ತುಳು ಭಾಷೆಗೆ(Tulu Language) ಉಳಿದ ಭಾಷೆಗಳಿಗೆ ಇರುವಷ್ಟೇ ಇತಿಹಾಸ(History), ಬಳಕೆ ಇದೆ. ಆದರೆ ಅದನ್ನು ಯಾಕೋ ಸರ್ಕಾರಗಳು ಅಧಿಕೃತ ಭಾಷೆಯನ್ನಾಗಿಸದೆ ನಿರ್ಲಕ್ಷಿಸಿವೆ. ಆದರೆ ತುಳು ಭಾಷಿಗರು ತಮ್ಮ ಹೋರಾಟವನ್ನು ಮುಂದುವರೆಸುತ್ತಲೇ ಇದ್ದಾರೆ. ಈ ಬಾರಿ ತುಳು ಭಾಷೆಯ (Tulu Language) ಅಧಿಕೃತ ಸ್ಥಾನಮಾನಕ್ಕಾಗಿ ವಿಶಿಷ್ಟ ಅಭಿಯಾನಕ್ಕೆ ಕರಾವಳಿಗರು ಮುಂದಾಗಿದ್ದಾರೆ. ಜನವರಿ 29ರಿಂದ ಫೆಬ್ರವರಿ 2 ರವರೆಗೆ ವಿಶಿಷ್ಟ ಅಭಿಯಾನ ಕೈಗೊಳ್ಳಲಾಗಿದೆ.
ವಿವಿಧ ಕ್ಷೇತ್ರದ ಗಣ್ಯರು, ರಾಜಕಾರಣಿಗಳು, ಕಲಾವಿದರು, ವಿವಿಧ ಸಂಘ ಸಂಸ್ಥೆಗಳು ಈ ಅಭಿಯಾನದಲ್ಲಿ ಪಾಲ್ಗೊಳ್ಳಲಿದೆ. ತುಳು ಭಾಷೆಯನ್ನು 8ನೇ ಪರಿಚ್ಛೇದಕ್ಕೆ (8th Schedule) ಸೇರ್ಪಡೆ ಹಾಗೂ ರಾಜ್ಯದಲ್ಲಿ ಎರಡನೇ ಅಧಿಕೃತ ಭಾಷೆ(official language) ಸ್ಥಾನಮಾನ ನೀಡಬೇಕೆನ್ನುವುದು ಹೋರಾಟಗಾರರ ಪ್ರಮುಖ ಬೇಡಿಕೆಯಾಗಿದೆ.
ಈ ಕಾರ್ಯಕ್ರಮದ ಅಂಗವಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ 10 ಸಾವಿರ ಪತ್ರಗಳನ್ನು ಬರೆಯಲು ನಿರ್ಧರಿಸಲಾಗಿದೆ. ಈಗಾಗಲೇ ಈ ಅಭಿಯಾನಕ್ಕೆ ಪಕ್ಷ ಭೇದ ಮರೆತು ಜನ ಬೆಂಬಲಿಸಿದ್ದಾರೆ. ಕರಾವಳಿ ಭಾಗದ ಕನ್ನಡ ಸಂಘಟನೆಗಳು ಕೂಡಾ ಈ ಅಭಿಯಾನದಲ್ಲಿ ಕೈ ಜೋಡಿಸುವುದಾಗಿ ತಿಳಿಸಿದೆ. ತುಳು ಭಾಷೆಯು ಅಧಿಕೃತ ಲಿಪಿಯನ್ನು ಹೊಂದಿದ್ದು, ಈ ಭಾಷೆಗೆ ಸಂವಿಧಾನದ 8ನೇ ಪರಿಚ್ಛೇದದಲ್ಲಿ ಸ್ಥಾನಮಾನ ಸಿಕ್ಕಲ್ಲಿ ಸಾಂವಿಧಾನಿಕ ಮಾನ್ಯತೆ ಸಿಗಲಿದೆ ಎಂದು ಹೋರಾಟಗಾರರು ತಿಳಿಸಿದ್ದಾರೆ.
– ಅಂತರ್ಜಾಲ ಮಾಹಿತಿ
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…
ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…
ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…
ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…
ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ವ್ಯವಸ್ಥೆ ಮಾಡಿ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿಯಾಗಿದೆ. ಟ್ಯಾಂಕರ್,…