#NoRain| ಮಹಾರಾಷ್ಟ್ರದಲ್ಲಿ ಎಂದಿನಂತೆ ಬಾರದ ಮಳೆ : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮಳೆ ಕೊರತೆ : ಭಾರಿ ನೀರಿನ ಅಭಾವ ಸಾಧ್ಯತೆ

July 8, 2023
10:52 AM
ಮಹರಾಷ್ಟ್ರದಲ್ಲಿ ಮಳೆಯ ಕೊರತೆ, ಉತ್ತರ ಕರ್ನಾಟಕದಲ್ಲಿ ನೀರಿನ ಅಭಾವ ಹಿನ್ನೆಲೆ ಜಲಾಶಯಗಳ ನೀರನ್ನು ಕುಡಿಯಲು ಮಾತ್ರ ಬಳಸುವಂತೆ ಪ್ರಾದೇಶಿಕ ಆಯುಕ್ತ ನಿತೇಶ ಪಾಟೀಲ್ ಸೂಚನೆ

ಮುಂಗಾರು ಮಳೆ ವಾಡಿಕೆಗಿಂತ ತಡವಾಗಿ ರಾಜ್ಯಕ್ಕೆ ಬಂದರು ಕರ್ನಾಟಕದ ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಭರ್ಜರಿ ಮಳೆ#Rainಯಾಗುತ್ತಿದೆ. ಆದರೆ ಉತ್ತರ ಕರ್ನಾಟಕ#North karnataka ಭಾಗದಲ್ಲಿ ಮಳೆಯ ತೀವ್ರ ಕೊರತೆ ಉಂಟಾಗಿದೆ.

ಹೀಗಾಗಿ ಜಲಾಶಯಗಳ ನೀರನ್ನು ಕುಡಿಯಲು ಮಾತ್ರ ಬಳಸುವಂತೆ ಆಲಮಟ್ಟಿ, ಘಟಪ್ರಭಾ, ಮಲಪ್ರಭಾ ಜಲಾಶಯ ಅಧಿಕಾರಿಗಳಿಗೆ ಬೆಳಗಾವಿ ಪ್ರಾದೇಶಿಕ ಆಯುಕ್ತ ನಿತೇಶ ಪಾಟೀಲ್ ಸೂಚನೆ ನೀಡಿದ್ದಾರೆ.  ಬೆಳಗಾವಿ ವಿಭಾಗದ ಏಳು ಜಿಲ್ಲೆಗಳಲ್ಲಿ ಮಳೆಯ ತೀವ್ರ ಕೊರತೆ ಉಂಟಾಗಿದೆ. ಹೀಗಾಗಿ ಕುಡಿಯುವ ನೀರಿನ ಸಮಸ್ಯೆ ನೀಗಿಸುವ ಉದ್ದೇಶದಿಂದ ಬೆಳಗಾವಿ ಪ್ರಾದೇಶಿಕ ಆಯುಕ್ತ ಸಭೆ ನಡೆಸಲಾಗಿದೆ.

ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿಯೂ ಮಳೆಯ ಅಭಾವ ಉಂಟಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ವಾಡಿಕೆ ಮಳೆ 175 ಮಿ. ಮೀ ಆಗಿದ್ದು, ವಾಸ್ತವಿಕ 71 ಮಿ.ಮೀ ಆಗಿದೆ. ಹೀಗಾಗಿ ಶೇಕಡಾ -60ರಷ್ಟು ಕೊರತೆ ಉಂಟಾಗಿದೆ.

ಬಾಗಲಕೋಟೆ – ಬಾಗಲಕೋಟೆಯಲ್ಲಿ ವಾಡಿಕೆ 94 ಮಿ. ಮೀ ಮಳೆಯಾಗಬೇಕಿತ್ತು. ಆದರೆ 31 ಮಿ.ಮೀ ಮಳೆ ಆಗಿದ್ದು, ಶೇಕಡಾ 67ರಷ್ಟು ಮಳೆಯ ಕೊರತೆ ಉಂಟಾಗಿದೆ.
ವಿಜಯಪುರ – ವಿಜಯಪುರದಲ್ಲಿ ವಾಡಿಕೆ 98 ಮಿ. ಮೀಮಳೆಯಾಗಬೇಕಿತ್ತು. ಆದರೆ 47 ಮಿ.ಮೀ ಮಳೆಯಾಗಿದ್ದು, ಶೇಕಡಾ 52 ರಷ್ಟು ಮಳೆಯ ಕೊರತೆಯಾಗಿದೆ.
ಗದಗ – ಗದಗದಲ್ಲಿ ವಾಡಿಕೆ 95 ಮಿ.‌ಮೀ ಮಳೆಯಾಗಬೇಕಿತ್ತು. ಆದರೆ 65 ಮಿ.ಮೀ ಮಳೆಯಾಗಿದ್ದು, ಶೇಕಡಾ 32 ರಷ್ಟು ಮಳೆಯ ಕೊರತೆ ಉಂಟಾಗಿದೆ.

ಹಾವೇರಿ – ಹಾವೇರಿಯಲ್ಲಿ ವಾಡಿಕೆ 146 ಮಿ. ಮೀ ಮಳೆಯಾಗಬೇಕಿತ್ತು. ಆದರೆ 75 ಮಿ.ಮೀ.ಮಳೆಯಾಗಿದೆ. ಶೇಕಡಾ 49 ರಷ್ಟು ಮಳೆಯ ಕೊರತೆಯಾಗಿದೆ.

ಧಾರವಾಡ – ಧಾರವಾಡದಲ್ಲಿ ವಾಡಿಕೆ 147 ಮಿ. ಮೀ ಮಳೆಯಾಗಬೇಕಿತ್ತು. ಆದರೆ  71 ಮಿ.ಮೀ ಮಳೆಯಾಗಿದೆ. ಶೇಕಡಾ 51 ರಷ್ಟು ಮಳೆಯ ಕೊರತೆ ಉಂಟಾಗಿದೆ.

ಉತ್ತರ ಕನ್ನಡ – ಉತ್ತರ ಕನ್ನಡದ ವಾಡಿಕೆ ಮಳೆ 859 ಮಿ.ಮೀ ಆಗಿದ್ದು, ಸದ್ಯ 506 ಮಿ.ಮೀ ಮಳೆ ಆಗಿದೆ. ಈವರೆಗೆ ಶೇಕಡಾ 41 ರಷ್ಟು ಮಳೆಯ ಕೊರತೆ ಉಂಟಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್
July 20, 2026
10:18 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ
July 19, 2026
10:17 PM
by: ದ ರೂರಲ್ ಮಿರರ್.ಕಾಂ
ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ
July 19, 2026
9:41 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ತೆಂಗಿನ ನಾಡಿನಲ್ಲಿ ಅಡಿಕೆ ಕ್ರಾಂತಿ….! ತುಮಕೂರಿನಲ್ಲಿ ಅಡಿಕೆ ಸಸಿಗಳಿಗೆ ಭಾರೀ ಬೇಡಿಕೆ
July 19, 2026
8:42 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror