕೇಂದ್ರ ಸಂಸದೀಯ ಸಚಿವ ಜೋಶಿ ಅವರು ಈ ಬಗ್ಗೆ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಡಿದ್ದಾರೆ.

Advertisement

ಪೋಸ್ಟ್‌ನಲ್ಲಿ ಏನಿದೆ?‌ : ಬೆಳೆ ಹಾನಿ ಸಮೀಕ್ಷೆಗೂ ಮೊದಲೇ ಶೇಂಗಾ ಹಾಗೂ ಸೋಯಾಬಿನ್ ಬೆಳೆ ಕಟವು ಆಗಿದ್ದರಿಂದ ಈ ಎರಡೂ ಬೆಳೆಗಳನ್ನು ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಮಧ್ಯಂತರ ಪರಿಹಾರ ಪ್ರಕ್ರಿಯೆಯಿಂದ ವಿಮಾ ಕಂಪನಿ ಕೈ ಬಿಟ್ಟಿತ್ತು.  ಧಾರವಾಡ ಜಿಲ್ಲಾಡಳಿತ ಮಧ್ಯಂತರ ಬೆಳೆ ವಿಮೆ ಪರಿಹಾರಕ್ಕೆ ಸಲ್ಲಿಸಿದ ರಿಪೋರ್ಟ್ ನಲ್ಲಿ ಸೋಯಾಬಿನ್ ಮತ್ತು ಶೇಂಗಾ ಬೆಳೆಗಳನ್ನ ಹೊರತುಪಡಿಸಿ ಮಿಕ್ಕ ಎಲ್ಲಾ ಬೆಳೆಗಳನ್ನು SBI ವಿಮೆ ಕಂಪನಿ ಅಂಗೀಕರಿಸಿ ಮಧ್ಯಂತರ ವಿಮೆ ಹಣ ಬಿಡುಗಡೆ ಮಾಡಿತ್ತು.

ಈ ವಿಚಾರ ಗಮನಕ್ಕೆ ಬರುತ್ತಲೇ ಕೇಂದ್ರ ಸರ್ಕಾರದ ಹಿರಿಯ ಅಧಿಕಾರಿಗಳು ಮತ್ತು ವಿಮೆ ಕಂಪನಿಯನ್ನು ಸಂಪರ್ಕಿಸಿ, ಸಭೆ ನಡೆಸಿ ಮುಂಗಾರಿನ ಶೇಂಗಾ ಮತ್ತು ಸೋಯಾಬೀನ್ ಬೆಳೆಗಳಿಗೂ ಬೆಳೆ ವಿಮೆ ಪರಿಹಾರ ಬಿಡುಗಡೆಗೆ ಕ್ರಮ ಕೈಗೊಳ್ಳಲಾಗಿದೆ. ಎಂದು ಸಚಿವ ಜೋಶಿ ತಿಳಿಸಿದ್ದಾರೆ.   ಈ ಬೆಳೆಗಾರರ ಸಮಸ್ಯೆ ಅರಿತು ಕೇಂದ್ರ ಕೃಷಿ ಸಚಿವ ಅರ್ಜುನ್ ಅವರೊಂದಿಗೂ ಚರ್ಚೆ ನಡೆಸಿ, ಫಸಲ್ ಬಿಮಾ CEO ರಿತೇಶ್ ಚೌಹಾನ್ ಮತ್ತು SBI ವಿಮೆ ಕಂಪನಿಯ ರಾಷ್ಟ್ರೀಯ ಮುಖ್ಯಸ್ಥ ಪಿಯೂಷ್ ಸಿಂಗ್ ಅವರ ಗಮನ ಸೆಳೆದು ಶೇಂಗಾ, ಸೋಯಾಬೀನ್ ಬೆಳೆ ಗಾರರಿಗೂ ಮಧ್ಯಂತರ ಬೆಳೆ ವಿಮೆ ಪರಿಹಾರ ಕೈ ಸೇರುವಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಜೋಶಿ ಹೇಳಿದ್ದಾರೆ.

ಧಾರವಾಡ ಜಿಲ್ಲೆಯ ಶೇಂಗಾ ಹಾಗೂ ಸೋಯಾಬೀನ್ ಬೆಳೆಗಳಿಗೂ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಮಧ್ಯಂತರ ಪರಿಹಾರ ನೀಡುವಂತೆ ರಾಜ್ಯ ಸರ್ಕಾರಕ್ಕೆ ಅತಿ ಶೀಘ್ರದಲ್ಲಿ ಪತ್ರ ತಲುಪಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

– ಅಂತರ್ಜಾಲ ಮಾಹಿತಿ

Union Minister Pralhad Joshi said that steps have been taken to provide interim crop insurance for groundnut and soybean crops in Dharwad district. Union Parliamentary Minister Joshi, who is also a Dharwad MP, has shared information about this in X.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 24-04-2026 | ಕರಾವಳಿ–ಮಲೆನಾಡು–ಒಳನಾಡಿನಲ್ಲಿ ಮಳೆ ಸೂಚನೆ

ರಾಜ್ಯದಲ್ಲಿ ಬಿಸಿಲಿನ ನಡುವೆ ಏಪ್ರಿಲ್ 25-26ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ. ಕರಾವಳಿ,…

2 hours ago

SSLC ಪಾಸ್ ಮಾಡಿದವರಿಗೆ ಸುವರ್ಣಾವಕಾಶ..! ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ

ಎಸ್.ಎಸ್.ಎಲ್.ಸಿ ಪಾಸಾದವರಿಗೆ ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್‌ಗಳಿಗೆ ಪ್ರವೇಶ ಆರಂಭವಾಗಿದೆ.…

9 hours ago

13 ಟನ್ ಅಕ್ರಮ ಅಡಿಕೆ ವಶ : ಕರಾವಳಿ ರಕ್ಷಣಾ ಪಡೆಯ ದಾಳಿ

ಸುಂದರ್‌ಬನ್ಸ್‌ನಲ್ಲಿ ಕರಾವಳಿ ರಕ್ಷಣಾ ಪಡೆ 13,320 ಕೆಜಿ ಅಕ್ರಮ ಅಡಿಕೆ ವಶಪಡಿಸಿಕೊಂಡಿದೆ. ‘ಶಿವ…

9 hours ago

ರಾಜ್ಯದಲ್ಲಿ ಬಿಸಿಲು ಬಿಸಿ ತೀವ್ರ : ಮೈಸೂರಿನಲ್ಲಿ ಸನ್ ಸ್ಟ್ರೋಕ್ ವಾರ್ಡ್ ಆರಂಭಿಸಿದ ಆಸ್ಪತ್ರೆ

ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…

1 day ago

ರೈತರು ಇಂಧನದಾತರಾಗಬೇಕು – ಭೂಮಿ ಉಳಿಸಿ ಸಮ್ಮೇಳನದಲ್ಲಿ ಸಂದೇಶ

ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…

1 day ago

ರೈತರ ಆದಾಯ ಹೆಚ್ಚಿಸಲು ಸಮಗ್ರ ಕೃಷಿ ಮಾದರಿ ಅಗತ್ಯ

ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…

1 day ago