ತುಳು ಭಾಷೆಗೆ(Tulu Language) ಉಳಿದ ಭಾಷೆಗಳಿಗೆ ಇರುವಷ್ಟೇ ಇತಿಹಾಸ(History), ಬಳಕೆ ಇದೆ. ಆದರೆ ಅದನ್ನು ಯಾಕೋ ಸರ್ಕಾರಗಳು ಅಧಿಕೃತ ಭಾಷೆಯನ್ನಾಗಿಸದೆ ನಿರ್ಲಕ್ಷಿಸಿವೆ. ಆದರೆ ತುಳು ಭಾಷಿಗರು ತಮ್ಮ ಹೋರಾಟವನ್ನು ಮುಂದುವರೆಸುತ್ತಲೇ ಇದ್ದಾರೆ. ಈ ಬಾರಿ ತುಳು ಭಾಷೆಯ (Tulu Language) ಅಧಿಕೃತ ಸ್ಥಾನಮಾನಕ್ಕಾಗಿ ವಿಶಿಷ್ಟ ಅಭಿಯಾನಕ್ಕೆ ಕರಾವಳಿಗರು ಮುಂದಾಗಿದ್ದಾರೆ. ಜನವರಿ 29ರಿಂದ ಫೆಬ್ರವರಿ 2 ರವರೆಗೆ ವಿಶಿಷ್ಟ ಅಭಿಯಾನ ಕೈಗೊಳ್ಳಲಾಗಿದೆ.
ವಿವಿಧ ಕ್ಷೇತ್ರದ ಗಣ್ಯರು, ರಾಜಕಾರಣಿಗಳು, ಕಲಾವಿದರು, ವಿವಿಧ ಸಂಘ ಸಂಸ್ಥೆಗಳು ಈ ಅಭಿಯಾನದಲ್ಲಿ ಪಾಲ್ಗೊಳ್ಳಲಿದೆ. ತುಳು ಭಾಷೆಯನ್ನು 8ನೇ ಪರಿಚ್ಛೇದಕ್ಕೆ (8th Schedule) ಸೇರ್ಪಡೆ ಹಾಗೂ ರಾಜ್ಯದಲ್ಲಿ ಎರಡನೇ ಅಧಿಕೃತ ಭಾಷೆ(official language) ಸ್ಥಾನಮಾನ ನೀಡಬೇಕೆನ್ನುವುದು ಹೋರಾಟಗಾರರ ಪ್ರಮುಖ ಬೇಡಿಕೆಯಾಗಿದೆ.
ಈ ಕಾರ್ಯಕ್ರಮದ ಅಂಗವಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ 10 ಸಾವಿರ ಪತ್ರಗಳನ್ನು ಬರೆಯಲು ನಿರ್ಧರಿಸಲಾಗಿದೆ. ಈಗಾಗಲೇ ಈ ಅಭಿಯಾನಕ್ಕೆ ಪಕ್ಷ ಭೇದ ಮರೆತು ಜನ ಬೆಂಬಲಿಸಿದ್ದಾರೆ. ಕರಾವಳಿ ಭಾಗದ ಕನ್ನಡ ಸಂಘಟನೆಗಳು ಕೂಡಾ ಈ ಅಭಿಯಾನದಲ್ಲಿ ಕೈ ಜೋಡಿಸುವುದಾಗಿ ತಿಳಿಸಿದೆ. ತುಳು ಭಾಷೆಯು ಅಧಿಕೃತ ಲಿಪಿಯನ್ನು ಹೊಂದಿದ್ದು, ಈ ಭಾಷೆಗೆ ಸಂವಿಧಾನದ 8ನೇ ಪರಿಚ್ಛೇದದಲ್ಲಿ ಸ್ಥಾನಮಾನ ಸಿಕ್ಕಲ್ಲಿ ಸಾಂವಿಧಾನಿಕ ಮಾನ್ಯತೆ ಸಿಗಲಿದೆ ಎಂದು ಹೋರಾಟಗಾರರು ತಿಳಿಸಿದ್ದಾರೆ.
– ಅಂತರ್ಜಾಲ ಮಾಹಿತಿ
ಅಕ್ಷಯ ತೃತೀಯ(Akshaya Trutiya)... ಅಕ್ಷಯ ತೃತೀಯ ಮೇ.10 ಶುಕ್ರವಾರ, ಈ ದಿನದಂದು ಚಂದ್ರ…
ಬೀಜ(Seed) ಎಂಬುದು ಬರೀ ಬಿತ್ತನೆ ವಸ್ತುವಲ್ಲ. ಅದು ಕೃಷಿಯ(Agriculture) ಜೀವನಾಡಿ. ಸಾವಿರಾರು ವರ್ಷಗಳಿಂದ…
ಎಲ್ ನಿನೋ ಪ್ರಭಾವ ಹಿನ್ನೆಲೆ ದೇಶದಾದ್ಯಂತ ಬರಗಾಲದ ಛಾಯೆ ಆವರಿಸಿತ್ತು. ಕಳೆದ 15…
ಭಾರತದಲ್ಲಿ ಎಲ್ಲಾ ಧರ್ಮದವರಿಗೂ ಸಮಾನ ಹಕ್ಕು ಇದೆ. ವಿವಿಧತೆಯಲ್ಲಿ ಏಕತೆಯನ್ನು ಸಾರುವ ದೇಶ…
ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು (Praveen Nettaru) ಹತ್ಯೆ ಪ್ರಕರಣದ…
ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇರುವುದರಿಂದ ಇಂತಹಲ್ಲೆ ಮಳೆಯಾಗುತ್ತದೆ ಅಂತ ಹೇಳಲು…