ಕಿಸಾನ್ ಪಾಠಶಾಲೆ ಮೂಲಕ 20 ಲಕ್ಷ ರೈತರಿಗೆ ಆಧುನಿಕ ಕೃಷಿ ತರಬೇತಿ

January 8, 2026
10:40 PM
ಉತ್ತರ ಪ್ರದೇಶ ಸರ್ಕಾರವು ಕಿಸಾನ್ ಪಾಠಶಾಲೆ ಕಾರ್ಯಕ್ರಮದ ಮೂಲಕ 2025–26 ಹಂಗಾಮಿನಲ್ಲಿ 20.15 ಲಕ್ಷ ರೈತರಿಗೆ ಆಧುನಿಕ ಕೃಷಿ ವಿಧಾನಗಳು ಮತ್ತು ಸರ್ಕಾರಿ ಯೋಜನೆಗಳ ಕುರಿತು ತರಬೇತಿ ನೀಡಿದೆ. ಈ ಯೋಜನೆಯಡಿ 2017ರಿಂದ ಇಲ್ಲಿವರೆಗೆ 2 ಕೋಟಿಗೂ ಹೆಚ್ಚು ರೈತರಿಗೆ ತರಬೇತಿ ನೀಡಿ ರೈತರ ಆದಾಯ ಹೆಚ್ಚಿಸುವುದು ಸರ್ಕಾರದ ಮುಖ್ಯ ಗುರಿಯಾಗಿದೆ.

ಉತ್ತರ ಪ್ರದೇಶ ಸರ್ಕಾರವು ಕಿಸಾನ್ ಪಾಠಶಾಲೆ ಕಾರ್ಯಕ್ರಮದ ಮೂಲಕ ರಾಜ್ಯದ ರೈತರಿಗೆ ಆಧುನಿಕ ಕೃಷಿ ವಿಧಾನಗಳು, ಸರ್ಕಾರಿ ಯೋಜನೆಗಳು ಹಾಗೂ ಕೃಷಿ ನವೀನತೆಗಳ ಕುರಿತು ನಿರಂತರ ತರಬೇತಿ ನೀಡುತ್ತಿದೆ ಎಂದು ಬುಧವಾರ ತಿಳಿಸಿದೆ.  ರಾಜ್ಯ ಸರ್ಕಾರದ ವಕ್ತಾರರ ಪ್ರಕಾರ, ಈ ವರ್ಷವೂ ರೈತರಿಗೆ ತರಬೇತಿ ನೀಡಲಾಗಿದ್ದು, ‘ಖೇತಿ ಕಿ ಬಾತ್ ಖೇತ್ ಪರ’ ಎಂಬ ಥೀಮ್‌ನಡಿ ಕಿಸಾನ್ ಪಾಠಶಾಲೆ 8.0 – ರಬಿ (2025–26) ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಒಟ್ಟು 20.15 ಲಕ್ಷ ರೈತರಿಗೆ ತರಬೇತಿ ನೀಡಲಾಗಿದೆ.

Advertisement
Advertisement

ಕೃಷಿ ಸಚಿವ ಸೂರ್ಯ ಪ್ರತಾಪ್ ಶಾಹಿ ಮಾತನಾಡಿ, ರಬಿ ಹಂಗಾಮಿನಲ್ಲಿ ಕಿಸಾನ್ ಪಾಠಶಾಲೆಯನ್ನು ಕೃಷಿ ವಿಜ್ಞಾನ ಕೇಂದ್ರಗಳು (KVKs), ಪಿಎಸಿಎಸ್ ಸಂಘಗಳು, ಗ್ರಾಮ ಪಂಚಾಯತ್ ಕಾರ್ಯಾಲಯಗಳು, ಪ್ರಗತಿಪರ ರೈತರ ಹೊಲಗಳಲ್ಲಿ ಮತ್ತು ರಾಜ್ಯದ 21,000ಕ್ಕೂ ಹೆಚ್ಚು ಗ್ರಾಮ ಪಂಚಾಯತ್‌ಗಳಲ್ಲಿ ಆಯೋಜಿಸಲಾಗಿತ್ತು ಎಂದು ತಿಳಿಸಿದರು.  ಈ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಭಾಗಗಳಿಂದ 20.15 ಲಕ್ಷ ರೈತರು ಭಾಗವಹಿಸಿದ್ದರು. ಮಹಿಳಾ ರೈತರಿಗೂ ವಿಶೇಷ ಒತ್ತು ನೀಡಲಾಗಿದೆ.  ಈ ತರಬೇತಿಯಲ್ಲಿ 12.62 ಲಕ್ಷ ಪುರುಷ ರೈತರು, 7.53 ಲಕ್ಷ ಮಹಿಳಾ ರೈತರು  ಭಾಗವಹಿಸಿದ್ದು, ಕೃಷಿ ಹಾಗೂ ಸಂಬಂಧಿತ ಇಲಾಖೆಗಳ ಯೋಜನೆಗಳು, ಕೃಷಿ ವಿಶ್ವವಿದ್ಯಾಲಯಗಳು, ಸಂಶೋಧನಾ ಸಂಸ್ಥೆಗಳು ಮತ್ತು ಕೃಷಿ ವಿಜ್ಞಾನ ಕೇಂದ್ರಗಳಲ್ಲಿ ನಡೆದ ನವೀನ ಪ್ರಯೋಗಗಳ ಕುರಿತು ಮಾಹಿತಿ ನೀಡಲಾಗಿದೆ.

2017ರಿಂದ 2 ಕೋಟಿ ರೈತರಿಗೆ ತರಬೇತಿ :  ಕೃಷಿ ಇಲಾಖೆಯ ಮಾಹಿತಿ ಪ್ರಕಾರ, 2017–18ರಿಂದ ಇಲ್ಲಿವರೆಗೆ ಕಿಸಾನ್ ಪಾಠಶಾಲೆ ಮೂಲಕ 2 ಕೋಟಿಗೂ ಹೆಚ್ಚು ರೈತರಿಗೆ ತರಬೇತಿ ನೀಡಲಾಗಿದೆ. ಈ ಯೋಜನೆಯ ಮುಖ್ಯ ಉದ್ದೇಶ ರೈತರಿಗೆ ಆಧುನಿಕ ಕೃಷಿ ಜ್ಞಾನ ನೀಡುವ ಮೂಲಕ ರೈತರ ಆದಾಯವನ್ನು ದ್ವಿಗುಣಗೊಳಿಸುವುದು ಆಗಿದೆ.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸರ್ಕಾರಿ ಶಾಲೆ ಮಕ್ಕಳಿಗೆ ಚೆಸ್ ಪಾಠ | ದ.ಕ ದಲ್ಲಿ “ಚೆಸ್ ಇನ್ ಸ್ಕೂಲ್” ಆರಂಭ | ಗ್ರಾಮೀಣ ಮಕ್ಕಳಿಗೆ ಬೌದ್ಧಿಕ ಅವಕಾಶ
January 29, 2026
2:18 PM
by: ದ ರೂರಲ್ ಮಿರರ್.ಕಾಂ
ಕೊಳೆ ರೋಗ ನಿಯಂತ್ರಣಕ್ಕೂ ತೆರಿಗೆ…? ಮೈಲುತುತ್ತಿಗೆ ಸುಂಕ – ಅಡಿಕೆ ರೈತನಿಗೆ ಮತ್ತೊಂದು ಹೊರೆ..!
January 29, 2026
7:39 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ದೇಶದಲ್ಲಿ ರಬಿ ಋತು ಬಿತ್ತನೆ ದಾಖಲೆ ಹೆಚ್ಚಳ | 660.48 ಲಕ್ಷ ಹೆಕ್ಟೇರ್‌ಗೆ ಏರಿದ ಒಟ್ಟು ವಿಸ್ತೀರ್ಣ
January 29, 2026
7:18 AM
by: ದ ರೂರಲ್ ಮಿರರ್.ಕಾಂ
ಯೂರಿಯಾ ಮಾರಾಟ 3.8% ಏರಿಕೆ | ದೇಶೀಯ ಉತ್ಪಾದನೆ ಕುಸಿತ, ಆಮದು 85% ಹೆಚ್ಚಳ
January 29, 2026
7:08 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror