MIRROR FOCUS

ರೈತ ಸಂಘಟನೆಗಳೊಂದಿಗೆ ಸಮಾಲೋಚನೆ | ಬೆಳೆ ವಿಮೆ, ಫಸಲ್ ಬಿಮಾ ಯೋಜನೆ, ಬೆಳೆ ಹಾನಿ ಬಗ್ಗೆ ಚರ್ಚೆ | ಸಚಿವ ಶಿವರಾಜ್ ಸಿಂಗ್ ಚೌವ್ಹಾಣ್  ಭಾಗಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕೇಂದ್ರ ಕೃಷಿ ಕಲ್ಯಾಣ ಖಾತೆ ಸಚಿವ ಶಿವರಾಜ್ ಸಿಂಗ್ ಚೌವ್ಹಾಣ್ ದೆಹಲಿಯಲ್ಲಿ ಇಂದು ರೈತರು ಹಾಗೂ ರೈತ ಸಂಘಟನೆಗಳೊಂದಿಗೆ ಸಮಾಲೋಚನೆ ನಡೆಸಿದರು.…..ಮುಂದೆ ಓದಿ….

Advertisement
Advertisement

ಈ ವೇಳೆ ಶಿವರಾಜ್ ಸಿಂಗ್ ಚೌವ್ಹಾಣ್, ಕೃಷಿಕರು ದೇಶದ ಬೆನ್ನೆಲುಬು ಹಾಗೂ ಭಾರತದ ಆತ್ಮವಾಗಿದ್ದಾರೆ.ಕೃಷಿ ಭಾರತದ ಆರ್ಥಿಕತೆಯ ಬೆನ್ನೆಲುಬು. ರೈತರು ಅದರ ಆತ್ಮ ಮತ್ತು ರೈತರ ಸೇವೆ ನಮಗೆ ದೇವರನ್ನು ಪೂಜಿಸಿದಂತೆ ಎಂದರು. ಸಭೆಯಲ್ಲಿ ಹಲವು ವಿಷಯಗಳನ್ನು ರೈತರು ಪ್ರಸ್ತಾಪಿಸಿದ್ದಾರೆ. ರೈತರಿಂದ ಅನೇಕ ಸಲಹೆಗಳನ್ನು ಸ್ವೀಕರಿಸಿದ್ದೇವೆ, ಈ ಸಲಹೆಗಳನ್ನು ಕೆಲಸ ಮಾಡುವ ಮೂಲಕ ಪರಿಹರಿಸಲು ನಾವು ನಮ್ಮ  ಪ್ರಯತ್ನ ಮಾಡುತ್ತೇವೆ ಎಂದರು. ಬೆಳೆ ವಿಮೆ, ಫಸಲ್ ಬಿಮಾ ಯೋಜನೆ, ಬೆಳೆ ಹಾನಿ ಸೇರಿದಂತೆ ರೈತ ಪರ ಕ್ರಮಗಳ ಕುರಿತು ಚರ್ಚೆ ನಡೆಸಲಾಗಿದೆ ಎಂದು ತಿಳಿಸಿದರು. ಸಂವಾದದಲ್ಲಿ ಕೃಷಿ ಸಚಿವಾಲಯ ಮತ್ತು ಭಾರತೀಯ ಕೃಷಿ ಸಂಶೋಧನಾ ಮಂಡಳಿಯ (ICAR) ಅಧಿಕಾರಿಗಳು  ಉಪಸ್ಥಿತರಿದ್ದರು.…..ಮುಂದೆ ಓದಿ….

ಸುಮಾರು 50 ರೈತ ಮುಖಂಡರನ್ನು ಭೇಟಿ ಮಾಡಿದ್ದೇನೆ, ನಾವು ಅವರಿಂದ ಅನೇಕ ಸಲಹೆಗಳನ್ನು ಸ್ವೀಕರಿಸಿದ್ದೇವೆ, ಅವುಗಳಲ್ಲಿ ಕೆಲವು ಬೆಳೆಗಳ ಬೆಲೆಗೆ ಸಂಬಂಧಿಸಿವೆ ಮತ್ತು ಕೆಲವು ಫಸಲ್ ಭೀಮಾ ಯೋಜನೆಯ ಬಗ್ಗೆ ಕೆಲವು ಸಲಹೆಗಳು ಇವೆ. ಕಾಡು ಪ್ರಾಣಿಗಳ ಸಮಸ್ಯೆ ಮತ್ತು ಅವುಗಳಿಂದ ಉಂಟಾಗುವ ನಷ್ಟಗಳ ಬಗ್ಗೆಯೂ ಸಲಹೆ ಇವೆ. ಹೊಸ ಬೆಳೆ ಬಂದಾಗ ಯಾವ ನಿರ್ಧಾರ ಕೈಗೊಳ್ಳಬೇಕು ಎಂಬ ಬಗ್ಗೆಯೂ ಹಲವು ಸಲಹೆಗಳು ಬಂದಿವೆ ಎಂದರು.ಅಧಿಕಾರಿಗಳೊಂದಿಗೆ ಕುಳಿತು ಎಲ್ಲಾ ಸಲಹೆಗಳನ್ನು ಗಂಭೀರವಾಗಿ ಮಾತುಕತೆ ನಡೆಸಿ  ಸಾಧ್ಯವಿರುವ ಎಲ್ಲವನ್ನೂ ಮಾಡಲು ಪ್ರಯತ್ನಿಸುತ್ತೇನೆ ಎಂದು ಹೇಳಿದ್ದಾರೆ.…..ಮುಂದೆ ಓದಿ….

ತಾಳೆ ಎಣ್ಣೆಯ ಮೇಲಿನ ಆಮದು ಸುಂಕವನ್ನು 27.5% ಕ್ಕೆ ಹೆಚ್ಚಿಸಲಾಗಿದೆ, ಬಾಸ್ಮತಿಯಿಂದ ಕನಿಷ್ಠ ರಫ್ತು ಬೆಲೆಯನ್ನು ತೆಗೆದುಹಾಕಲಾಗಿದೆ, ಈರುಳ್ಳಿ ಮೇಲಿನ ರಫ್ತು ಸುಂಕವನ್ನು 40% ರಿಂದ 20% ಕ್ಕೆ ಇಳಿಸಲಾಗಿದೆ. ಇಂತಹ ಹಲವು ನಿರ್ಧಾರಗಳು ರೈತರ ಮೆಚ್ಚುಗೆಗೆ ಪಾತ್ರವಾಗಿವೆ ಎಂದು ಉಲ್ಲೇಖಿಸಿದರು.

Advertisement

ರೈತರು ತ್ಯಾಜ್ಯಗಳನ್ನು ಸುಡುವ ಪ್ರವೃತಿ ಬಿಡಬೇಕು, ತ್ಯಾಜ್ಯವು ಕೃಷಿ ಬೆಳೆಯ  ಸಂಪತ್ತಾಗುತ್ತದೆ  ಅದನ್ನು ಸದುಪಯೋಗ ಪಡಿಸಿಕೊಂಡು ಜಾಗೃತಿ ಮೂಡಿಸುವ ಮೂಲಕ ರೈತರಿಗೆ ಮನವರಿಕೆ ಮಾಡಿಕೊಡಲು ಪ್ರಯತ್ನಿಸುತ್ತೇವೆ ಎಂದು ಸಚಿವರು ರೈತರ ಸಂವಾದಲ್ಲಿ ಹೇಳಿದರು.…..ಮುಂದೆ ಓದಿ….

(ಡಿಡಿ)

Union Minister for Agriculture, Farmers’ Welfare and Rural Development Shri Shivraj Singh Chouhan started a series of dialogues with farmers and farmers’ organizations in Delhi today. Chouhan stated, as I have said before, agriculture is the backbone of India’s economy and farmers are its soul and serving farmers is like worshiping God for us.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಕಾಲಿಕ ಮಳೆ | ಮಾವು ಇಳುವರಿ ಕುಸಿತ | ಬೆಲೆ ಕುಸಿತ | ರೈತರಿಗೆ ನಿರಾಸೆ |

ಮಾವು ಉತ್ಪಾದನೆಯಲ್ಲಿ ರಾಜ್ಯದಲ್ಲೇ ಎರಡನೇ ಸ್ಥಾನ ಪಡೆದಿರುವ ರಾಮನಗರ ಜಿಲ್ಲೆಯಲ್ಲಿ ಈ ಬಾರಿ…

58 minutes ago

ಶಾಲೆ ಆರಂಭ | ಯೋಜಿತ ಮತ್ತು ಪರಿಣಾಮಕಾರಿ ಆರಂಭದ ಅಗತ್ಯ

ಶಾಲೆಯ  ಯೋಜಿತ ಮತ್ತು ಪರಿಣಾಮಕಾರಿ ಆರಂಭಕ್ಕೆ  ವಿದ್ಯಾರ್ಥಿ – ಪೋಷಕ – ಶಿಕ್ಷಕ …

1 hour ago

ಛದ್ಮ ವೇಷದಲ್ಲಿ ನಮ್ಮ ಪ್ರಜಾಪ್ರಭುತ್ವ

ಬಡವರಿಗೆ, ಹಳ್ಳಿಗರಿಗೆ, ದಲಿತರಿಗೆ, ನಿರಕ್ಷಕ ಕುಕ್ಷಿಗಳಿಗೆ, ನಿರುದ್ಯೋಗಿಗಳಿಗೆ ಸಮಾನತೆಯೆಂಬುದು ಮತದಾನದ ಸಂದರ್ಭದಲ್ಲಿ ಮಾತ್ರವೇ…

2 hours ago

ಸಂಜೆ ದೀಪ ಹಚ್ಚುವಾಗ ಪಾಲಿಸಬೇಕಾದ ಕೆಲವು ನಿಯಮಗಳು

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳಲ್ಲಿ ಸಂಪರ್ಕಿಸಿ 9535156490

2 hours ago

ಆಂಧ್ರಪ್ರದೇಶಕ್ಕೆ ನಾಲ್ಕು ಕುಮ್ಕಿ ಆನೆಗಳನ್ನು ಹಸ್ತಾಂತರಿಸಿದ ರಾಜ್ಯಸರ್ಕಾರ

ಮಾನವ ಆನೆ ಸಂಘರ್ಷ ತಡೆಗಟ್ಟಲು ಅಕ್ಕ ಪಕ್ಕದ ರಾಜ್ಯಗಳ ಸಹಕಾರ ಅಗತ್ಯ ಎಂದು…

10 hours ago

ರೈತರಿಗೆ ಉತ್ತಮ ಗುಣಮಟ್ಟದ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳನ್ನು ಸಮರ್ಪಕವಾಗಿ ಪೂರೈಸಲು ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರೈತರಿಗೆ ಉತ್ತಮ ಗುಣಮಟ್ಟದ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳನ್ನು…

10 hours ago