ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಮಳೆಯಾಗಿದೆ. ಚಿಕ್ಕಮಗಳೂರು ನಗರ ಸೇರಿದಂತೆ ಜಿಲ್ಲೆಯ ಮಲೆನಾಡು ಹಾಗೂ ಗಿರಿ ಪ್ರದೇಶಗಳಲ್ಲಿ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆ ಸುರಿಯುತ್ತಿದ್ದು, ಆಕಾಲಿಕ ಮಳೆಯಿಂದ ಕೃಷಿ ಚಟುವಟಿಕೆಗಳಿಗೆ ಅಡಚಣೆ ಉಂಟಾಗಿದೆ.
ಮೂಡಿಗೆರೆ, ಕಳಸ, ಬಾಳೆಹೊನ್ನೂರು ಸುತ್ತಮುತ್ತಲ ಪ್ರದೇಶಗಳಲ್ಲಿ ಮಳೆಯಾಗಿದ್ದು, ಹಲವೆಡೆ ಕೊಯ್ಲು ಮಾಡಿ ಒಣ ಹಾಕಿದ್ದ ಕಾಫಿ ಬೆಳೆಗಳು ನೀರಿಗೆ ಕೊಚ್ಚಿಹೋಗಿರುವ ವರದಿಗಳಿವೆ. ನಿರಂತರ ಮಳೆಯು ಮುಂದುವರಿದರೆ ಗಿಡದಲ್ಲಿರುವ ಕಾಫಿ ಉದುರುವ ಸಾಧ್ಯತೆ ಇರುವುದಲ್ಲದೆ, ಕೊಯ್ಲು ಮಾಡಿದ ಕಾಫಿಯನ್ನು ಸರಿಯಾಗಿ ಒಣಗಿಸಲು ಸಾಧ್ಯವಾಗದೇ ಗುಣಮಟ್ಟ ಕುಸಿಯುವ ಭೀತಿ ಎದುರಾಗಿದೆ ಎಂದು ಕಾಫಿ ಬೆಳೆಗಾರರು ಆತಂಕ ವ್ಯಕ್ತಪಡಿಸಿದ್ದಾರೆ.
ಇದೇ ವೇಳೆ, ಅಡಿಕೆ ಕೃಷಿಕರೂ ಮಳೆಯ ಪರಿಣಾಮದಿಂದ ಸಂಕಷ್ಟಕ್ಕೆ ಒಳಗಾಗುತ್ತಿದ್ದಾರೆ. ಅಡಿಕೆ ತೋಟಗಳಲ್ಲಿ ಹೆಚ್ಚಿದ ತೇವಾಂಶದಿಂದ ಕಾಯಿ ಉದುರುವಿಕೆ, ಶಿಲೀಂಧ್ರ ರೋಗಗಳ ಹರಡುವಿಕೆ ಹಾಗೂ ಒಣಗಿಸುವ ಹಂತದಲ್ಲಿ ತೊಂದರೆಗಳು ಉಂಟಾಗುವ ಸಾಧ್ಯತೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
ಕೃಷಿಕರ ಪ್ರಕಾರ, ಹವಾಮಾನದಲ್ಲಿ ಸ್ಥಿರತೆ ಇಲ್ಲದಿರುವುದರಿಂದ ಕೊಯ್ಲು, ಒಣಗಿಸುವಿಕೆ ಮತ್ತು ಮಾರುಕಟ್ಟೆ ಸಾಗಣೆಯ ಹಂತಗಳಲ್ಲೂ ಸಂಕಷ್ಟ ಇದೆ. ಮುಂದಿನ ದಿನ ಕೆಲವು ದಿನಗಳಲ್ಲಿ ಮಳೆ ತಗ್ಗದಿದ್ದರೆ ಕಾಫಿ ಹಾಗೂ ಅಡಿಕೆ ಎರಡೂ ಬೆಳೆಗಳಿಗೆ ನಷ್ಟದ ಪ್ರಮಾಣ ಹೆಚ್ಚಾಗುವ ಆತಂಕವಿದೆ.
ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…
PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…
ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…
ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…
ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…
ಭಾರತದ ತೆಂಗು ವಲಯ ಈಗ ಕಾಯಿ ಮಾರಾಟದಿಂದ ಮೌಲ್ಯವರ್ಧಿತ ಉತ್ಪನ್ನಗಳ ಜಾಗತಿಕ ಮಾರುಕಟ್ಟೆಯತ್ತ…