ಉನ್ನತಿ ಗ್ರಾಮ ಅಭಿಯಾನ ಯೋಜನೆ | ಗದಗ-ದಾವಣಗೆರೆ ಜಿಲ್ಲೆಯ ಗ್ರಾಮಗಳು ಆಯ್ಕೆ |

September 24, 2024
8:25 PM
ಉನ್ನತ ಗ್ರಾಮ ಅಭಿಯಾನದಡಿ ಆಯ್ಕೆಯಾದ ಗ್ರಾಮಗಳಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಕ್ರಿಯಾ ಯೋಜನೆ ರೂಪಿಸಲಾಗುತ್ತದೆ.

ಕೇಂದ್ರ ಬುಡಕಟ್ಟು ಸಚಿವಾಲಯದಿಂದ ಅಕ್ಟೋಬರ್ 2 ರಂದು  ಘೋಷಣೆಯಾಗಲಿರುವ ಪ್ರಧಾನಮಂತ್ರಿ ಜನಜಾತಿಯ ಉನ್ನತಿ ಗ್ರಾಮ ಅಭಿಯಾನ ಯೋಜನೆಗೆ ಗದಗ ಜಿಲ್ಲೆಯ ನಾಲ್ಕು ಗ್ರಾಮಗಳು ಹಾಗೂ ದಾವಣಗೆರೆ ಜಿಲ್ಲೆಯ 44 ಗ್ರಾಮಗಳು  ಆಯ್ಕೆಯಾಗಿವೆ.

ಬುಡಕಟ್ಟು ಸಮುದಾಯಗಳ ಸಾಮಾಜಿಕ ಆರ್ಥಿಕ ಸ್ಥಿತಿಯನ್ನು ಸುಧಾರಿಸುವಲ್ಲಿ ಈ ಯೋಜನೆ ಮಹತ್ವದ ಪಾತ್ರ ವಹಿಸಲಿದೆ. ಪರಿಶಿಷ್ಟ ಪಂಗಡ ಜನಾಂಗದವರು ಹೆಚ್ಚಾಗಿರುವ ಚಿತ್ರದುರ್ಗ ಜಿಲ್ಲೆಯ ಆಯ್ದ 87 ಗ್ರಾಮಗಳನ್ನು ಪ್ರಧಾನ ಮಂತ್ರಿ ಜನಜಾತಿಯ ಉನ್ನತ ಗ್ರಾಮ ಅಭಿಯಾನದಡಿ ಅಭಿವೃದ್ಧಿಪಡಿಸಲು ಆಯ್ಕೆ ಮಾಡಲಾಗಿದ್ದು, ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಕ್ರಿಯಾ ಯೋಜನೆ ರೂಪಿಸಲಾಗಿದೆ.

ಈ ಯೋಜನೆಯಲ್ಲಿ ಪರಿಶಿಷ್ಟ ಪಂಗಡದ ಜನರಿಗೆ ಉಪಯೋಗವಾಗುವ ವಿವಿಧ 17 ಇಲಾಖೆಗಳು, 25 ಪ್ರಮುಖ ವಿಷಯಗಳನ್ನು ಒಳಗೊಂಡಿರುತ್ತದೆ. ಪರಿಶಿಷ್ಟ ಪಂಗಡದ ಜನರು ಹೆಚ್ಚು ವಾಸಿಸುವ ಗ್ರಾಮಗಳನ್ನು ಈ ಯೋಜನೆಯಡಿ ಆಯ್ಕೆ ಮಾಡಲಾಗಿದೆ. ಆಯ್ಕೆಯಾದ ಗ್ರಾಮಗಳಲ್ಲಿ ಸಂಪರ್ಕ ರಸ್ತೆ ಅಭಿವೃದ್ಧಿ, ಕುಡಿಯುವ ನೀರಿನ ವ್ಯವಸ್ಥೆ, ವಿದ್ಯುದೀಕರಣ, ಕೃಷಿ, ತೋಟಗಾರಿಕೆ, ಮೊಬೈಲ್ ಹಾಗೂ ಇಂಟರ್‌ನೆಟ್ ಸಂಪರ್ಕ ಮುಂತಾದ ಯೋಜನೆಗಳನ್ನು ಅನುಷ್ಠಾನ ಮಾಡಲಾಗುತ್ತದೆ .

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಅಕ್ರಮ ಆಮದು ಕಡಿವಾಣ – ರೋಸ್ಟೆಡ್ ಅಡಿಕೆಗೆ ₹351 ಕನಿಷ್ಠ ದರ – ಕಸ್ಟಮ್ಸ್‌ ನಿಗಾ ಎಂದ ಕೇಂದ್ರ
August 11, 2026
10:31 PM
by: ದ ರೂರಲ್ ಮಿರರ್.ಕಾಂ
ತೆಂಗು ಬೆಳೆಗೆ ವಿಮೆ : ಕೇಂದ್ರದ ಮಹತ್ವದ ಉತ್ತರ
August 11, 2026
9:56 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 11-08-2026 | ಕರ್ನಾಟಕದ ಹವಾಮಾನದಲ್ಲಿ ಮುಂದಿನ ದಿನಗಳಲ್ಲಿ ಏನು ಬದಲಾವಣೆ ?
August 11, 2026
9:12 PM
by: ಸಾಯಿಶೇಖರ್ ಕರಿಕಳ
ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ
August 11, 2026
7:14 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror