Advertisement
MIRROR FOCUS

ತುಳು ಭಾಷೆಯ ಅಧಿಕೃತ ಸ್ಥಾನಮಾನಕ್ಕಾಗಿ ವಿಶಿಷ್ಟ ಅಭಿಯಾನ : ಈ ಬಾರಿ ತೀವ್ರಗೊಳ್ಳಲಿದೆಯಾ ಹೋರಾಟ..?

Share

ತುಳು ಭಾಷೆಗೆ(Tulu Language) ಉಳಿದ ಭಾಷೆಗಳಿಗೆ ಇರುವಷ್ಟೇ ಇತಿಹಾಸ(History), ಬಳಕೆ ಇದೆ. ಆದರೆ ಅದನ್ನು ಯಾಕೋ ಸರ್ಕಾರಗಳು ಅಧಿಕೃತ ಭಾಷೆಯನ್ನಾಗಿಸದೆ ನಿರ್ಲಕ್ಷಿಸಿವೆ. ಆದರೆ ತುಳು ಭಾಷಿಗರು ತಮ್ಮ ಹೋರಾಟವನ್ನು ಮುಂದುವರೆಸುತ್ತಲೇ ಇದ್ದಾರೆ. ಈ ಬಾರಿ ತುಳು ಭಾಷೆಯ (Tulu Language) ಅಧಿಕೃತ ಸ್ಥಾನಮಾನಕ್ಕಾಗಿ ವಿಶಿಷ್ಟ ಅಭಿಯಾನಕ್ಕೆ ಕರಾವಳಿಗರು ಮುಂದಾಗಿದ್ದಾರೆ. ಜನವರಿ 29ರಿಂದ ಫೆಬ್ರವರಿ 2 ರವರೆಗೆ ವಿಶಿಷ್ಟ ಅಭಿಯಾನ ಕೈಗೊಳ್ಳಲಾಗಿದೆ.

ವಿವಿಧ ಕ್ಷೇತ್ರದ ಗಣ್ಯರು, ರಾಜಕಾರಣಿಗಳು, ಕಲಾವಿದರು, ವಿವಿಧ ಸಂಘ ಸಂಸ್ಥೆಗಳು ಈ ಅಭಿಯಾನದಲ್ಲಿ ಪಾಲ್ಗೊಳ್ಳಲಿದೆ. ತುಳು ಭಾಷೆಯನ್ನು 8ನೇ ಪರಿಚ್ಛೇದಕ್ಕೆ (8th Schedule) ಸೇರ್ಪಡೆ ಹಾಗೂ ರಾಜ್ಯದಲ್ಲಿ ಎರಡನೇ ಅಧಿಕೃತ ಭಾಷೆ(official language) ಸ್ಥಾನಮಾನ ನೀಡಬೇಕೆನ್ನುವುದು ಹೋರಾಟಗಾರರ ಪ್ರಮುಖ ಬೇಡಿಕೆಯಾಗಿದೆ.

ಈ ಕಾರ್ಯಕ್ರಮದ ಅಂಗವಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ 10 ಸಾವಿರ ಪತ್ರಗಳನ್ನು ಬರೆಯಲು ನಿರ್ಧರಿಸಲಾಗಿದೆ. ಈಗಾಗಲೇ ಈ ಅಭಿಯಾನಕ್ಕೆ ಪಕ್ಷ ಭೇದ ಮರೆತು ಜನ ಬೆಂಬಲಿಸಿದ್ದಾರೆ. ಕರಾವಳಿ ಭಾಗದ ಕನ್ನಡ ಸಂಘಟನೆಗಳು ಕೂಡಾ ಈ ಅಭಿಯಾನದಲ್ಲಿ ಕೈ ಜೋಡಿಸುವುದಾಗಿ ತಿಳಿಸಿದೆ. ತುಳು ಭಾಷೆಯು ಅಧಿಕೃತ ಲಿಪಿಯನ್ನು ಹೊಂದಿದ್ದು, ಈ ಭಾಷೆಗೆ ಸಂವಿಧಾನದ 8ನೇ ಪರಿಚ್ಛೇದದಲ್ಲಿ ಸ್ಥಾನಮಾನ ಸಿಕ್ಕಲ್ಲಿ ಸಾಂವಿಧಾನಿಕ ಮಾನ್ಯತೆ ಸಿಗಲಿದೆ ಎಂದು ಹೋರಾಟಗಾರರು ತಿಳಿಸಿದ್ದಾರೆ.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

18 hours ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

1 day ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

2 days ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

2 days ago