ಮುಂಗಾರು ಮಳೆ ವಾಡಿಕೆಗಿಂತ ತಡವಾಗಿ ರಾಜ್ಯಕ್ಕೆ ಬಂದರು ಕರ್ನಾಟಕದ ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಭರ್ಜರಿ ಮಳೆ#Rainಯಾಗುತ್ತಿದೆ. ಆದರೆ ಉತ್ತರ ಕರ್ನಾಟಕ#North karnataka ಭಾಗದಲ್ಲಿ ಮಳೆಯ ತೀವ್ರ ಕೊರತೆ ಉಂಟಾಗಿದೆ.
ಹೀಗಾಗಿ ಜಲಾಶಯಗಳ ನೀರನ್ನು ಕುಡಿಯಲು ಮಾತ್ರ ಬಳಸುವಂತೆ ಆಲಮಟ್ಟಿ, ಘಟಪ್ರಭಾ, ಮಲಪ್ರಭಾ ಜಲಾಶಯ ಅಧಿಕಾರಿಗಳಿಗೆ ಬೆಳಗಾವಿ ಪ್ರಾದೇಶಿಕ ಆಯುಕ್ತ ನಿತೇಶ ಪಾಟೀಲ್ ಸೂಚನೆ ನೀಡಿದ್ದಾರೆ. ಬೆಳಗಾವಿ ವಿಭಾಗದ ಏಳು ಜಿಲ್ಲೆಗಳಲ್ಲಿ ಮಳೆಯ ತೀವ್ರ ಕೊರತೆ ಉಂಟಾಗಿದೆ. ಹೀಗಾಗಿ ಕುಡಿಯುವ ನೀರಿನ ಸಮಸ್ಯೆ ನೀಗಿಸುವ ಉದ್ದೇಶದಿಂದ ಬೆಳಗಾವಿ ಪ್ರಾದೇಶಿಕ ಆಯುಕ್ತ ಸಭೆ ನಡೆಸಲಾಗಿದೆ.
ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿಯೂ ಮಳೆಯ ಅಭಾವ ಉಂಟಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ವಾಡಿಕೆ ಮಳೆ 175 ಮಿ. ಮೀ ಆಗಿದ್ದು, ವಾಸ್ತವಿಕ 71 ಮಿ.ಮೀ ಆಗಿದೆ. ಹೀಗಾಗಿ ಶೇಕಡಾ -60ರಷ್ಟು ಕೊರತೆ ಉಂಟಾಗಿದೆ.
ಹಾವೇರಿ – ಹಾವೇರಿಯಲ್ಲಿ ವಾಡಿಕೆ 146 ಮಿ. ಮೀ ಮಳೆಯಾಗಬೇಕಿತ್ತು. ಆದರೆ 75 ಮಿ.ಮೀ.ಮಳೆಯಾಗಿದೆ. ಶೇಕಡಾ 49 ರಷ್ಟು ಮಳೆಯ ಕೊರತೆಯಾಗಿದೆ.
ಧಾರವಾಡ – ಧಾರವಾಡದಲ್ಲಿ ವಾಡಿಕೆ 147 ಮಿ. ಮೀ ಮಳೆಯಾಗಬೇಕಿತ್ತು. ಆದರೆ 71 ಮಿ.ಮೀ ಮಳೆಯಾಗಿದೆ. ಶೇಕಡಾ 51 ರಷ್ಟು ಮಳೆಯ ಕೊರತೆ ಉಂಟಾಗಿದೆ.
ಉತ್ತರ ಕನ್ನಡ – ಉತ್ತರ ಕನ್ನಡದ ವಾಡಿಕೆ ಮಳೆ 859 ಮಿ.ಮೀ ಆಗಿದ್ದು, ಸದ್ಯ 506 ಮಿ.ಮೀ ಮಳೆ ಆಗಿದೆ. ಈವರೆಗೆ ಶೇಕಡಾ 41 ರಷ್ಟು ಮಳೆಯ ಕೊರತೆ ಉಂಟಾಗಿದೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…