Advertisement
ಪ್ರಮುಖ

#NoRain| ಮಹಾರಾಷ್ಟ್ರದಲ್ಲಿ ಎಂದಿನಂತೆ ಬಾರದ ಮಳೆ : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮಳೆ ಕೊರತೆ : ಭಾರಿ ನೀರಿನ ಅಭಾವ ಸಾಧ್ಯತೆ

Share

ಮುಂಗಾರು ಮಳೆ ವಾಡಿಕೆಗಿಂತ ತಡವಾಗಿ ರಾಜ್ಯಕ್ಕೆ ಬಂದರು ಕರ್ನಾಟಕದ ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಭರ್ಜರಿ ಮಳೆ#Rainಯಾಗುತ್ತಿದೆ. ಆದರೆ ಉತ್ತರ ಕರ್ನಾಟಕ#North karnataka ಭಾಗದಲ್ಲಿ ಮಳೆಯ ತೀವ್ರ ಕೊರತೆ ಉಂಟಾಗಿದೆ.

ಹೀಗಾಗಿ ಜಲಾಶಯಗಳ ನೀರನ್ನು ಕುಡಿಯಲು ಮಾತ್ರ ಬಳಸುವಂತೆ ಆಲಮಟ್ಟಿ, ಘಟಪ್ರಭಾ, ಮಲಪ್ರಭಾ ಜಲಾಶಯ ಅಧಿಕಾರಿಗಳಿಗೆ ಬೆಳಗಾವಿ ಪ್ರಾದೇಶಿಕ ಆಯುಕ್ತ ನಿತೇಶ ಪಾಟೀಲ್ ಸೂಚನೆ ನೀಡಿದ್ದಾರೆ.  ಬೆಳಗಾವಿ ವಿಭಾಗದ ಏಳು ಜಿಲ್ಲೆಗಳಲ್ಲಿ ಮಳೆಯ ತೀವ್ರ ಕೊರತೆ ಉಂಟಾಗಿದೆ. ಹೀಗಾಗಿ ಕುಡಿಯುವ ನೀರಿನ ಸಮಸ್ಯೆ ನೀಗಿಸುವ ಉದ್ದೇಶದಿಂದ ಬೆಳಗಾವಿ ಪ್ರಾದೇಶಿಕ ಆಯುಕ್ತ ಸಭೆ ನಡೆಸಲಾಗಿದೆ.

ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿಯೂ ಮಳೆಯ ಅಭಾವ ಉಂಟಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ವಾಡಿಕೆ ಮಳೆ 175 ಮಿ. ಮೀ ಆಗಿದ್ದು, ವಾಸ್ತವಿಕ 71 ಮಿ.ಮೀ ಆಗಿದೆ. ಹೀಗಾಗಿ ಶೇಕಡಾ -60ರಷ್ಟು ಕೊರತೆ ಉಂಟಾಗಿದೆ.

ಬಾಗಲಕೋಟೆ – ಬಾಗಲಕೋಟೆಯಲ್ಲಿ ವಾಡಿಕೆ 94 ಮಿ. ಮೀ ಮಳೆಯಾಗಬೇಕಿತ್ತು. ಆದರೆ 31 ಮಿ.ಮೀ ಮಳೆ ಆಗಿದ್ದು, ಶೇಕಡಾ 67ರಷ್ಟು ಮಳೆಯ ಕೊರತೆ ಉಂಟಾಗಿದೆ.
ವಿಜಯಪುರ – ವಿಜಯಪುರದಲ್ಲಿ ವಾಡಿಕೆ 98 ಮಿ. ಮೀಮಳೆಯಾಗಬೇಕಿತ್ತು. ಆದರೆ 47 ಮಿ.ಮೀ ಮಳೆಯಾಗಿದ್ದು, ಶೇಕಡಾ 52 ರಷ್ಟು ಮಳೆಯ ಕೊರತೆಯಾಗಿದೆ.
ಗದಗ – ಗದಗದಲ್ಲಿ ವಾಡಿಕೆ 95 ಮಿ.‌ಮೀ ಮಳೆಯಾಗಬೇಕಿತ್ತು. ಆದರೆ 65 ಮಿ.ಮೀ ಮಳೆಯಾಗಿದ್ದು, ಶೇಕಡಾ 32 ರಷ್ಟು ಮಳೆಯ ಕೊರತೆ ಉಂಟಾಗಿದೆ.

ಹಾವೇರಿ – ಹಾವೇರಿಯಲ್ಲಿ ವಾಡಿಕೆ 146 ಮಿ. ಮೀ ಮಳೆಯಾಗಬೇಕಿತ್ತು. ಆದರೆ 75 ಮಿ.ಮೀ.ಮಳೆಯಾಗಿದೆ. ಶೇಕಡಾ 49 ರಷ್ಟು ಮಳೆಯ ಕೊರತೆಯಾಗಿದೆ.

ಧಾರವಾಡ – ಧಾರವಾಡದಲ್ಲಿ ವಾಡಿಕೆ 147 ಮಿ. ಮೀ ಮಳೆಯಾಗಬೇಕಿತ್ತು. ಆದರೆ  71 ಮಿ.ಮೀ ಮಳೆಯಾಗಿದೆ. ಶೇಕಡಾ 51 ರಷ್ಟು ಮಳೆಯ ಕೊರತೆ ಉಂಟಾಗಿದೆ.

ಉತ್ತರ ಕನ್ನಡ – ಉತ್ತರ ಕನ್ನಡದ ವಾಡಿಕೆ ಮಳೆ 859 ಮಿ.ಮೀ ಆಗಿದ್ದು, ಸದ್ಯ 506 ಮಿ.ಮೀ ಮಳೆ ಆಗಿದೆ. ಈವರೆಗೆ ಶೇಕಡಾ 41 ರಷ್ಟು ಮಳೆಯ ಕೊರತೆ ಉಂಟಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

4 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

4 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

4 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

5 days ago