ತುಳು ಭಾಷೆಗೆ(Tulu Language) ಉಳಿದ ಭಾಷೆಗಳಿಗೆ ಇರುವಷ್ಟೇ ಇತಿಹಾಸ(History), ಬಳಕೆ ಇದೆ. ಆದರೆ ಅದನ್ನು ಯಾಕೋ ಸರ್ಕಾರಗಳು ಅಧಿಕೃತ ಭಾಷೆಯನ್ನಾಗಿಸದೆ ನಿರ್ಲಕ್ಷಿಸಿವೆ. ಆದರೆ ತುಳು ಭಾಷಿಗರು ತಮ್ಮ ಹೋರಾಟವನ್ನು ಮುಂದುವರೆಸುತ್ತಲೇ ಇದ್ದಾರೆ. ಈ ಬಾರಿ ತುಳು ಭಾಷೆಯ (Tulu Language) ಅಧಿಕೃತ ಸ್ಥಾನಮಾನಕ್ಕಾಗಿ ವಿಶಿಷ್ಟ ಅಭಿಯಾನಕ್ಕೆ ಕರಾವಳಿಗರು ಮುಂದಾಗಿದ್ದಾರೆ. ಜನವರಿ 29ರಿಂದ ಫೆಬ್ರವರಿ 2 ರವರೆಗೆ ವಿಶಿಷ್ಟ ಅಭಿಯಾನ ಕೈಗೊಳ್ಳಲಾಗಿದೆ.
ವಿವಿಧ ಕ್ಷೇತ್ರದ ಗಣ್ಯರು, ರಾಜಕಾರಣಿಗಳು, ಕಲಾವಿದರು, ವಿವಿಧ ಸಂಘ ಸಂಸ್ಥೆಗಳು ಈ ಅಭಿಯಾನದಲ್ಲಿ ಪಾಲ್ಗೊಳ್ಳಲಿದೆ. ತುಳು ಭಾಷೆಯನ್ನು 8ನೇ ಪರಿಚ್ಛೇದಕ್ಕೆ (8th Schedule) ಸೇರ್ಪಡೆ ಹಾಗೂ ರಾಜ್ಯದಲ್ಲಿ ಎರಡನೇ ಅಧಿಕೃತ ಭಾಷೆ(official language) ಸ್ಥಾನಮಾನ ನೀಡಬೇಕೆನ್ನುವುದು ಹೋರಾಟಗಾರರ ಪ್ರಮುಖ ಬೇಡಿಕೆಯಾಗಿದೆ.
ಈ ಕಾರ್ಯಕ್ರಮದ ಅಂಗವಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ 10 ಸಾವಿರ ಪತ್ರಗಳನ್ನು ಬರೆಯಲು ನಿರ್ಧರಿಸಲಾಗಿದೆ. ಈಗಾಗಲೇ ಈ ಅಭಿಯಾನಕ್ಕೆ ಪಕ್ಷ ಭೇದ ಮರೆತು ಜನ ಬೆಂಬಲಿಸಿದ್ದಾರೆ. ಕರಾವಳಿ ಭಾಗದ ಕನ್ನಡ ಸಂಘಟನೆಗಳು ಕೂಡಾ ಈ ಅಭಿಯಾನದಲ್ಲಿ ಕೈ ಜೋಡಿಸುವುದಾಗಿ ತಿಳಿಸಿದೆ. ತುಳು ಭಾಷೆಯು ಅಧಿಕೃತ ಲಿಪಿಯನ್ನು ಹೊಂದಿದ್ದು, ಈ ಭಾಷೆಗೆ ಸಂವಿಧಾನದ 8ನೇ ಪರಿಚ್ಛೇದದಲ್ಲಿ ಸ್ಥಾನಮಾನ ಸಿಕ್ಕಲ್ಲಿ ಸಾಂವಿಧಾನಿಕ ಮಾನ್ಯತೆ ಸಿಗಲಿದೆ ಎಂದು ಹೋರಾಟಗಾರರು ತಿಳಿಸಿದ್ದಾರೆ.
– ಅಂತರ್ಜಾಲ ಮಾಹಿತಿ
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…