ಕೇಂದ್ರ ಬುಡಕಟ್ಟು ಸಚಿವಾಲಯದಿಂದ ಅಕ್ಟೋಬರ್ 2 ರಂದು ಘೋಷಣೆಯಾಗಲಿರುವ ಪ್ರಧಾನಮಂತ್ರಿ ಜನಜಾತಿಯ ಉನ್ನತಿ ಗ್ರಾಮ ಅಭಿಯಾನ ಯೋಜನೆಗೆ ಗದಗ ಜಿಲ್ಲೆಯ ನಾಲ್ಕು ಗ್ರಾಮಗಳು ಹಾಗೂ ದಾವಣಗೆರೆ ಜಿಲ್ಲೆಯ 44 ಗ್ರಾಮಗಳು ಆಯ್ಕೆಯಾಗಿವೆ.
ಬುಡಕಟ್ಟು ಸಮುದಾಯಗಳ ಸಾಮಾಜಿಕ ಆರ್ಥಿಕ ಸ್ಥಿತಿಯನ್ನು ಸುಧಾರಿಸುವಲ್ಲಿ ಈ ಯೋಜನೆ ಮಹತ್ವದ ಪಾತ್ರ ವಹಿಸಲಿದೆ. ಪರಿಶಿಷ್ಟ ಪಂಗಡ ಜನಾಂಗದವರು ಹೆಚ್ಚಾಗಿರುವ ಚಿತ್ರದುರ್ಗ ಜಿಲ್ಲೆಯ ಆಯ್ದ 87 ಗ್ರಾಮಗಳನ್ನು ಪ್ರಧಾನ ಮಂತ್ರಿ ಜನಜಾತಿಯ ಉನ್ನತ ಗ್ರಾಮ ಅಭಿಯಾನದಡಿ ಅಭಿವೃದ್ಧಿಪಡಿಸಲು ಆಯ್ಕೆ ಮಾಡಲಾಗಿದ್ದು, ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಕ್ರಿಯಾ ಯೋಜನೆ ರೂಪಿಸಲಾಗಿದೆ.
ಈ ಯೋಜನೆಯಲ್ಲಿ ಪರಿಶಿಷ್ಟ ಪಂಗಡದ ಜನರಿಗೆ ಉಪಯೋಗವಾಗುವ ವಿವಿಧ 17 ಇಲಾಖೆಗಳು, 25 ಪ್ರಮುಖ ವಿಷಯಗಳನ್ನು ಒಳಗೊಂಡಿರುತ್ತದೆ. ಪರಿಶಿಷ್ಟ ಪಂಗಡದ ಜನರು ಹೆಚ್ಚು ವಾಸಿಸುವ ಗ್ರಾಮಗಳನ್ನು ಈ ಯೋಜನೆಯಡಿ ಆಯ್ಕೆ ಮಾಡಲಾಗಿದೆ. ಆಯ್ಕೆಯಾದ ಗ್ರಾಮಗಳಲ್ಲಿ ಸಂಪರ್ಕ ರಸ್ತೆ ಅಭಿವೃದ್ಧಿ, ಕುಡಿಯುವ ನೀರಿನ ವ್ಯವಸ್ಥೆ, ವಿದ್ಯುದೀಕರಣ, ಕೃಷಿ, ತೋಟಗಾರಿಕೆ, ಮೊಬೈಲ್ ಹಾಗೂ ಇಂಟರ್ನೆಟ್ ಸಂಪರ್ಕ ಮುಂತಾದ ಯೋಜನೆಗಳನ್ನು ಅನುಷ್ಠಾನ ಮಾಡಲಾಗುತ್ತದೆ .
ದಕ್ಷಿಣ ಕನ್ನಡವನ್ನು ಆಹಾರ ಸಂಸ್ಕರಣಾ ಹಬ್ ಆಗಿ ಪರಿವರ್ತಿಸಿ ಇಲ್ಲಿನ ರೈತರ ಆದಾಯ…
ಬೆಂಗಳೂರಿನಲ್ಲಿ ರಿಯಾಯಿತಿ ದರದಲ್ಲಿ ಈರುಳ್ಳಿ ಮಾರಾಟಕ್ಕೆ ಭಾರತೀಯ ರಾಷ್ಟ್ರೀಯ ಸಹಕಾರಿ ಗ್ರಾಹಕರ ಒಕ್ಕೂಟ-NCCF…
ಕೃತಕ ಬುದ್ದಿಮತ್ತೆಯಲ್ಲಿ ANAB ಸಂಸ್ಥೆಯಿಂದ ಮಾನ್ಯತೆ ಪಡೆದ ವಿಶ್ವದ ಪ್ರಥಮ ಎಐ ಸುರಕ್ಷತಾ…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಲಹಂಕದಲ್ಲಿರುವ ರಾಜ್ಯದ ಪ್ರಪಥಮ ನೈಸರ್ಗಿಕ ಅನಿಲ ಆಧಾರಿತ 370…
ಬೆಳೆ ವಿಮೆ, ಫಸಲ್ ಬಿಮಾ ಯೋಜನೆ, ಬೆಳೆ ಹಾನಿ ಸೇರಿದಂತೆ ರೈತ ಪರ…
ರಾಷ್ಟ್ರೀಯ ಓಪನ್-ರಾಪಿಡ್ ರೇಟೆಡ್ ಚೆಸ್ ಪಂದ್ಯಾವಳಿ ಅಕ್ಟೋಬರ್ 2 ಮತ್ತು 3ರಂದು ಮಂಗಳೂರು…