ಉತ್ತರ ಪ್ರದೇಶ ಸರ್ಕಾರದಿಂದ ಭಾರತೀಯ ಸೇನೆಗೆ ದೇಶೀ ಹಸುವಿನ ಹಾಲಿನ ಉತ್ಪನ್ನಗಳು

June 13, 2026
8:54 PM
ಉತ್ತರ ಪ್ರದೇಶ ಸರ್ಕಾರವು ಭಾರತೀಯ ಸೇನೆಗೆ ದೇಶೀ ಹಸುವಿನ ಹಾಲಿನ ಉತ್ಪನ್ನಗಳನ್ನು ಪೂರೈಸಲು ಮುಂದಾಗಿದೆ. ಈ ಯೋಜನೆಯಿಂದ ಯೋಧರಿಗೆ ಪೌಷ್ಟಿಕ ಆಹಾರ ದೊರೆಯುವುದರ ಜೊತೆಗೆ ಹೈನುಗಾರರು ಮತ್ತು ದೇಶೀ ಗೋ ತಳಿಗಳಿಗೆ ಉತ್ತೇಜನ ಸಿಗಲಿದೆ.

ಉತ್ತರ ಪ್ರದೇಶ ಸರ್ಕಾರವು ಭಾರತೀಯ ಸೇನೆಗೆ ದೇಶೀ ಹಸುಗಳ ಹಾಲಿನಿಂದ ತಯಾರಿಸಲಾದ ವಿವಿಧ ಉತ್ಪನ್ನಗಳನ್ನು ಪೂರೈಸುವ ಮಹತ್ವದ ಯೋಜನೆಯನ್ನು ಆರಂಭಿಸಿದೆ. ಈ ಕ್ರಮದ ಮೂಲಕ ಸೇನಾ ಸಿಬ್ಬಂದಿಗೆ ಉತ್ತಮ ಗುಣಮಟ್ಟದ ಪೌಷ್ಟಿಕ ಆಹಾರ ಒದಗಿಸುವುದರ ಜೊತೆಗೆ ದೇಶೀ ಗೋ ತಳಿಗಳ ಸಂರಕ್ಷಣೆ ಮತ್ತು ಗೋ ಉತ್ಪನ್ನಗಳ ಬಳಕೆಯನ್ನು ಉತ್ತೇಜಿಸುವ ಉದ್ದೇಶ ಹೊಂದಲಾಗಿದೆ.

ಸರ್ಕಾರದ ಯೋಜನೆಯಂತೆ ದೇಶೀ ಹಸುಗಳ ಹಾಲಿನಿಂದ ತಯಾರಿಸಲಾದ ತುಪ್ಪ, ಪನೀರ್, ಬೆಣ್ಣೆ ಸೇರಿದಂತೆ ಹಲವು ಉತ್ಪನ್ನಗಳನ್ನು ಸೇನೆಗೆ ಪೂರೈಸಲಾಗುತ್ತದೆ. ಇದರಿಂದ ಸ್ಥಳೀಯ ಹೈನುಗಾರರಿಗೆ ಮಾರುಕಟ್ಟೆ ಅವಕಾಶಗಳು ಹೆಚ್ಚಲಿದ್ದು, ಗೋಶಾಲೆಗಳು ಮತ್ತು ಹೈನುಗಾರಿಕೆ ಕ್ಷೇತ್ರಕ್ಕೂ ಉತ್ತೇಜನ ಸಿಗುವ ನಿರೀಕ್ಷೆಯಿದೆ.

ಉತ್ತರ ಪ್ರದೇಶ ಸರ್ಕಾರದ ಈ ಉಪಕ್ರಮವು “ಆತ್ಮನಿರ್ಭರ ಭಾರತ” ಪರಿಕಲ್ಪನೆಗೆ ಪೂರಕವಾಗಿದ್ದು, ಸ್ಥಳೀಯ ಉತ್ಪಾದನೆ ಹಾಗೂ ದೇಶೀ ತಳಿಗಳ ಮಹತ್ವವನ್ನು ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸುವ ಪ್ರಯತ್ನವೆಂದು ಪರಿಗಣಿಸಲಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ರೈತರಿಗೆ ಏನು ಲಾಭ? : ಈ ಯೋಜನೆಯಿಂದ ರೈತರಿಗೆ ಪ್ರಯೋಜನವಾಗಲಿದೆ ಎಂದು ಸರ್ಕಾರ ಹೇಳಿದೆ.  ದೇಶೀ ಹಸುಗಳ ಹಾಲಿಗೆ ಹೆಚ್ಚುವರಿ ಬೇಡಿಕೆ ಸೃಷ್ಟಿಯಾಗಬಹುದು,ಹೈನುಗಾರರಿಗೆ ಉತ್ತಮ ಬೆಲೆ ದೊರೆಯುವ ಸಾಧ್ಯತೆಇದೆ. ಗೋಶಾಲೆ ಮತ್ತು ಹೈನುಗಾರಿಕೆ ಕ್ಷೇತ್ರದಲ್ಲಿ ಉದ್ಯೋಗಾವಕಾಶಗಳು ಹೆಚ್ಚಾಗಬಹುದು ಅಲ್ಲದೆ ದೇಶೀ ತಳಿಗಳ ಸಂರಕ್ಷಣೆಗೆ ಉತ್ತೇಜನ ಸಿಗಬಹುದು ಎಂದು ಅಂದಾಜಿಸಲಾಗಿದೆ.

The Uttar Pradesh government has initiated a plan to supply indigenous cow milk products to the Indian Army. The move aims to provide nutritious food to soldiers while promoting indigenous cattle breeds, dairy farmers, and local milk-based industries.

 

View this post on Instagram

 

A post shared by Rural Mirror (@theruralmirror)

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಕತ್ತರಿಸಿ ಹಲಸು ನೆಟ್ಟ ಕೃಷಿಕ
July 5, 2026
11:19 PM
by: ದ ರೂರಲ್ ಮಿರರ್.ಕಾಂ
ಅಡಿಕೆಯಿಂದ ಹಲಸಿನತ್ತ “ಸಂತೋಷ” ಪಯಣ – ನೀರಿನ ಕೊರತೆಯ ಸವಾಲನ್ನು ಅವಕಾಶವಾಗಿಸಿದ ಕೃಷಿಕ
July 5, 2026
5:47 PM
by: ಮಹೇಶ್ ಪುಚ್ಚಪ್ಪಾಡಿ
ಬಾಳ ಮಧ್ಯಾಹ್ನದ ಲಹರಿ
July 5, 2026
3:10 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 05-07-2026 | ರಾಜ್ಯದಲ್ಲಿ ಮಳೆ ಇಳಿಮುಖದತ್ತ? ಜುಲೈ 8–10 ರಿಂದ ಹವಾಮಾನದಲ್ಲಿ ಬದಲಾವಣೆ ಸಾಧ್ಯತೆ
July 5, 2026
2:32 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror