ಕೇಂದ್ರ ಬುಡಕಟ್ಟು ಸಚಿವಾಲಯದಿಂದ ಅಕ್ಟೋಬರ್ 2 ರಂದು ಘೋಷಣೆಯಾಗಲಿರುವ ಪ್ರಧಾನಮಂತ್ರಿ ಜನಜಾತಿಯ ಉನ್ನತಿ ಗ್ರಾಮ ಅಭಿಯಾನ ಯೋಜನೆಗೆ ಗದಗ ಜಿಲ್ಲೆಯ ನಾಲ್ಕು ಗ್ರಾಮಗಳು ಹಾಗೂ ದಾವಣಗೆರೆ ಜಿಲ್ಲೆಯ 44 ಗ್ರಾಮಗಳು ಆಯ್ಕೆಯಾಗಿವೆ.
ಬುಡಕಟ್ಟು ಸಮುದಾಯಗಳ ಸಾಮಾಜಿಕ ಆರ್ಥಿಕ ಸ್ಥಿತಿಯನ್ನು ಸುಧಾರಿಸುವಲ್ಲಿ ಈ ಯೋಜನೆ ಮಹತ್ವದ ಪಾತ್ರ ವಹಿಸಲಿದೆ. ಪರಿಶಿಷ್ಟ ಪಂಗಡ ಜನಾಂಗದವರು ಹೆಚ್ಚಾಗಿರುವ ಚಿತ್ರದುರ್ಗ ಜಿಲ್ಲೆಯ ಆಯ್ದ 87 ಗ್ರಾಮಗಳನ್ನು ಪ್ರಧಾನ ಮಂತ್ರಿ ಜನಜಾತಿಯ ಉನ್ನತ ಗ್ರಾಮ ಅಭಿಯಾನದಡಿ ಅಭಿವೃದ್ಧಿಪಡಿಸಲು ಆಯ್ಕೆ ಮಾಡಲಾಗಿದ್ದು, ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಕ್ರಿಯಾ ಯೋಜನೆ ರೂಪಿಸಲಾಗಿದೆ.
ಈ ಯೋಜನೆಯಲ್ಲಿ ಪರಿಶಿಷ್ಟ ಪಂಗಡದ ಜನರಿಗೆ ಉಪಯೋಗವಾಗುವ ವಿವಿಧ 17 ಇಲಾಖೆಗಳು, 25 ಪ್ರಮುಖ ವಿಷಯಗಳನ್ನು ಒಳಗೊಂಡಿರುತ್ತದೆ. ಪರಿಶಿಷ್ಟ ಪಂಗಡದ ಜನರು ಹೆಚ್ಚು ವಾಸಿಸುವ ಗ್ರಾಮಗಳನ್ನು ಈ ಯೋಜನೆಯಡಿ ಆಯ್ಕೆ ಮಾಡಲಾಗಿದೆ. ಆಯ್ಕೆಯಾದ ಗ್ರಾಮಗಳಲ್ಲಿ ಸಂಪರ್ಕ ರಸ್ತೆ ಅಭಿವೃದ್ಧಿ, ಕುಡಿಯುವ ನೀರಿನ ವ್ಯವಸ್ಥೆ, ವಿದ್ಯುದೀಕರಣ, ಕೃಷಿ, ತೋಟಗಾರಿಕೆ, ಮೊಬೈಲ್ ಹಾಗೂ ಇಂಟರ್ನೆಟ್ ಸಂಪರ್ಕ ಮುಂತಾದ ಯೋಜನೆಗಳನ್ನು ಅನುಷ್ಠಾನ ಮಾಡಲಾಗುತ್ತದೆ .
ಜಾಗತಿಕ ಮಟ್ಟದಲ್ಲಿ ಸಲ್ಫ್ಯೂರಿಕ್ ಆಸಿಡ್ ಕೊರತೆಯಿಂದ ತಾಮ್ರ ಸೇರಿದಂತೆ ಲಿಥಿಯಂ, ನಿಕೆಲ್ ಮೊದಲಾದ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಅಡಿಕೆ ಸಾಗಣೆ ಮಾಡುತ್ತಿದ್ದ ಜಾಲದ ವಿರುದ್ಧ ಮಿಜೋರಾಂನ ಚಾಂಫೈ ಜಿಲ್ಲೆಯಲ್ಲಿ…
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…