MIRROR FOCUS

ವಾಡಿಕೆಯಂತೆ ಸುರಿಯದ ಮುಂಗಾರು ಮಳೆ | ಪ್ರಮುಖ ಜಲಾಶಯಕ್ಕೆ ಅತೀ ಕಡಿಮೆ ಒಳಹರಿವು |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮುಂಗಾರು ಮಳೆ ಏನೋ ಆರಂಭವಾಗಿದೆ. ಆದರೆ ನಿರೀಕ್ಷೆ ತಕ್ಕಂತೆ ಮಳೆ ಬೀಳುತ್ತಿಲ್ಲ. ಕರ್ನಾಟಕ(Karnataka) ರಾಜ್ಯಾದ್ಯಂತ ಅಲ್ಲಲ್ಲಿ ಕೆಲವು ಪ್ರದೇಶಗಳಲ್ಲಿ ಮಾತ್ರ ಮಳೆ(Rain) ಆಗುತ್ತಿದೆ. ಮೊದಲಿನ ರೀತಿ ಮುಂಗಾರು ಮಳೆ ಭಾರೀ ಆಗದಿದ್ದರೂ ಕಳೆದ ಕೆಲ ದಿನಗಳಿಂದ ಹಗುರದಿಂದ ಸಾಧಾರಣ ಮಳೆಯಂತೂ ಮುಂದುವರಿದಿದೆ. ಇದು ಈ ಭಾಗದ ಜಲಾಶಯಗಳ (Dam Water Level Today) ಮೇಲೆ ಪರಿಣಾಮ ಬೀರಿದೆ. ಹಳೆ ಮೈಸೂರು(Mysure) ಭಾಗದ ಮಂಡ್ಯ(Mandya), ಹಾಸನ(Hasan), ಚಾಮರಾಜನಗರ(Chamaraj nagara), ಕೊಡಗು(Kodagu) ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಸಾಧಾರಣ ತುಂತುರು ಮಳೆಯಾಗುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆ(IMD) ತಿಳಿಸಿದೆ.

Advertisement

ಕಬಿನಿ ಜಲಾಶಯದಲ್ಲಿ ಕಡಿಮೆಯಾದ ಒಳಹರಿವು ಮೈಸೂರು ಜಿಲ್ಲೆಯ ಹೆಚ್.ಡಿ ಕೋಟೆಯ ಕಬಿನಿ ಜಲಾಶಯಕ್ಕೆ ಒಳಹರಿವು ತೀರ ಕಡಿಮೆ ಯಾಗಿದೆ ಕಳೆದ 5 ದಿನಗಳಲ್ಲಿ 2 ಸಾವಿರ ಕ್ಯೂಸೆಕ್‌ನಷ್ಟಿದೆ. ಒಳಹರಿವು ದಿನದಿಂದ ದಿನಕ್ಕೆ ತೀರ ಕಡಿಮೆಯಾಗುತ್ತಿದೆ. 2284 ಅಡಿಗಳ ಸಾಮರ್ಥ್ಯವಿರುವ ಜಲಾಶಯದ ಇಂದಿನ ಮಟ್ಟ 2263.78 ಅಡಿಗಳಾಗಿದ್ದು, ಜಲಾಶಯಕ್ಕೆ ಕೇವಲ 549 ಕ್ಯೂಸೆಕ್‌ ನೀರು ಮಾತ್ರ ಹರಿದು ಬರುತ್ತಿದೆ. ಜಲಾಶಯದಿಂದ 300 ಕ್ಯೂಸೆಕ್‌ ನೀರನ್ನು ಅನೇಕ ಉದ್ದೇಶಗಳಿಗೆ ಜಲಾಶಯದಿಂದ ಹೊರ ಹರಿಸಲಾಗುತ್ತಿದೆ. ಜಲಾಶಯಕ್ಕೆ ಮುಂಗಾರು ಶುರುವಾದ ನಂತರ ಇದೇ ಮೊದಲ ಬಾರಿಗೆ ಇಷ್ಟು ಕಡಿಮೆ ಒಳಹರಿವು ಹರಿದು ಬರುತ್ತಿದೆ.

ಕೆಆರ್‌ಎಸ್ ಜಲಾಶಯದ ಇಂದಿನ ನೀರಿನ ಮಟ್ಟ : ಇನ್ನು ಮಂಡ್ಯ ಜಿಲ್ಲೆಯ ಕೆಆರ್‌ಎಸ್ ಜಲಾಶಯದ ಒಳಹರಿವಿನ ಮಟ್ಟ 2 ಸಾವಿರ ಕ್ಯೂಸೆಕ್‌ ಗಡಿ ದಾಟಿದೆ. 124.80 ಅಡಿಗಳ ಸಾಮರ್ಥ್ಯವಿರುವ ಜಲಾಶಯದ ಇಂದಿನ ಮಟ್ಟ 87 ಅಡಿಗಳಾಗಿದೆ. ಜಲಾಶಯಕ್ಕೆ 2120 ಕ್ಯೂಸೆಕ್‌ ನೀರು ಹರಿದು ಬರುತ್ತಿದ್ದು, ಜಲಾಶಯದಿಂದ 461 ಕ್ಯೂಸೆಕ್‌ ನೀರನ್ನು ಹೊರಬಿಡಲಾಗುತ್ತಿದೆ. ರಾಜ್ಯದ ಹಲವೆಡೆ ಮಳೆ ಕ್ಷೀಣಿಸುತ್ತಿದೆ ಅನ್ನೋವಾಗಲೇ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಳೆ ಮುಂದುವರೆಯುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಜೂನ್‌ 16 ರಿಂದ ಜೂನ್‌ 20 ರವರೆಗೆ ಭಾರೀ ಗಾಳಿ, ಮಿಂಚು ಹಾಗೂ ಗುಡುಗು ಸಹಿತ ಜೋರಾಗಿ ಮಳೆ ಸುರಿಯುವ ಸಾಧ್ಯತೆ ಇದೆ. ಈ ಹಿನ್ನೆಲೆ 5 ದಿವಸಗಳ ಕಾಲ ಉತ್ತರ ಒಳನಾಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.  ಕಲಬುರಗಿ, ಗದಗ, ಯಾದಗಿರಿ, ಧಾರವಾಡ, ಬೆಳಗಾವಿ, ವಿಜಯಪುರ, ಬಾಗಲಕೋಟೆ, ರಾಯಚೂರು ಮುಂತಾದ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಇನ್ನೊಂದೆಡೆ ಬೆಂಗಳೂರು ನಗರ ಸಹಿತ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಒಣಹವೆ ಸ್ವಲ್ಪ ಮಟ್ಟಿಗೆ ಕಾಣಿಸಿಕೊಂಡಿದೆ. ಮುಂಗಾರು ಮಳೆ ಜೂನ್‌ 2 ರಂದು ಆಗಮಿಸಿದ್ದರೂ ಹೆಚ್ಚಿನ ಪ್ರಭಾವ ಬೀರಿಲ್ಲ. ಇದರಿಂದ ಮಳೆ ಪ್ರಮಾಣವೂ ಕಡಿಮೆಯಾಗುತ್ತಿದೆ. ಆದರೂ ಮೇ ಹಾಗೂ ಜೂನ್‌ ತಿಂಗಳಲ್ಲಿ ಇದುವರೆಗೆ ವಾಡಿಕೆಗಿಂತ ಹೆಚ್ಚಿನ ಮಳೆಯಾಗಿದೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹಕ್ಕಿಗಳಿಗೆ ಗೂಡುಕಟ್ಟುವ ಪರಿಸರ ಪ್ರೇಮಿ..

ಹಕ್ಕಿಗಳಿಗೆ ಗೂಡುಕಟ್ಟುವ ಮೂಲಕ ಪರಿಸರ ಸಂರಕ್ಷಣೆಗೆ ಪಣತೊಟ್ಟಿರುವ ದಂಪತಿಗಳು ಬಂಟ್ವಾಳ ತಾಲೂಕಿನಲ್ಲಿದ್ದಾರೆ. ಇವರ…

7 hours ago

ಭಾರತದಿಂದ ಅಡಿಕೆಯ ರಫ್ತು ಎಷ್ಟಾಗುತ್ತದೆ…? ಹೇಗಾಗುತ್ತದೆ…?

ಜಾಗತಿಕ ಮಟ್ಟದಲ್ಲಿ ಅಡಿಕೆ ಬೆಳೆಯ ವಿಸ್ತೀರ್ಣ ಮತ್ತು ಉತ್ಪಾದನೆಯಲ್ಲಿ ಭಾರತ ಮೊದಲನೇ ಸ್ಥಾನದಲ್ಲಿದೆ.ಇನ್ನು…

9 hours ago

ಮಹಾರಾಷ್ಟ್ರ ಸರ್ಕಾರ ಕೃಷಿ ಕ್ಷೇತ್ರದಲ್ಲಿ 25,000 ಕೋಟಿ ರೂ. ಹೂಡಿಕೆ ಮಾಡಲಿದೆ

ಕೃಷಿಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಮಹಾರಾಷ್ಟ್ರ  ರಾಜ್ಯ ಸರ್ಕಾರವು ಮುಂದಿನ ಐದು ವರ್ಷಗಳಲ್ಲಿ ಕೃಷಿ…

10 hours ago

ಆಶ್ಲೇಷ ನಕ್ಷತ್ರದಲ್ಲಿ ಬುಧ: ಈ 4 ರಾಶಿಗೆ ಹೆಜ್ಜೆ ಹೆಜ್ಜೆಗೂ ಕಂಟಕ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

10 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ದರ್ಶಿತ್‌ ಕೆ ಎಸ್

ದರ್ಶಿತ್‌ ಕೆ ಎಸ್‌, 3 ನೇ ತರಗತಿ, ಜ್ಞಾನಗಂಗಾ ಸೆಂಟ್ರಲ್‌ ಸ್ಕೂಲ್‌, ಬೆಳ್ಳಾರೆದರ್ಶಿತ್‌…

18 hours ago

ಕೋವಿಡ್ ಲಸಿಕೆಯಿಂದ ಹೃದಯಾಘಾತ ಸಂಭವಿಸುತ್ತಿಲ್ಲ | ಸಚಿವ ದಿನೇಶ್ ಗುಂಡೂರಾವ್

ರಾಜ್ಯದಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ವರದಿ ನೀಡಲು ರಚಿಸಲಾಗಿದ್ದ ತಜ್ಞರ ಸಮಿತಿ…

19 hours ago