ಉತ್ತರ ಪ್ರದೇಶ ಸರ್ಕಾರವು ಕಿಸಾನ್ ಪಾಠಶಾಲೆ ಕಾರ್ಯಕ್ರಮದ ಮೂಲಕ ರಾಜ್ಯದ ರೈತರಿಗೆ ಆಧುನಿಕ ಕೃಷಿ ವಿಧಾನಗಳು, ಸರ್ಕಾರಿ ಯೋಜನೆಗಳು ಹಾಗೂ ಕೃಷಿ ನವೀನತೆಗಳ ಕುರಿತು ನಿರಂತರ ತರಬೇತಿ ನೀಡುತ್ತಿದೆ ಎಂದು ಬುಧವಾರ ತಿಳಿಸಿದೆ. ರಾಜ್ಯ ಸರ್ಕಾರದ ವಕ್ತಾರರ ಪ್ರಕಾರ, ಈ ವರ್ಷವೂ ರೈತರಿಗೆ ತರಬೇತಿ ನೀಡಲಾಗಿದ್ದು, ‘ಖೇತಿ ಕಿ ಬಾತ್ ಖೇತ್ ಪರ’ ಎಂಬ ಥೀಮ್ನಡಿ ಕಿಸಾನ್ ಪಾಠಶಾಲೆ 8.0 – ರಬಿ (2025–26) ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಒಟ್ಟು 20.15 ಲಕ್ಷ ರೈತರಿಗೆ ತರಬೇತಿ ನೀಡಲಾಗಿದೆ.
ಕೃಷಿ ಸಚಿವ ಸೂರ್ಯ ಪ್ರತಾಪ್ ಶಾಹಿ ಮಾತನಾಡಿ, ರಬಿ ಹಂಗಾಮಿನಲ್ಲಿ ಕಿಸಾನ್ ಪಾಠಶಾಲೆಯನ್ನು ಕೃಷಿ ವಿಜ್ಞಾನ ಕೇಂದ್ರಗಳು (KVKs), ಪಿಎಸಿಎಸ್ ಸಂಘಗಳು, ಗ್ರಾಮ ಪಂಚಾಯತ್ ಕಾರ್ಯಾಲಯಗಳು, ಪ್ರಗತಿಪರ ರೈತರ ಹೊಲಗಳಲ್ಲಿ ಮತ್ತು ರಾಜ್ಯದ 21,000ಕ್ಕೂ ಹೆಚ್ಚು ಗ್ರಾಮ ಪಂಚಾಯತ್ಗಳಲ್ಲಿ ಆಯೋಜಿಸಲಾಗಿತ್ತು ಎಂದು ತಿಳಿಸಿದರು. ಈ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಭಾಗಗಳಿಂದ 20.15 ಲಕ್ಷ ರೈತರು ಭಾಗವಹಿಸಿದ್ದರು. ಮಹಿಳಾ ರೈತರಿಗೂ ವಿಶೇಷ ಒತ್ತು ನೀಡಲಾಗಿದೆ. ಈ ತರಬೇತಿಯಲ್ಲಿ 12.62 ಲಕ್ಷ ಪುರುಷ ರೈತರು, 7.53 ಲಕ್ಷ ಮಹಿಳಾ ರೈತರು ಭಾಗವಹಿಸಿದ್ದು, ಕೃಷಿ ಹಾಗೂ ಸಂಬಂಧಿತ ಇಲಾಖೆಗಳ ಯೋಜನೆಗಳು, ಕೃಷಿ ವಿಶ್ವವಿದ್ಯಾಲಯಗಳು, ಸಂಶೋಧನಾ ಸಂಸ್ಥೆಗಳು ಮತ್ತು ಕೃಷಿ ವಿಜ್ಞಾನ ಕೇಂದ್ರಗಳಲ್ಲಿ ನಡೆದ ನವೀನ ಪ್ರಯೋಗಗಳ ಕುರಿತು ಮಾಹಿತಿ ನೀಡಲಾಗಿದೆ.
2017ರಿಂದ 2 ಕೋಟಿ ರೈತರಿಗೆ ತರಬೇತಿ : ಕೃಷಿ ಇಲಾಖೆಯ ಮಾಹಿತಿ ಪ್ರಕಾರ, 2017–18ರಿಂದ ಇಲ್ಲಿವರೆಗೆ ಕಿಸಾನ್ ಪಾಠಶಾಲೆ ಮೂಲಕ 2 ಕೋಟಿಗೂ ಹೆಚ್ಚು ರೈತರಿಗೆ ತರಬೇತಿ ನೀಡಲಾಗಿದೆ. ಈ ಯೋಜನೆಯ ಮುಖ್ಯ ಉದ್ದೇಶ ರೈತರಿಗೆ ಆಧುನಿಕ ಕೃಷಿ ಜ್ಞಾನ ನೀಡುವ ಮೂಲಕ ರೈತರ ಆದಾಯವನ್ನು ದ್ವಿಗುಣಗೊಳಿಸುವುದು ಆಗಿದೆ.
ಅಡಿಕೆ ಎಲೆಚುಕ್ಕಿ ರೋಗ ವ್ಯಾಪಕವಾಗಿದೆ. ಮಲೆನಾಡು ತಪ್ಪಲು ಭಾಗಗಳಲ್ಲಿ ಅಡಿಕೆ ಎಲೆಚುಕ್ಕಿ ರೋಗ…
ಕರಡು ಪೆಸ್ಟಿಸೈಡ್ಸ್ ಮ್ಯಾನೇಜ್ಮೆಂಟ್ ಬಿಲ್–2025 ಕುರಿತು ಸಾರ್ವಜನಿಕ ಅಭಿಪ್ರಾಯಕ್ಕೆ ಕೇಂದ್ರ ಆಹ್ವಾನ ಮಾಡಿದೆ.…
ಕುರಿಸಾಕಾಣಿಕೆ ಅದೇಷ್ಟೋ ಯುವಕರು ತಮ್ಮ ಸ್ವಂತ ಉದ್ಯಮವಾಗಿ ಆಯ್ಕೆ ಮಾಡಿಕೊಂಡಿದ್ದಾರೆ. ಇದರಿಂದ ಹೆಚ್ಚು…
ಯಾವುದೇ ವೃತ್ತಿಯಲ್ಲಿದ್ದರೂ ಕೃಷಿಯನ್ನು ಬಿಡಬಾರದು ಎಂಬ ಹಠದಿಂದ ಜೀವನದಲ್ಲಿ ಯಶಸ್ಸು ಕಂಡವರಲ್ಲಿ ಅಮರಾವತಿ…
ಆರ್ಥಿಕವಾಗಿ ದುರ್ಬಲ ಹೊಂದಿರುವ ಕುಟುಂಬದ ಸದಸ್ಯರಿಗೆ ಆರೋಗ್ಯದಲ್ಲಿ ಏರುಪೇರು ಉಂಟಾದದ ದೊಡ್ಡ ಮಟ್ಟದ…
ಅಧಿಕ ಎಣ್ಣೆ ಅಂಶವುಳ್ಳ ತಿಂಡಿಗಳು, ಶೇಖರಿಸಿಕೊಂಡಿರುವ ಆಹಾರಗಳ ಸೇವನೆಯು ಹೊಟ್ಟೆಯ ಬೊಜ್ಜಿಗೆ ಕಾರಣವಾಗುತ್ತದೆ.…