ಮುಂಗಾರು ಮಳೆ ವಾಡಿಕೆಗಿಂತ ತಡವಾಗಿ ರಾಜ್ಯಕ್ಕೆ ಬಂದರು ಕರ್ನಾಟಕದ ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಭರ್ಜರಿ ಮಳೆ#Rainಯಾಗುತ್ತಿದೆ. ಆದರೆ ಉತ್ತರ ಕರ್ನಾಟಕ#North karnataka ಭಾಗದಲ್ಲಿ ಮಳೆಯ ತೀವ್ರ ಕೊರತೆ ಉಂಟಾಗಿದೆ.
ಹೀಗಾಗಿ ಜಲಾಶಯಗಳ ನೀರನ್ನು ಕುಡಿಯಲು ಮಾತ್ರ ಬಳಸುವಂತೆ ಆಲಮಟ್ಟಿ, ಘಟಪ್ರಭಾ, ಮಲಪ್ರಭಾ ಜಲಾಶಯ ಅಧಿಕಾರಿಗಳಿಗೆ ಬೆಳಗಾವಿ ಪ್ರಾದೇಶಿಕ ಆಯುಕ್ತ ನಿತೇಶ ಪಾಟೀಲ್ ಸೂಚನೆ ನೀಡಿದ್ದಾರೆ. ಬೆಳಗಾವಿ ವಿಭಾಗದ ಏಳು ಜಿಲ್ಲೆಗಳಲ್ಲಿ ಮಳೆಯ ತೀವ್ರ ಕೊರತೆ ಉಂಟಾಗಿದೆ. ಹೀಗಾಗಿ ಕುಡಿಯುವ ನೀರಿನ ಸಮಸ್ಯೆ ನೀಗಿಸುವ ಉದ್ದೇಶದಿಂದ ಬೆಳಗಾವಿ ಪ್ರಾದೇಶಿಕ ಆಯುಕ್ತ ಸಭೆ ನಡೆಸಲಾಗಿದೆ.
ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿಯೂ ಮಳೆಯ ಅಭಾವ ಉಂಟಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ವಾಡಿಕೆ ಮಳೆ 175 ಮಿ. ಮೀ ಆಗಿದ್ದು, ವಾಸ್ತವಿಕ 71 ಮಿ.ಮೀ ಆಗಿದೆ. ಹೀಗಾಗಿ ಶೇಕಡಾ -60ರಷ್ಟು ಕೊರತೆ ಉಂಟಾಗಿದೆ.
ಹಾವೇರಿ – ಹಾವೇರಿಯಲ್ಲಿ ವಾಡಿಕೆ 146 ಮಿ. ಮೀ ಮಳೆಯಾಗಬೇಕಿತ್ತು. ಆದರೆ 75 ಮಿ.ಮೀ.ಮಳೆಯಾಗಿದೆ. ಶೇಕಡಾ 49 ರಷ್ಟು ಮಳೆಯ ಕೊರತೆಯಾಗಿದೆ.
ಧಾರವಾಡ – ಧಾರವಾಡದಲ್ಲಿ ವಾಡಿಕೆ 147 ಮಿ. ಮೀ ಮಳೆಯಾಗಬೇಕಿತ್ತು. ಆದರೆ 71 ಮಿ.ಮೀ ಮಳೆಯಾಗಿದೆ. ಶೇಕಡಾ 51 ರಷ್ಟು ಮಳೆಯ ಕೊರತೆ ಉಂಟಾಗಿದೆ.
ಉತ್ತರ ಕನ್ನಡ – ಉತ್ತರ ಕನ್ನಡದ ವಾಡಿಕೆ ಮಳೆ 859 ಮಿ.ಮೀ ಆಗಿದ್ದು, ಸದ್ಯ 506 ಮಿ.ಮೀ ಮಳೆ ಆಗಿದೆ. ಈವರೆಗೆ ಶೇಕಡಾ 41 ರಷ್ಟು ಮಳೆಯ ಕೊರತೆ ಉಂಟಾಗಿದೆ.
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…
ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…