ಕೇಂದ್ರ ಬುಡಕಟ್ಟು ಸಚಿವಾಲಯದಿಂದ ಅಕ್ಟೋಬರ್ 2 ರಂದು ಘೋಷಣೆಯಾಗಲಿರುವ ಪ್ರಧಾನಮಂತ್ರಿ ಜನಜಾತಿಯ ಉನ್ನತಿ ಗ್ರಾಮ ಅಭಿಯಾನ ಯೋಜನೆಗೆ ಗದಗ ಜಿಲ್ಲೆಯ ನಾಲ್ಕು ಗ್ರಾಮಗಳು ಹಾಗೂ ದಾವಣಗೆರೆ ಜಿಲ್ಲೆಯ 44 ಗ್ರಾಮಗಳು ಆಯ್ಕೆಯಾಗಿವೆ.
ಬುಡಕಟ್ಟು ಸಮುದಾಯಗಳ ಸಾಮಾಜಿಕ ಆರ್ಥಿಕ ಸ್ಥಿತಿಯನ್ನು ಸುಧಾರಿಸುವಲ್ಲಿ ಈ ಯೋಜನೆ ಮಹತ್ವದ ಪಾತ್ರ ವಹಿಸಲಿದೆ. ಪರಿಶಿಷ್ಟ ಪಂಗಡ ಜನಾಂಗದವರು ಹೆಚ್ಚಾಗಿರುವ ಚಿತ್ರದುರ್ಗ ಜಿಲ್ಲೆಯ ಆಯ್ದ 87 ಗ್ರಾಮಗಳನ್ನು ಪ್ರಧಾನ ಮಂತ್ರಿ ಜನಜಾತಿಯ ಉನ್ನತ ಗ್ರಾಮ ಅಭಿಯಾನದಡಿ ಅಭಿವೃದ್ಧಿಪಡಿಸಲು ಆಯ್ಕೆ ಮಾಡಲಾಗಿದ್ದು, ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಕ್ರಿಯಾ ಯೋಜನೆ ರೂಪಿಸಲಾಗಿದೆ.
ಈ ಯೋಜನೆಯಲ್ಲಿ ಪರಿಶಿಷ್ಟ ಪಂಗಡದ ಜನರಿಗೆ ಉಪಯೋಗವಾಗುವ ವಿವಿಧ 17 ಇಲಾಖೆಗಳು, 25 ಪ್ರಮುಖ ವಿಷಯಗಳನ್ನು ಒಳಗೊಂಡಿರುತ್ತದೆ. ಪರಿಶಿಷ್ಟ ಪಂಗಡದ ಜನರು ಹೆಚ್ಚು ವಾಸಿಸುವ ಗ್ರಾಮಗಳನ್ನು ಈ ಯೋಜನೆಯಡಿ ಆಯ್ಕೆ ಮಾಡಲಾಗಿದೆ. ಆಯ್ಕೆಯಾದ ಗ್ರಾಮಗಳಲ್ಲಿ ಸಂಪರ್ಕ ರಸ್ತೆ ಅಭಿವೃದ್ಧಿ, ಕುಡಿಯುವ ನೀರಿನ ವ್ಯವಸ್ಥೆ, ವಿದ್ಯುದೀಕರಣ, ಕೃಷಿ, ತೋಟಗಾರಿಕೆ, ಮೊಬೈಲ್ ಹಾಗೂ ಇಂಟರ್ನೆಟ್ ಸಂಪರ್ಕ ಮುಂತಾದ ಯೋಜನೆಗಳನ್ನು ಅನುಷ್ಠಾನ ಮಾಡಲಾಗುತ್ತದೆ .
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…