ಕೇಂದ್ರ ಬುಡಕಟ್ಟು ಸಚಿವಾಲಯದಿಂದ ಅಕ್ಟೋಬರ್ 2 ರಂದು ಘೋಷಣೆಯಾಗಲಿರುವ ಪ್ರಧಾನಮಂತ್ರಿ ಜನಜಾತಿಯ ಉನ್ನತಿ ಗ್ರಾಮ ಅಭಿಯಾನ ಯೋಜನೆಗೆ ಗದಗ ಜಿಲ್ಲೆಯ ನಾಲ್ಕು ಗ್ರಾಮಗಳು ಹಾಗೂ ದಾವಣಗೆರೆ ಜಿಲ್ಲೆಯ 44 ಗ್ರಾಮಗಳು ಆಯ್ಕೆಯಾಗಿವೆ.
ಬುಡಕಟ್ಟು ಸಮುದಾಯಗಳ ಸಾಮಾಜಿಕ ಆರ್ಥಿಕ ಸ್ಥಿತಿಯನ್ನು ಸುಧಾರಿಸುವಲ್ಲಿ ಈ ಯೋಜನೆ ಮಹತ್ವದ ಪಾತ್ರ ವಹಿಸಲಿದೆ. ಪರಿಶಿಷ್ಟ ಪಂಗಡ ಜನಾಂಗದವರು ಹೆಚ್ಚಾಗಿರುವ ಚಿತ್ರದುರ್ಗ ಜಿಲ್ಲೆಯ ಆಯ್ದ 87 ಗ್ರಾಮಗಳನ್ನು ಪ್ರಧಾನ ಮಂತ್ರಿ ಜನಜಾತಿಯ ಉನ್ನತ ಗ್ರಾಮ ಅಭಿಯಾನದಡಿ ಅಭಿವೃದ್ಧಿಪಡಿಸಲು ಆಯ್ಕೆ ಮಾಡಲಾಗಿದ್ದು, ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಕ್ರಿಯಾ ಯೋಜನೆ ರೂಪಿಸಲಾಗಿದೆ.
ಈ ಯೋಜನೆಯಲ್ಲಿ ಪರಿಶಿಷ್ಟ ಪಂಗಡದ ಜನರಿಗೆ ಉಪಯೋಗವಾಗುವ ವಿವಿಧ 17 ಇಲಾಖೆಗಳು, 25 ಪ್ರಮುಖ ವಿಷಯಗಳನ್ನು ಒಳಗೊಂಡಿರುತ್ತದೆ. ಪರಿಶಿಷ್ಟ ಪಂಗಡದ ಜನರು ಹೆಚ್ಚು ವಾಸಿಸುವ ಗ್ರಾಮಗಳನ್ನು ಈ ಯೋಜನೆಯಡಿ ಆಯ್ಕೆ ಮಾಡಲಾಗಿದೆ. ಆಯ್ಕೆಯಾದ ಗ್ರಾಮಗಳಲ್ಲಿ ಸಂಪರ್ಕ ರಸ್ತೆ ಅಭಿವೃದ್ಧಿ, ಕುಡಿಯುವ ನೀರಿನ ವ್ಯವಸ್ಥೆ, ವಿದ್ಯುದೀಕರಣ, ಕೃಷಿ, ತೋಟಗಾರಿಕೆ, ಮೊಬೈಲ್ ಹಾಗೂ ಇಂಟರ್ನೆಟ್ ಸಂಪರ್ಕ ಮುಂತಾದ ಯೋಜನೆಗಳನ್ನು ಅನುಷ್ಠಾನ ಮಾಡಲಾಗುತ್ತದೆ .
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…
ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…