Advertisement
MIRROR FOCUS

ರೈತ ಸಂಘಟನೆಗಳೊಂದಿಗೆ ಸಮಾಲೋಚನೆ | ಬೆಳೆ ವಿಮೆ, ಫಸಲ್ ಬಿಮಾ ಯೋಜನೆ, ಬೆಳೆ ಹಾನಿ ಬಗ್ಗೆ ಚರ್ಚೆ | ಸಚಿವ ಶಿವರಾಜ್ ಸಿಂಗ್ ಚೌವ್ಹಾಣ್  ಭಾಗಿ

Share

ಕೇಂದ್ರ ಕೃಷಿ ಕಲ್ಯಾಣ ಖಾತೆ ಸಚಿವ ಶಿವರಾಜ್ ಸಿಂಗ್ ಚೌವ್ಹಾಣ್ ದೆಹಲಿಯಲ್ಲಿ ಇಂದು ರೈತರು ಹಾಗೂ ರೈತ ಸಂಘಟನೆಗಳೊಂದಿಗೆ ಸಮಾಲೋಚನೆ ನಡೆಸಿದರು.…..ಮುಂದೆ ಓದಿ….

ಈ ವೇಳೆ ಶಿವರಾಜ್ ಸಿಂಗ್ ಚೌವ್ಹಾಣ್, ಕೃಷಿಕರು ದೇಶದ ಬೆನ್ನೆಲುಬು ಹಾಗೂ ಭಾರತದ ಆತ್ಮವಾಗಿದ್ದಾರೆ.ಕೃಷಿ ಭಾರತದ ಆರ್ಥಿಕತೆಯ ಬೆನ್ನೆಲುಬು. ರೈತರು ಅದರ ಆತ್ಮ ಮತ್ತು ರೈತರ ಸೇವೆ ನಮಗೆ ದೇವರನ್ನು ಪೂಜಿಸಿದಂತೆ ಎಂದರು. ಸಭೆಯಲ್ಲಿ ಹಲವು ವಿಷಯಗಳನ್ನು ರೈತರು ಪ್ರಸ್ತಾಪಿಸಿದ್ದಾರೆ. ರೈತರಿಂದ ಅನೇಕ ಸಲಹೆಗಳನ್ನು ಸ್ವೀಕರಿಸಿದ್ದೇವೆ, ಈ ಸಲಹೆಗಳನ್ನು ಕೆಲಸ ಮಾಡುವ ಮೂಲಕ ಪರಿಹರಿಸಲು ನಾವು ನಮ್ಮ  ಪ್ರಯತ್ನ ಮಾಡುತ್ತೇವೆ ಎಂದರು. ಬೆಳೆ ವಿಮೆ, ಫಸಲ್ ಬಿಮಾ ಯೋಜನೆ, ಬೆಳೆ ಹಾನಿ ಸೇರಿದಂತೆ ರೈತ ಪರ ಕ್ರಮಗಳ ಕುರಿತು ಚರ್ಚೆ ನಡೆಸಲಾಗಿದೆ ಎಂದು ತಿಳಿಸಿದರು. ಸಂವಾದದಲ್ಲಿ ಕೃಷಿ ಸಚಿವಾಲಯ ಮತ್ತು ಭಾರತೀಯ ಕೃಷಿ ಸಂಶೋಧನಾ ಮಂಡಳಿಯ (ICAR) ಅಧಿಕಾರಿಗಳು  ಉಪಸ್ಥಿತರಿದ್ದರು.…..ಮುಂದೆ ಓದಿ….

ಸುಮಾರು 50 ರೈತ ಮುಖಂಡರನ್ನು ಭೇಟಿ ಮಾಡಿದ್ದೇನೆ, ನಾವು ಅವರಿಂದ ಅನೇಕ ಸಲಹೆಗಳನ್ನು ಸ್ವೀಕರಿಸಿದ್ದೇವೆ, ಅವುಗಳಲ್ಲಿ ಕೆಲವು ಬೆಳೆಗಳ ಬೆಲೆಗೆ ಸಂಬಂಧಿಸಿವೆ ಮತ್ತು ಕೆಲವು ಫಸಲ್ ಭೀಮಾ ಯೋಜನೆಯ ಬಗ್ಗೆ ಕೆಲವು ಸಲಹೆಗಳು ಇವೆ. ಕಾಡು ಪ್ರಾಣಿಗಳ ಸಮಸ್ಯೆ ಮತ್ತು ಅವುಗಳಿಂದ ಉಂಟಾಗುವ ನಷ್ಟಗಳ ಬಗ್ಗೆಯೂ ಸಲಹೆ ಇವೆ. ಹೊಸ ಬೆಳೆ ಬಂದಾಗ ಯಾವ ನಿರ್ಧಾರ ಕೈಗೊಳ್ಳಬೇಕು ಎಂಬ ಬಗ್ಗೆಯೂ ಹಲವು ಸಲಹೆಗಳು ಬಂದಿವೆ ಎಂದರು.ಅಧಿಕಾರಿಗಳೊಂದಿಗೆ ಕುಳಿತು ಎಲ್ಲಾ ಸಲಹೆಗಳನ್ನು ಗಂಭೀರವಾಗಿ ಮಾತುಕತೆ ನಡೆಸಿ  ಸಾಧ್ಯವಿರುವ ಎಲ್ಲವನ್ನೂ ಮಾಡಲು ಪ್ರಯತ್ನಿಸುತ್ತೇನೆ ಎಂದು ಹೇಳಿದ್ದಾರೆ.…..ಮುಂದೆ ಓದಿ….

ತಾಳೆ ಎಣ್ಣೆಯ ಮೇಲಿನ ಆಮದು ಸುಂಕವನ್ನು 27.5% ಕ್ಕೆ ಹೆಚ್ಚಿಸಲಾಗಿದೆ, ಬಾಸ್ಮತಿಯಿಂದ ಕನಿಷ್ಠ ರಫ್ತು ಬೆಲೆಯನ್ನು ತೆಗೆದುಹಾಕಲಾಗಿದೆ, ಈರುಳ್ಳಿ ಮೇಲಿನ ರಫ್ತು ಸುಂಕವನ್ನು 40% ರಿಂದ 20% ಕ್ಕೆ ಇಳಿಸಲಾಗಿದೆ. ಇಂತಹ ಹಲವು ನಿರ್ಧಾರಗಳು ರೈತರ ಮೆಚ್ಚುಗೆಗೆ ಪಾತ್ರವಾಗಿವೆ ಎಂದು ಉಲ್ಲೇಖಿಸಿದರು.

ರೈತರು ತ್ಯಾಜ್ಯಗಳನ್ನು ಸುಡುವ ಪ್ರವೃತಿ ಬಿಡಬೇಕು, ತ್ಯಾಜ್ಯವು ಕೃಷಿ ಬೆಳೆಯ  ಸಂಪತ್ತಾಗುತ್ತದೆ  ಅದನ್ನು ಸದುಪಯೋಗ ಪಡಿಸಿಕೊಂಡು ಜಾಗೃತಿ ಮೂಡಿಸುವ ಮೂಲಕ ರೈತರಿಗೆ ಮನವರಿಕೆ ಮಾಡಿಕೊಡಲು ಪ್ರಯತ್ನಿಸುತ್ತೇವೆ ಎಂದು ಸಚಿವರು ರೈತರ ಸಂವಾದಲ್ಲಿ ಹೇಳಿದರು.…..ಮುಂದೆ ಓದಿ….

(ಡಿಡಿ)

Union Minister for Agriculture, Farmers’ Welfare and Rural Development Shri Shivraj Singh Chouhan started a series of dialogues with farmers and farmers’ organizations in Delhi today. Chouhan stated, as I have said before, agriculture is the backbone of India’s economy and farmers are its soul and serving farmers is like worshiping God for us.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸಲ್ಫ್ಯೂರಿಕ್ ಆಸಿಡ್ ಕೊರತೆ – ಕಾಪರ್‌ಸಲ್ಪೇಟ್‌ ಮೇಲೂ ಹೊಡೆತ – ಕೃಷಿಕರು ಗಮನಿಸಬೇಕಾದ ವಿಷಯ…

ಜಾಗತಿಕ ಮಟ್ಟದಲ್ಲಿ ಸಲ್ಫ್ಯೂರಿಕ್ ಆಸಿಡ್ ಕೊರತೆಯಿಂದ ತಾಮ್ರ ಸೇರಿದಂತೆ ಲಿಥಿಯಂ, ನಿಕೆಲ್ ಮೊದಲಾದ…

3 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಜಾಲದ ಮೇಲೆ ಇಡಿ ಭಾರೀ ದಾಳಿ – ₹337 ಕೋಟಿ ನಕಲಿ ಇ-ವೇ ಬಿಲ್ ಜಾಲದ ತನಿಖೆ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಅಡಿಕೆ ಸಾಗಣೆ ಮಾಡುತ್ತಿದ್ದ ಜಾಲದ ವಿರುದ್ಧ ಮಿಜೋರಾಂನ ಚಾಂಫೈ ಜಿಲ್ಲೆಯಲ್ಲಿ…

4 hours ago

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

1 day ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

2 days ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

2 days ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

2 days ago