Advertisement
MIRROR FOCUS

ಕಿಸಾನ್ ಪಾಠಶಾಲೆ ಮೂಲಕ 20 ಲಕ್ಷ ರೈತರಿಗೆ ಆಧುನಿಕ ಕೃಷಿ ತರಬೇತಿ

Share

ಉತ್ತರ ಪ್ರದೇಶ ಸರ್ಕಾರವು ಕಿಸಾನ್ ಪಾಠಶಾಲೆ ಕಾರ್ಯಕ್ರಮದ ಮೂಲಕ ರಾಜ್ಯದ ರೈತರಿಗೆ ಆಧುನಿಕ ಕೃಷಿ ವಿಧಾನಗಳು, ಸರ್ಕಾರಿ ಯೋಜನೆಗಳು ಹಾಗೂ ಕೃಷಿ ನವೀನತೆಗಳ ಕುರಿತು ನಿರಂತರ ತರಬೇತಿ ನೀಡುತ್ತಿದೆ ಎಂದು ಬುಧವಾರ ತಿಳಿಸಿದೆ.  ರಾಜ್ಯ ಸರ್ಕಾರದ ವಕ್ತಾರರ ಪ್ರಕಾರ, ಈ ವರ್ಷವೂ ರೈತರಿಗೆ ತರಬೇತಿ ನೀಡಲಾಗಿದ್ದು, ‘ಖೇತಿ ಕಿ ಬಾತ್ ಖೇತ್ ಪರ’ ಎಂಬ ಥೀಮ್‌ನಡಿ ಕಿಸಾನ್ ಪಾಠಶಾಲೆ 8.0 – ರಬಿ (2025–26) ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಒಟ್ಟು 20.15 ಲಕ್ಷ ರೈತರಿಗೆ ತರಬೇತಿ ನೀಡಲಾಗಿದೆ.

ಕೃಷಿ ಸಚಿವ ಸೂರ್ಯ ಪ್ರತಾಪ್ ಶಾಹಿ ಮಾತನಾಡಿ, ರಬಿ ಹಂಗಾಮಿನಲ್ಲಿ ಕಿಸಾನ್ ಪಾಠಶಾಲೆಯನ್ನು ಕೃಷಿ ವಿಜ್ಞಾನ ಕೇಂದ್ರಗಳು (KVKs), ಪಿಎಸಿಎಸ್ ಸಂಘಗಳು, ಗ್ರಾಮ ಪಂಚಾಯತ್ ಕಾರ್ಯಾಲಯಗಳು, ಪ್ರಗತಿಪರ ರೈತರ ಹೊಲಗಳಲ್ಲಿ ಮತ್ತು ರಾಜ್ಯದ 21,000ಕ್ಕೂ ಹೆಚ್ಚು ಗ್ರಾಮ ಪಂಚಾಯತ್‌ಗಳಲ್ಲಿ ಆಯೋಜಿಸಲಾಗಿತ್ತು ಎಂದು ತಿಳಿಸಿದರು.  ಈ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಭಾಗಗಳಿಂದ 20.15 ಲಕ್ಷ ರೈತರು ಭಾಗವಹಿಸಿದ್ದರು. ಮಹಿಳಾ ರೈತರಿಗೂ ವಿಶೇಷ ಒತ್ತು ನೀಡಲಾಗಿದೆ.  ಈ ತರಬೇತಿಯಲ್ಲಿ 12.62 ಲಕ್ಷ ಪುರುಷ ರೈತರು, 7.53 ಲಕ್ಷ ಮಹಿಳಾ ರೈತರು  ಭಾಗವಹಿಸಿದ್ದು, ಕೃಷಿ ಹಾಗೂ ಸಂಬಂಧಿತ ಇಲಾಖೆಗಳ ಯೋಜನೆಗಳು, ಕೃಷಿ ವಿಶ್ವವಿದ್ಯಾಲಯಗಳು, ಸಂಶೋಧನಾ ಸಂಸ್ಥೆಗಳು ಮತ್ತು ಕೃಷಿ ವಿಜ್ಞಾನ ಕೇಂದ್ರಗಳಲ್ಲಿ ನಡೆದ ನವೀನ ಪ್ರಯೋಗಗಳ ಕುರಿತು ಮಾಹಿತಿ ನೀಡಲಾಗಿದೆ.

2017ರಿಂದ 2 ಕೋಟಿ ರೈತರಿಗೆ ತರಬೇತಿ :  ಕೃಷಿ ಇಲಾಖೆಯ ಮಾಹಿತಿ ಪ್ರಕಾರ, 2017–18ರಿಂದ ಇಲ್ಲಿವರೆಗೆ ಕಿಸಾನ್ ಪಾಠಶಾಲೆ ಮೂಲಕ 2 ಕೋಟಿಗೂ ಹೆಚ್ಚು ರೈತರಿಗೆ ತರಬೇತಿ ನೀಡಲಾಗಿದೆ. ಈ ಯೋಜನೆಯ ಮುಖ್ಯ ಉದ್ದೇಶ ರೈತರಿಗೆ ಆಧುನಿಕ ಕೃಷಿ ಜ್ಞಾನ ನೀಡುವ ಮೂಲಕ ರೈತರ ಆದಾಯವನ್ನು ದ್ವಿಗುಣಗೊಳಿಸುವುದು ಆಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ತೋಟಗಳಿಗೆ ಸವಾಲಾಗಿರುವ ಎಲೆಚುಕ್ಕಿ ರೋಗ – ವಿಜ್ಞಾನ ಏನು ಹೇಳುತ್ತದೆ?

ಅಡಿಕೆ ಎಲೆಚುಕ್ಕಿ ರೋಗ ವ್ಯಾಪಕವಾಗಿದೆ. ಮಲೆನಾಡು ತಪ್ಪಲು ಭಾಗಗಳಲ್ಲಿ ಅಡಿಕೆ ಎಲೆಚುಕ್ಕಿ ರೋಗ…

10 hours ago

ಕೀಟನಾಶಕ ಕಾಯ್ದೆಯಲ್ಲಿ ಮಹತ್ವದ ಬದಲಾವಣೆ | ಕೇಂದ್ರ ಸರ್ಕಾರದಿಂದ ಹೊಸ ಕರಡು ಮಸೂದೆ

ಕರಡು ಪೆಸ್ಟಿಸೈಡ್ಸ್ ಮ್ಯಾನೇಜ್ಮೆಂಟ್ ಬಿಲ್–2025 ಕುರಿತು ಸಾರ್ವಜನಿಕ ಅಭಿಪ್ರಾಯಕ್ಕೆ ಕೇಂದ್ರ ಆಹ್ವಾನ ಮಾಡಿದೆ.…

19 hours ago

ಕುರಿ ಸಾಕಾಣಿಕ ಘಟಕ ಸ್ಥಾಪನೆಗೆ ಸಹಾಯಧನ

ಕುರಿಸಾಕಾಣಿಕೆ ಅದೇಷ್ಟೋ ಯುವಕರು ತಮ್ಮ ಸ್ವಂತ ಉದ್ಯಮವಾಗಿ ಆಯ್ಕೆ ಮಾಡಿಕೊಂಡಿದ್ದಾರೆ. ಇದರಿಂದ ಹೆಚ್ಚು…

21 hours ago

ವೃತ್ತಿಯಲ್ಲಿ ಇಂಗ್ಲಿಷ್ ಪ್ರೊಫೆಸರ್- ಕೃಷಿಕನಾಗಿಯೂ ಯಶಸ್ಸು…!

ಯಾವುದೇ ವೃತ್ತಿಯಲ್ಲಿದ್ದರೂ ಕೃಷಿಯನ್ನು ಬಿಡಬಾರದು ಎಂಬ ಹಠದಿಂದ ಜೀವನದಲ್ಲಿ ಯಶಸ್ಸು ಕಂಡವರಲ್ಲಿ ಅಮರಾವತಿ…

21 hours ago

ಯಶಸ್ವಿನಿ ಕಾರ್ಡ್ ಅರ್ಜಿ ಪ್ರಾರಂಭ

ಆರ್ಥಿಕವಾಗಿ ದುರ್ಬಲ ಹೊಂದಿರುವ ಕುಟುಂಬದ ಸದಸ್ಯರಿಗೆ ಆರೋಗ್ಯದಲ್ಲಿ ಏರುಪೇರು ಉಂಟಾದದ ದೊಡ್ಡ ಮಟ್ಟದ…

21 hours ago

ಹೊಟ್ಟೆಯ ಕೊಬ್ಬು ಕರಗಿಸಲು ಸೋರೆಕಾಯಿ ಜ್ಯೂಸ್

ಅಧಿಕ ಎಣ್ಣೆ ಅಂಶವುಳ್ಳ ತಿಂಡಿಗಳು, ಶೇಖರಿಸಿಕೊಂಡಿರುವ ಆಹಾರಗಳ ಸೇವನೆಯು ಹೊಟ್ಟೆಯ ಬೊಜ್ಜಿಗೆ ಕಾರಣವಾಗುತ್ತದೆ.…

21 hours ago