ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಮಳೆಯಾಗಿದೆ. ಚಿಕ್ಕಮಗಳೂರು ನಗರ ಸೇರಿದಂತೆ ಜಿಲ್ಲೆಯ ಮಲೆನಾಡು ಹಾಗೂ ಗಿರಿ ಪ್ರದೇಶಗಳಲ್ಲಿ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆ ಸುರಿಯುತ್ತಿದ್ದು, ಆಕಾಲಿಕ ಮಳೆಯಿಂದ ಕೃಷಿ ಚಟುವಟಿಕೆಗಳಿಗೆ ಅಡಚಣೆ ಉಂಟಾಗಿದೆ.
ಮೂಡಿಗೆರೆ, ಕಳಸ, ಬಾಳೆಹೊನ್ನೂರು ಸುತ್ತಮುತ್ತಲ ಪ್ರದೇಶಗಳಲ್ಲಿ ಮಳೆಯಾಗಿದ್ದು, ಹಲವೆಡೆ ಕೊಯ್ಲು ಮಾಡಿ ಒಣ ಹಾಕಿದ್ದ ಕಾಫಿ ಬೆಳೆಗಳು ನೀರಿಗೆ ಕೊಚ್ಚಿಹೋಗಿರುವ ವರದಿಗಳಿವೆ. ನಿರಂತರ ಮಳೆಯು ಮುಂದುವರಿದರೆ ಗಿಡದಲ್ಲಿರುವ ಕಾಫಿ ಉದುರುವ ಸಾಧ್ಯತೆ ಇರುವುದಲ್ಲದೆ, ಕೊಯ್ಲು ಮಾಡಿದ ಕಾಫಿಯನ್ನು ಸರಿಯಾಗಿ ಒಣಗಿಸಲು ಸಾಧ್ಯವಾಗದೇ ಗುಣಮಟ್ಟ ಕುಸಿಯುವ ಭೀತಿ ಎದುರಾಗಿದೆ ಎಂದು ಕಾಫಿ ಬೆಳೆಗಾರರು ಆತಂಕ ವ್ಯಕ್ತಪಡಿಸಿದ್ದಾರೆ.
ಇದೇ ವೇಳೆ, ಅಡಿಕೆ ಕೃಷಿಕರೂ ಮಳೆಯ ಪರಿಣಾಮದಿಂದ ಸಂಕಷ್ಟಕ್ಕೆ ಒಳಗಾಗುತ್ತಿದ್ದಾರೆ. ಅಡಿಕೆ ತೋಟಗಳಲ್ಲಿ ಹೆಚ್ಚಿದ ತೇವಾಂಶದಿಂದ ಕಾಯಿ ಉದುರುವಿಕೆ, ಶಿಲೀಂಧ್ರ ರೋಗಗಳ ಹರಡುವಿಕೆ ಹಾಗೂ ಒಣಗಿಸುವ ಹಂತದಲ್ಲಿ ತೊಂದರೆಗಳು ಉಂಟಾಗುವ ಸಾಧ್ಯತೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
ಕೃಷಿಕರ ಪ್ರಕಾರ, ಹವಾಮಾನದಲ್ಲಿ ಸ್ಥಿರತೆ ಇಲ್ಲದಿರುವುದರಿಂದ ಕೊಯ್ಲು, ಒಣಗಿಸುವಿಕೆ ಮತ್ತು ಮಾರುಕಟ್ಟೆ ಸಾಗಣೆಯ ಹಂತಗಳಲ್ಲೂ ಸಂಕಷ್ಟ ಇದೆ. ಮುಂದಿನ ದಿನ ಕೆಲವು ದಿನಗಳಲ್ಲಿ ಮಳೆ ತಗ್ಗದಿದ್ದರೆ ಕಾಫಿ ಹಾಗೂ ಅಡಿಕೆ ಎರಡೂ ಬೆಳೆಗಳಿಗೆ ನಷ್ಟದ ಪ್ರಮಾಣ ಹೆಚ್ಚಾಗುವ ಆತಂಕವಿದೆ.
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…
ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…
ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…
ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್ ಪೂರೈಕೆಯ…