#NoRain| ಮಹಾರಾಷ್ಟ್ರದಲ್ಲಿ ಎಂದಿನಂತೆ ಬಾರದ ಮಳೆ : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮಳೆ ಕೊರತೆ : ಭಾರಿ ನೀರಿನ ಅಭಾವ ಸಾಧ್ಯತೆ

July 8, 2023
10:52 AM
ಮಹರಾಷ್ಟ್ರದಲ್ಲಿ ಮಳೆಯ ಕೊರತೆ, ಉತ್ತರ ಕರ್ನಾಟಕದಲ್ಲಿ ನೀರಿನ ಅಭಾವ ಹಿನ್ನೆಲೆ ಜಲಾಶಯಗಳ ನೀರನ್ನು ಕುಡಿಯಲು ಮಾತ್ರ ಬಳಸುವಂತೆ ಪ್ರಾದೇಶಿಕ ಆಯುಕ್ತ ನಿತೇಶ ಪಾಟೀಲ್ ಸೂಚನೆ

ಮುಂಗಾರು ಮಳೆ ವಾಡಿಕೆಗಿಂತ ತಡವಾಗಿ ರಾಜ್ಯಕ್ಕೆ ಬಂದರು ಕರ್ನಾಟಕದ ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಭರ್ಜರಿ ಮಳೆ#Rainಯಾಗುತ್ತಿದೆ. ಆದರೆ ಉತ್ತರ ಕರ್ನಾಟಕ#North karnataka ಭಾಗದಲ್ಲಿ ಮಳೆಯ ತೀವ್ರ ಕೊರತೆ ಉಂಟಾಗಿದೆ.

ಹೀಗಾಗಿ ಜಲಾಶಯಗಳ ನೀರನ್ನು ಕುಡಿಯಲು ಮಾತ್ರ ಬಳಸುವಂತೆ ಆಲಮಟ್ಟಿ, ಘಟಪ್ರಭಾ, ಮಲಪ್ರಭಾ ಜಲಾಶಯ ಅಧಿಕಾರಿಗಳಿಗೆ ಬೆಳಗಾವಿ ಪ್ರಾದೇಶಿಕ ಆಯುಕ್ತ ನಿತೇಶ ಪಾಟೀಲ್ ಸೂಚನೆ ನೀಡಿದ್ದಾರೆ.  ಬೆಳಗಾವಿ ವಿಭಾಗದ ಏಳು ಜಿಲ್ಲೆಗಳಲ್ಲಿ ಮಳೆಯ ತೀವ್ರ ಕೊರತೆ ಉಂಟಾಗಿದೆ. ಹೀಗಾಗಿ ಕುಡಿಯುವ ನೀರಿನ ಸಮಸ್ಯೆ ನೀಗಿಸುವ ಉದ್ದೇಶದಿಂದ ಬೆಳಗಾವಿ ಪ್ರಾದೇಶಿಕ ಆಯುಕ್ತ ಸಭೆ ನಡೆಸಲಾಗಿದೆ.

ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿಯೂ ಮಳೆಯ ಅಭಾವ ಉಂಟಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ವಾಡಿಕೆ ಮಳೆ 175 ಮಿ. ಮೀ ಆಗಿದ್ದು, ವಾಸ್ತವಿಕ 71 ಮಿ.ಮೀ ಆಗಿದೆ. ಹೀಗಾಗಿ ಶೇಕಡಾ -60ರಷ್ಟು ಕೊರತೆ ಉಂಟಾಗಿದೆ.

ಬಾಗಲಕೋಟೆ – ಬಾಗಲಕೋಟೆಯಲ್ಲಿ ವಾಡಿಕೆ 94 ಮಿ. ಮೀ ಮಳೆಯಾಗಬೇಕಿತ್ತು. ಆದರೆ 31 ಮಿ.ಮೀ ಮಳೆ ಆಗಿದ್ದು, ಶೇಕಡಾ 67ರಷ್ಟು ಮಳೆಯ ಕೊರತೆ ಉಂಟಾಗಿದೆ.
ವಿಜಯಪುರ – ವಿಜಯಪುರದಲ್ಲಿ ವಾಡಿಕೆ 98 ಮಿ. ಮೀಮಳೆಯಾಗಬೇಕಿತ್ತು. ಆದರೆ 47 ಮಿ.ಮೀ ಮಳೆಯಾಗಿದ್ದು, ಶೇಕಡಾ 52 ರಷ್ಟು ಮಳೆಯ ಕೊರತೆಯಾಗಿದೆ.
ಗದಗ – ಗದಗದಲ್ಲಿ ವಾಡಿಕೆ 95 ಮಿ.‌ಮೀ ಮಳೆಯಾಗಬೇಕಿತ್ತು. ಆದರೆ 65 ಮಿ.ಮೀ ಮಳೆಯಾಗಿದ್ದು, ಶೇಕಡಾ 32 ರಷ್ಟು ಮಳೆಯ ಕೊರತೆ ಉಂಟಾಗಿದೆ.

ಹಾವೇರಿ – ಹಾವೇರಿಯಲ್ಲಿ ವಾಡಿಕೆ 146 ಮಿ. ಮೀ ಮಳೆಯಾಗಬೇಕಿತ್ತು. ಆದರೆ 75 ಮಿ.ಮೀ.ಮಳೆಯಾಗಿದೆ. ಶೇಕಡಾ 49 ರಷ್ಟು ಮಳೆಯ ಕೊರತೆಯಾಗಿದೆ.

ಧಾರವಾಡ – ಧಾರವಾಡದಲ್ಲಿ ವಾಡಿಕೆ 147 ಮಿ. ಮೀ ಮಳೆಯಾಗಬೇಕಿತ್ತು. ಆದರೆ  71 ಮಿ.ಮೀ ಮಳೆಯಾಗಿದೆ. ಶೇಕಡಾ 51 ರಷ್ಟು ಮಳೆಯ ಕೊರತೆ ಉಂಟಾಗಿದೆ.

ಉತ್ತರ ಕನ್ನಡ – ಉತ್ತರ ಕನ್ನಡದ ವಾಡಿಕೆ ಮಳೆ 859 ಮಿ.ಮೀ ಆಗಿದ್ದು, ಸದ್ಯ 506 ಮಿ.ಮೀ ಮಳೆ ಆಗಿದೆ. ಈವರೆಗೆ ಶೇಕಡಾ 41 ರಷ್ಟು ಮಳೆಯ ಕೊರತೆ ಉಂಟಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!
March 24, 2026
12:24 PM
by: ಸಾಯಿಶೇಖರ್ ಕರಿಕಳ
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ
March 24, 2026
7:12 AM
by: ಮಿರರ್‌ ಡೆಸ್ಕ್
ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ
March 23, 2026
10:18 PM
by: ದ ರೂರಲ್ ಮಿರರ್.ಕಾಂ
ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ
March 23, 2026
9:12 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror