ತುಳು ಭಾಷೆಗೆ(Tulu Language) ಉಳಿದ ಭಾಷೆಗಳಿಗೆ ಇರುವಷ್ಟೇ ಇತಿಹಾಸ(History), ಬಳಕೆ ಇದೆ. ಆದರೆ ಅದನ್ನು ಯಾಕೋ ಸರ್ಕಾರಗಳು ಅಧಿಕೃತ ಭಾಷೆಯನ್ನಾಗಿಸದೆ ನಿರ್ಲಕ್ಷಿಸಿವೆ. ಆದರೆ ತುಳು ಭಾಷಿಗರು ತಮ್ಮ ಹೋರಾಟವನ್ನು ಮುಂದುವರೆಸುತ್ತಲೇ ಇದ್ದಾರೆ. ಈ ಬಾರಿ ತುಳು ಭಾಷೆಯ (Tulu Language) ಅಧಿಕೃತ ಸ್ಥಾನಮಾನಕ್ಕಾಗಿ ವಿಶಿಷ್ಟ ಅಭಿಯಾನಕ್ಕೆ ಕರಾವಳಿಗರು ಮುಂದಾಗಿದ್ದಾರೆ. ಜನವರಿ 29ರಿಂದ ಫೆಬ್ರವರಿ 2 ರವರೆಗೆ ವಿಶಿಷ್ಟ ಅಭಿಯಾನ ಕೈಗೊಳ್ಳಲಾಗಿದೆ.
ವಿವಿಧ ಕ್ಷೇತ್ರದ ಗಣ್ಯರು, ರಾಜಕಾರಣಿಗಳು, ಕಲಾವಿದರು, ವಿವಿಧ ಸಂಘ ಸಂಸ್ಥೆಗಳು ಈ ಅಭಿಯಾನದಲ್ಲಿ ಪಾಲ್ಗೊಳ್ಳಲಿದೆ. ತುಳು ಭಾಷೆಯನ್ನು 8ನೇ ಪರಿಚ್ಛೇದಕ್ಕೆ (8th Schedule) ಸೇರ್ಪಡೆ ಹಾಗೂ ರಾಜ್ಯದಲ್ಲಿ ಎರಡನೇ ಅಧಿಕೃತ ಭಾಷೆ(official language) ಸ್ಥಾನಮಾನ ನೀಡಬೇಕೆನ್ನುವುದು ಹೋರಾಟಗಾರರ ಪ್ರಮುಖ ಬೇಡಿಕೆಯಾಗಿದೆ.
ಈ ಕಾರ್ಯಕ್ರಮದ ಅಂಗವಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ 10 ಸಾವಿರ ಪತ್ರಗಳನ್ನು ಬರೆಯಲು ನಿರ್ಧರಿಸಲಾಗಿದೆ. ಈಗಾಗಲೇ ಈ ಅಭಿಯಾನಕ್ಕೆ ಪಕ್ಷ ಭೇದ ಮರೆತು ಜನ ಬೆಂಬಲಿಸಿದ್ದಾರೆ. ಕರಾವಳಿ ಭಾಗದ ಕನ್ನಡ ಸಂಘಟನೆಗಳು ಕೂಡಾ ಈ ಅಭಿಯಾನದಲ್ಲಿ ಕೈ ಜೋಡಿಸುವುದಾಗಿ ತಿಳಿಸಿದೆ. ತುಳು ಭಾಷೆಯು ಅಧಿಕೃತ ಲಿಪಿಯನ್ನು ಹೊಂದಿದ್ದು, ಈ ಭಾಷೆಗೆ ಸಂವಿಧಾನದ 8ನೇ ಪರಿಚ್ಛೇದದಲ್ಲಿ ಸ್ಥಾನಮಾನ ಸಿಕ್ಕಲ್ಲಿ ಸಾಂವಿಧಾನಿಕ ಮಾನ್ಯತೆ ಸಿಗಲಿದೆ ಎಂದು ಹೋರಾಟಗಾರರು ತಿಳಿಸಿದ್ದಾರೆ.
– ಅಂತರ್ಜಾಲ ಮಾಹಿತಿ
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…