ಮುಂಗಾರು ಮಳೆ ವಾಡಿಕೆಗಿಂತ ತಡವಾಗಿ ರಾಜ್ಯಕ್ಕೆ ಬಂದರು ಕರ್ನಾಟಕದ ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಭರ್ಜರಿ ಮಳೆ#Rainಯಾಗುತ್ತಿದೆ. ಆದರೆ ಉತ್ತರ ಕರ್ನಾಟಕ#North karnataka ಭಾಗದಲ್ಲಿ ಮಳೆಯ ತೀವ್ರ ಕೊರತೆ ಉಂಟಾಗಿದೆ.
ಹೀಗಾಗಿ ಜಲಾಶಯಗಳ ನೀರನ್ನು ಕುಡಿಯಲು ಮಾತ್ರ ಬಳಸುವಂತೆ ಆಲಮಟ್ಟಿ, ಘಟಪ್ರಭಾ, ಮಲಪ್ರಭಾ ಜಲಾಶಯ ಅಧಿಕಾರಿಗಳಿಗೆ ಬೆಳಗಾವಿ ಪ್ರಾದೇಶಿಕ ಆಯುಕ್ತ ನಿತೇಶ ಪಾಟೀಲ್ ಸೂಚನೆ ನೀಡಿದ್ದಾರೆ. ಬೆಳಗಾವಿ ವಿಭಾಗದ ಏಳು ಜಿಲ್ಲೆಗಳಲ್ಲಿ ಮಳೆಯ ತೀವ್ರ ಕೊರತೆ ಉಂಟಾಗಿದೆ. ಹೀಗಾಗಿ ಕುಡಿಯುವ ನೀರಿನ ಸಮಸ್ಯೆ ನೀಗಿಸುವ ಉದ್ದೇಶದಿಂದ ಬೆಳಗಾವಿ ಪ್ರಾದೇಶಿಕ ಆಯುಕ್ತ ಸಭೆ ನಡೆಸಲಾಗಿದೆ.
ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿಯೂ ಮಳೆಯ ಅಭಾವ ಉಂಟಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ವಾಡಿಕೆ ಮಳೆ 175 ಮಿ. ಮೀ ಆಗಿದ್ದು, ವಾಸ್ತವಿಕ 71 ಮಿ.ಮೀ ಆಗಿದೆ. ಹೀಗಾಗಿ ಶೇಕಡಾ -60ರಷ್ಟು ಕೊರತೆ ಉಂಟಾಗಿದೆ.
ಹಾವೇರಿ – ಹಾವೇರಿಯಲ್ಲಿ ವಾಡಿಕೆ 146 ಮಿ. ಮೀ ಮಳೆಯಾಗಬೇಕಿತ್ತು. ಆದರೆ 75 ಮಿ.ಮೀ.ಮಳೆಯಾಗಿದೆ. ಶೇಕಡಾ 49 ರಷ್ಟು ಮಳೆಯ ಕೊರತೆಯಾಗಿದೆ.
ಧಾರವಾಡ – ಧಾರವಾಡದಲ್ಲಿ ವಾಡಿಕೆ 147 ಮಿ. ಮೀ ಮಳೆಯಾಗಬೇಕಿತ್ತು. ಆದರೆ 71 ಮಿ.ಮೀ ಮಳೆಯಾಗಿದೆ. ಶೇಕಡಾ 51 ರಷ್ಟು ಮಳೆಯ ಕೊರತೆ ಉಂಟಾಗಿದೆ.
ಉತ್ತರ ಕನ್ನಡ – ಉತ್ತರ ಕನ್ನಡದ ವಾಡಿಕೆ ಮಳೆ 859 ಮಿ.ಮೀ ಆಗಿದ್ದು, ಸದ್ಯ 506 ಮಿ.ಮೀ ಮಳೆ ಆಗಿದೆ. ಈವರೆಗೆ ಶೇಕಡಾ 41 ರಷ್ಟು ಮಳೆಯ ಕೊರತೆ ಉಂಟಾಗಿದೆ.
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…