Advertisement
MIRROR FOCUS

ತುಳು ಭಾಷೆಯ ಅಧಿಕೃತ ಸ್ಥಾನಮಾನಕ್ಕಾಗಿ ವಿಶಿಷ್ಟ ಅಭಿಯಾನ : ಈ ಬಾರಿ ತೀವ್ರಗೊಳ್ಳಲಿದೆಯಾ ಹೋರಾಟ..?

Share

ತುಳು ಭಾಷೆಗೆ(Tulu Language) ಉಳಿದ ಭಾಷೆಗಳಿಗೆ ಇರುವಷ್ಟೇ ಇತಿಹಾಸ(History), ಬಳಕೆ ಇದೆ. ಆದರೆ ಅದನ್ನು ಯಾಕೋ ಸರ್ಕಾರಗಳು ಅಧಿಕೃತ ಭಾಷೆಯನ್ನಾಗಿಸದೆ ನಿರ್ಲಕ್ಷಿಸಿವೆ. ಆದರೆ ತುಳು ಭಾಷಿಗರು ತಮ್ಮ ಹೋರಾಟವನ್ನು ಮುಂದುವರೆಸುತ್ತಲೇ ಇದ್ದಾರೆ. ಈ ಬಾರಿ ತುಳು ಭಾಷೆಯ (Tulu Language) ಅಧಿಕೃತ ಸ್ಥಾನಮಾನಕ್ಕಾಗಿ ವಿಶಿಷ್ಟ ಅಭಿಯಾನಕ್ಕೆ ಕರಾವಳಿಗರು ಮುಂದಾಗಿದ್ದಾರೆ. ಜನವರಿ 29ರಿಂದ ಫೆಬ್ರವರಿ 2 ರವರೆಗೆ ವಿಶಿಷ್ಟ ಅಭಿಯಾನ ಕೈಗೊಳ್ಳಲಾಗಿದೆ.

ವಿವಿಧ ಕ್ಷೇತ್ರದ ಗಣ್ಯರು, ರಾಜಕಾರಣಿಗಳು, ಕಲಾವಿದರು, ವಿವಿಧ ಸಂಘ ಸಂಸ್ಥೆಗಳು ಈ ಅಭಿಯಾನದಲ್ಲಿ ಪಾಲ್ಗೊಳ್ಳಲಿದೆ. ತುಳು ಭಾಷೆಯನ್ನು 8ನೇ ಪರಿಚ್ಛೇದಕ್ಕೆ (8th Schedule) ಸೇರ್ಪಡೆ ಹಾಗೂ ರಾಜ್ಯದಲ್ಲಿ ಎರಡನೇ ಅಧಿಕೃತ ಭಾಷೆ(official language) ಸ್ಥಾನಮಾನ ನೀಡಬೇಕೆನ್ನುವುದು ಹೋರಾಟಗಾರರ ಪ್ರಮುಖ ಬೇಡಿಕೆಯಾಗಿದೆ.

ಈ ಕಾರ್ಯಕ್ರಮದ ಅಂಗವಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ 10 ಸಾವಿರ ಪತ್ರಗಳನ್ನು ಬರೆಯಲು ನಿರ್ಧರಿಸಲಾಗಿದೆ. ಈಗಾಗಲೇ ಈ ಅಭಿಯಾನಕ್ಕೆ ಪಕ್ಷ ಭೇದ ಮರೆತು ಜನ ಬೆಂಬಲಿಸಿದ್ದಾರೆ. ಕರಾವಳಿ ಭಾಗದ ಕನ್ನಡ ಸಂಘಟನೆಗಳು ಕೂಡಾ ಈ ಅಭಿಯಾನದಲ್ಲಿ ಕೈ ಜೋಡಿಸುವುದಾಗಿ ತಿಳಿಸಿದೆ. ತುಳು ಭಾಷೆಯು ಅಧಿಕೃತ ಲಿಪಿಯನ್ನು ಹೊಂದಿದ್ದು, ಈ ಭಾಷೆಗೆ ಸಂವಿಧಾನದ 8ನೇ ಪರಿಚ್ಛೇದದಲ್ಲಿ ಸ್ಥಾನಮಾನ ಸಿಕ್ಕಲ್ಲಿ ಸಾಂವಿಧಾನಿಕ ಮಾನ್ಯತೆ ಸಿಗಲಿದೆ ಎಂದು ಹೋರಾಟಗಾರರು ತಿಳಿಸಿದ್ದಾರೆ.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

16 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

1 day ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

1 day ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

1 day ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

1 day ago