Advertisement
ಪ್ರಮುಖ

#NoRain| ಮಹಾರಾಷ್ಟ್ರದಲ್ಲಿ ಎಂದಿನಂತೆ ಬಾರದ ಮಳೆ : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮಳೆ ಕೊರತೆ : ಭಾರಿ ನೀರಿನ ಅಭಾವ ಸಾಧ್ಯತೆ

Share

ಮುಂಗಾರು ಮಳೆ ವಾಡಿಕೆಗಿಂತ ತಡವಾಗಿ ರಾಜ್ಯಕ್ಕೆ ಬಂದರು ಕರ್ನಾಟಕದ ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಭರ್ಜರಿ ಮಳೆ#Rainಯಾಗುತ್ತಿದೆ. ಆದರೆ ಉತ್ತರ ಕರ್ನಾಟಕ#North karnataka ಭಾಗದಲ್ಲಿ ಮಳೆಯ ತೀವ್ರ ಕೊರತೆ ಉಂಟಾಗಿದೆ.

ಹೀಗಾಗಿ ಜಲಾಶಯಗಳ ನೀರನ್ನು ಕುಡಿಯಲು ಮಾತ್ರ ಬಳಸುವಂತೆ ಆಲಮಟ್ಟಿ, ಘಟಪ್ರಭಾ, ಮಲಪ್ರಭಾ ಜಲಾಶಯ ಅಧಿಕಾರಿಗಳಿಗೆ ಬೆಳಗಾವಿ ಪ್ರಾದೇಶಿಕ ಆಯುಕ್ತ ನಿತೇಶ ಪಾಟೀಲ್ ಸೂಚನೆ ನೀಡಿದ್ದಾರೆ.  ಬೆಳಗಾವಿ ವಿಭಾಗದ ಏಳು ಜಿಲ್ಲೆಗಳಲ್ಲಿ ಮಳೆಯ ತೀವ್ರ ಕೊರತೆ ಉಂಟಾಗಿದೆ. ಹೀಗಾಗಿ ಕುಡಿಯುವ ನೀರಿನ ಸಮಸ್ಯೆ ನೀಗಿಸುವ ಉದ್ದೇಶದಿಂದ ಬೆಳಗಾವಿ ಪ್ರಾದೇಶಿಕ ಆಯುಕ್ತ ಸಭೆ ನಡೆಸಲಾಗಿದೆ.

ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿಯೂ ಮಳೆಯ ಅಭಾವ ಉಂಟಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ವಾಡಿಕೆ ಮಳೆ 175 ಮಿ. ಮೀ ಆಗಿದ್ದು, ವಾಸ್ತವಿಕ 71 ಮಿ.ಮೀ ಆಗಿದೆ. ಹೀಗಾಗಿ ಶೇಕಡಾ -60ರಷ್ಟು ಕೊರತೆ ಉಂಟಾಗಿದೆ.

ಬಾಗಲಕೋಟೆ – ಬಾಗಲಕೋಟೆಯಲ್ಲಿ ವಾಡಿಕೆ 94 ಮಿ. ಮೀ ಮಳೆಯಾಗಬೇಕಿತ್ತು. ಆದರೆ 31 ಮಿ.ಮೀ ಮಳೆ ಆಗಿದ್ದು, ಶೇಕಡಾ 67ರಷ್ಟು ಮಳೆಯ ಕೊರತೆ ಉಂಟಾಗಿದೆ.
ವಿಜಯಪುರ – ವಿಜಯಪುರದಲ್ಲಿ ವಾಡಿಕೆ 98 ಮಿ. ಮೀಮಳೆಯಾಗಬೇಕಿತ್ತು. ಆದರೆ 47 ಮಿ.ಮೀ ಮಳೆಯಾಗಿದ್ದು, ಶೇಕಡಾ 52 ರಷ್ಟು ಮಳೆಯ ಕೊರತೆಯಾಗಿದೆ.
ಗದಗ – ಗದಗದಲ್ಲಿ ವಾಡಿಕೆ 95 ಮಿ.‌ಮೀ ಮಳೆಯಾಗಬೇಕಿತ್ತು. ಆದರೆ 65 ಮಿ.ಮೀ ಮಳೆಯಾಗಿದ್ದು, ಶೇಕಡಾ 32 ರಷ್ಟು ಮಳೆಯ ಕೊರತೆ ಉಂಟಾಗಿದೆ.

ಹಾವೇರಿ – ಹಾವೇರಿಯಲ್ಲಿ ವಾಡಿಕೆ 146 ಮಿ. ಮೀ ಮಳೆಯಾಗಬೇಕಿತ್ತು. ಆದರೆ 75 ಮಿ.ಮೀ.ಮಳೆಯಾಗಿದೆ. ಶೇಕಡಾ 49 ರಷ್ಟು ಮಳೆಯ ಕೊರತೆಯಾಗಿದೆ.

ಧಾರವಾಡ – ಧಾರವಾಡದಲ್ಲಿ ವಾಡಿಕೆ 147 ಮಿ. ಮೀ ಮಳೆಯಾಗಬೇಕಿತ್ತು. ಆದರೆ  71 ಮಿ.ಮೀ ಮಳೆಯಾಗಿದೆ. ಶೇಕಡಾ 51 ರಷ್ಟು ಮಳೆಯ ಕೊರತೆ ಉಂಟಾಗಿದೆ.

ಉತ್ತರ ಕನ್ನಡ – ಉತ್ತರ ಕನ್ನಡದ ವಾಡಿಕೆ ಮಳೆ 859 ಮಿ.ಮೀ ಆಗಿದ್ದು, ಸದ್ಯ 506 ಮಿ.ಮೀ ಮಳೆ ಆಗಿದೆ. ಈವರೆಗೆ ಶೇಕಡಾ 41 ರಷ್ಟು ಮಳೆಯ ಕೊರತೆ ಉಂಟಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

10 hours ago

ಹವಾಮಾನ ವರದಿ | 26-07-2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು – ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ಕರಾವಳಿ–ಮಲೆನಾಡಿನಲ್ಲಿ 10 ದಿನ ಮಳೆಯ ಸಾಧ್ಯತೆ

ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…

11 hours ago

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

2 days ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

2 days ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

2 days ago