Advertisement
MIRROR FOCUS

ರೈತ ಸಂಘಟನೆಗಳೊಂದಿಗೆ ಸಮಾಲೋಚನೆ | ಬೆಳೆ ವಿಮೆ, ಫಸಲ್ ಬಿಮಾ ಯೋಜನೆ, ಬೆಳೆ ಹಾನಿ ಬಗ್ಗೆ ಚರ್ಚೆ | ಸಚಿವ ಶಿವರಾಜ್ ಸಿಂಗ್ ಚೌವ್ಹಾಣ್  ಭಾಗಿ

Share

ಕೇಂದ್ರ ಕೃಷಿ ಕಲ್ಯಾಣ ಖಾತೆ ಸಚಿವ ಶಿವರಾಜ್ ಸಿಂಗ್ ಚೌವ್ಹಾಣ್ ದೆಹಲಿಯಲ್ಲಿ ಇಂದು ರೈತರು ಹಾಗೂ ರೈತ ಸಂಘಟನೆಗಳೊಂದಿಗೆ ಸಮಾಲೋಚನೆ ನಡೆಸಿದರು.…..ಮುಂದೆ ಓದಿ….

Advertisement
Advertisement

ಈ ವೇಳೆ ಶಿವರಾಜ್ ಸಿಂಗ್ ಚೌವ್ಹಾಣ್, ಕೃಷಿಕರು ದೇಶದ ಬೆನ್ನೆಲುಬು ಹಾಗೂ ಭಾರತದ ಆತ್ಮವಾಗಿದ್ದಾರೆ.ಕೃಷಿ ಭಾರತದ ಆರ್ಥಿಕತೆಯ ಬೆನ್ನೆಲುಬು. ರೈತರು ಅದರ ಆತ್ಮ ಮತ್ತು ರೈತರ ಸೇವೆ ನಮಗೆ ದೇವರನ್ನು ಪೂಜಿಸಿದಂತೆ ಎಂದರು. ಸಭೆಯಲ್ಲಿ ಹಲವು ವಿಷಯಗಳನ್ನು ರೈತರು ಪ್ರಸ್ತಾಪಿಸಿದ್ದಾರೆ. ರೈತರಿಂದ ಅನೇಕ ಸಲಹೆಗಳನ್ನು ಸ್ವೀಕರಿಸಿದ್ದೇವೆ, ಈ ಸಲಹೆಗಳನ್ನು ಕೆಲಸ ಮಾಡುವ ಮೂಲಕ ಪರಿಹರಿಸಲು ನಾವು ನಮ್ಮ  ಪ್ರಯತ್ನ ಮಾಡುತ್ತೇವೆ ಎಂದರು. ಬೆಳೆ ವಿಮೆ, ಫಸಲ್ ಬಿಮಾ ಯೋಜನೆ, ಬೆಳೆ ಹಾನಿ ಸೇರಿದಂತೆ ರೈತ ಪರ ಕ್ರಮಗಳ ಕುರಿತು ಚರ್ಚೆ ನಡೆಸಲಾಗಿದೆ ಎಂದು ತಿಳಿಸಿದರು. ಸಂವಾದದಲ್ಲಿ ಕೃಷಿ ಸಚಿವಾಲಯ ಮತ್ತು ಭಾರತೀಯ ಕೃಷಿ ಸಂಶೋಧನಾ ಮಂಡಳಿಯ (ICAR) ಅಧಿಕಾರಿಗಳು  ಉಪಸ್ಥಿತರಿದ್ದರು.…..ಮುಂದೆ ಓದಿ….

ಸುಮಾರು 50 ರೈತ ಮುಖಂಡರನ್ನು ಭೇಟಿ ಮಾಡಿದ್ದೇನೆ, ನಾವು ಅವರಿಂದ ಅನೇಕ ಸಲಹೆಗಳನ್ನು ಸ್ವೀಕರಿಸಿದ್ದೇವೆ, ಅವುಗಳಲ್ಲಿ ಕೆಲವು ಬೆಳೆಗಳ ಬೆಲೆಗೆ ಸಂಬಂಧಿಸಿವೆ ಮತ್ತು ಕೆಲವು ಫಸಲ್ ಭೀಮಾ ಯೋಜನೆಯ ಬಗ್ಗೆ ಕೆಲವು ಸಲಹೆಗಳು ಇವೆ. ಕಾಡು ಪ್ರಾಣಿಗಳ ಸಮಸ್ಯೆ ಮತ್ತು ಅವುಗಳಿಂದ ಉಂಟಾಗುವ ನಷ್ಟಗಳ ಬಗ್ಗೆಯೂ ಸಲಹೆ ಇವೆ. ಹೊಸ ಬೆಳೆ ಬಂದಾಗ ಯಾವ ನಿರ್ಧಾರ ಕೈಗೊಳ್ಳಬೇಕು ಎಂಬ ಬಗ್ಗೆಯೂ ಹಲವು ಸಲಹೆಗಳು ಬಂದಿವೆ ಎಂದರು.ಅಧಿಕಾರಿಗಳೊಂದಿಗೆ ಕುಳಿತು ಎಲ್ಲಾ ಸಲಹೆಗಳನ್ನು ಗಂಭೀರವಾಗಿ ಮಾತುಕತೆ ನಡೆಸಿ  ಸಾಧ್ಯವಿರುವ ಎಲ್ಲವನ್ನೂ ಮಾಡಲು ಪ್ರಯತ್ನಿಸುತ್ತೇನೆ ಎಂದು ಹೇಳಿದ್ದಾರೆ.…..ಮುಂದೆ ಓದಿ….

ತಾಳೆ ಎಣ್ಣೆಯ ಮೇಲಿನ ಆಮದು ಸುಂಕವನ್ನು 27.5% ಕ್ಕೆ ಹೆಚ್ಚಿಸಲಾಗಿದೆ, ಬಾಸ್ಮತಿಯಿಂದ ಕನಿಷ್ಠ ರಫ್ತು ಬೆಲೆಯನ್ನು ತೆಗೆದುಹಾಕಲಾಗಿದೆ, ಈರುಳ್ಳಿ ಮೇಲಿನ ರಫ್ತು ಸುಂಕವನ್ನು 40% ರಿಂದ 20% ಕ್ಕೆ ಇಳಿಸಲಾಗಿದೆ. ಇಂತಹ ಹಲವು ನಿರ್ಧಾರಗಳು ರೈತರ ಮೆಚ್ಚುಗೆಗೆ ಪಾತ್ರವಾಗಿವೆ ಎಂದು ಉಲ್ಲೇಖಿಸಿದರು.

ರೈತರು ತ್ಯಾಜ್ಯಗಳನ್ನು ಸುಡುವ ಪ್ರವೃತಿ ಬಿಡಬೇಕು, ತ್ಯಾಜ್ಯವು ಕೃಷಿ ಬೆಳೆಯ  ಸಂಪತ್ತಾಗುತ್ತದೆ  ಅದನ್ನು ಸದುಪಯೋಗ ಪಡಿಸಿಕೊಂಡು ಜಾಗೃತಿ ಮೂಡಿಸುವ ಮೂಲಕ ರೈತರಿಗೆ ಮನವರಿಕೆ ಮಾಡಿಕೊಡಲು ಪ್ರಯತ್ನಿಸುತ್ತೇವೆ ಎಂದು ಸಚಿವರು ರೈತರ ಸಂವಾದಲ್ಲಿ ಹೇಳಿದರು.…..ಮುಂದೆ ಓದಿ….

(ಡಿಡಿ)

Union Minister for Agriculture, Farmers’ Welfare and Rural Development Shri Shivraj Singh Chouhan started a series of dialogues with farmers and farmers’ organizations in Delhi today. Chouhan stated, as I have said before, agriculture is the backbone of India’s economy and farmers are its soul and serving farmers is like worshiping God for us.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…

10 hours ago

ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ

ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…

10 hours ago

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

1 day ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

2 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

2 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

2 days ago