ಅನುಕ್ರಮ

“ ಉಪವಾಸ” ಎನ್ನುವ ವ್ರತ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ನಾಡಿನಲ್ಲೆಡೆ ನವರಾತ್ರಿ ಹಬ್ಬದ ಸಂಭ್ರಮ. ಹಬ್ಬದ ಪ್ರಯುಕ್ತ ನಾನಾ ಬಗೆಯ ಭಕ್ಷ್ಯಗಳ ಭೂರಿ ಭೋಜನ ಸವಿಯುವವರು ಒಂದೆಡೆಯಾದರೆ, ಕಟ್ಟುನಿಟ್ಟಿನ “ಉಪವಾಸ” ವ್ರತ ಕೈಗೊಳ್ಳುವವರೂ ಅನೇಕರು. ಅದರಲ್ಲೂ ನವರಾತ್ರಿ ಹಬ್ಬದ ಒಂಬತ್ತು ದಿನ ಉಪವಾಸ ಮಾಡುವುದರಿಂದ ದುರ್ಗಾ ಮಾತೆಯ ಅನುಗ್ರಹ ಲಭಿಸುವುದು ಎನ್ನುವ ನಂಬಿಕೆ ಇದೆ.

Advertisement
Advertisement

“ಉಪ” ಎಂದರೆ ಹತ್ತಿರ, “ವಾಸ” ಎಂದರೆ ವಾಸಿಸು. ಅರ್ಥಾಥ್‍ ದೇವರಿಗೆ ಸನಿಹವಾಗುವುದು. ಶುದ್ಧ ಮನಸ್ಸಿನಿಂದ ಉಪವಾಸ ವ್ರತ ಕೈಗೊಳ್ಳುವುದರಿಂದ ಮನಸ್ಸು, ದೇಹ, ಆತ್ಮ ಪರಿಶುದ್ಧವಾಗುತ್ತದೆ ಎನ್ನುವುದು ನಮ್ಮ ಪೂರ್ವಿಕರ ನಂಬಿಕೆ. ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ಉಪವಾಸಕ್ಕೆ ಮಹತ್ತರವಾದ ಸ್ಥಾನಮಾನವಿದೆ.

ಇದು “ನವರಾತ್ರಿ”ಗೆ ಮಾತ್ರ ಸೀಮಿತವಾಗದೆ ಸುಬ್ರಹ್ಮಣ್ಯ ಷಷ್ಠಿ, ಕಿರುಷಷ್ಠಿ, ಏಕಾದಶಿ, ವಾರದ ಒಂದು ದಿನ ಹೀಗೆ ನಾನಾ ದಿನಗಳಂದು ವ್ರತ ಪಾಲಿಸುವುದು ದೈಹಿಕ ಮತ್ತು ಮಾನಸಿಕ ಆರೋಗ್ಯದ ಹಿತದೃಷ್ಟಿಯಿಂದ ಒಳ್ಳೆಯದು. ಭೂರಿ ಭೋಜನಗಳು ಕಣ್ಣ ಮುಂದೆ ಇದ್ದರೂ ತಿನ್ನದೆ ಇರುವುದರಿಂದ ವ್ಯಕ್ತಿ ತನ್ನ ಆಸೆಗಳ ಮೇಲೆ ಹಿಡಿತ ಸಾಧಿಸುವಲ್ಲಿ ಸಫಲನಾಗುತ್ತಾನೆ.

ವಿವಿಧ ಪ್ರಕಾರದ ಉಪವಾಸಗಳು:

* ವಾರದ ಒಂದು ದಿನ ತಮ್ಮತಮ್ಮ ಇಷ್ಟ ದೇವರಿಗಾಗಿ ಮಾಡುವ ಉಪವಾಸ. ಮಂಗಳವಾರ ಹನುಮಂತನಿಗಾಗಿ, ಶನಿವಾರ ಉಪವಾಸ ಮಾಡುವುದು ಶನಿ ದೇವರ ಅನುಗ್ರಹ ಪಡೆಯಲು ಎನ್ನುವ ನಂಬಿಕೆ ಇದೆ.
* ನವರಾತ್ರಿ, ಶಿವರಾತ್ರಿ, ಷಷ್ಠಿ, ಹಬ್ಬಹರಿದಿನಗಳಂತಹ ವಿಶೇಷ ದಿನಗಳಂದು ಮಾಡುವ ಉಪವಾಸ.
* ಧಾರ್ಮಿಕ ಹಾಗು ದೈಹಿಕ ದೃಷ್ಟಿಯಿಂದ ಮಾಡುವ ಉಪವಾಸ. ನಿಗದಿತ ದಿನದಂದು ಉಪ್ಪು, ಸಿಹಿ, ಖಾರ ಇಲ್ಲದ ಆಹಾರ ಸೇವನೆ ಮಾಡುವುದು. ಇದು ಬಿಪಿ ಹಾಗು ಮಾನಸಿಕ ಸ್ಥಿರತೆಯನ್ನು ಕಾಪಾಡಿಕೊಳ್ಳುತ್ತದೆ.
* ಕೇವಲ ಫಲಾಹಾರಇಲ್ಲವೇ ದ್ರವಾಹಾರ ಸೇವನೆ ಮಾಡುವುದೂ ಕೂಡಾ ಉಪವಾಸದ ಒಂದು ವಿಧ.

Advertisement

ಪ್ರಯೋಜನಗಳು:

*ಉಪವಾಸ ಇರುವುದರಿಂದ ದೇಹದ ಪಚನಕಾರಿ ಅಂಗಗಳಿಗೆ ವಿಶ್ರಾಂತಿ ಸಿಗುತ್ತದೆ.
*ಮನಸ್ಸು ಹಾಗು ಹೃದಯವನ್ನು ಶುದ್ಧ ಮಾಡುತ್ತದೆ.
*ಉಪವಾಸವಿರುವುದರಿಂದ ದೇಹದಲ್ಲಿ ಸೇರಿಕೊಂಡಿರುವ ವಿಷಯುಕ್ತ ವಸ್ತುಗಳನ್ನು ನಾಶಮಾಡುತ್ತದೆ.
*ಮನಸ್ಸಿನ ಭಾವನೆಗಳನ್ನು ಹತೋಟಿಯಲ್ಲಿಡುತ್ತದೆ.
*ಮನುಷ್ಯನನ್ನು ಮಾನಸಿಕ ಹಾಗು ದೈಹಿಕವಾಗಿ ಬಲಿಷ್ಟಗೊಳಿಸುತ್ತದೆ.

ನೆಂಟರಿಷ್ಟರು, ಗೆಳೆಯರು, ನೆರೆಹೊರೆಯವರು ಉಪವಾಸ ವ್ರತ ಕೈಗೊಳ್ಳುತ್ತಾರೆಂದು ಯಾರೂ ಉಪವಾಸ ಮಾಡಬಾರದು. ಎಲ್ಲರೂ ಅವರವರ ದೇಹ ಸ್ಥಿತಿಗೆ ಅನುಗುಣವಾಗಿ ವ್ರತ ಪಾಲನೆ ಮಾಡಿದರೆ ಒಳ್ಳೆಯದು. 24ಗಂಟೆ ಉಪವಾಸ ಇರಲು ಸಾಧ್ಯವಿಲ್ಲದಿದ್ದರೆ 10ರಿಂದ 12 ಗಂಟೆಗಳ ಕಾಲವಿದ್ದು ನಂತರ ಮಿತವಾಗಿ ಹಣ್ಣು ಹಂಪಲು ಸೇವಿಸಬೇಕು. ಇದರಿಂದ ತಲೆಸುತ್ತುವಿಕೆ, ನಿಶ್ಯಕ್ತಿಯಂತಹ ಸಮಸ್ಯೆ ಬಾಧಿಸದು. ಜೊತೆಗೆ ಉಪವಾಸ ಬಿಡುವಾಗಲೂ ಅಷ್ಟೇ ಹಸಿವಾಗಿದೆ ಎಂದು ಅತಿಯಾಗಿ ತಿನ್ನದೇ ಮಿತ ಆಹಾರ ಸೇವಿಸಬೇಕು. ಇಲ್ಲದಿದ್ದರೆ ಅಜೀರ್ಣವಾಗುವ ಸಾಧ್ಯತೆ ಇದೆ.

-ವಂದನಾರವಿ ಕೆ.ವೈ.ವೇಣೂರು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಪ್ರೋಟಾನ್ ಥೆರಪಿ ಮೂಲಕ ಕ್ಯಾನ್ಸರ್ ಗೆ ಚಿಕಿತ್ಸೆ | ಕಿದ್ವಾಯಿ ಆಸ್ಪತ್ರೆಯಲ್ಲಿ ಸೌಲಭ್ಯ ಜಾರಿಗೆ ಪ್ರಸ್ತಾವನೆ

ಅತ್ಯಾಧುನಿಕವಾದ ಪ್ರೋಟಾನ್ ರೇಡಿಯೋ ಥೆರಪಿ ಮೂಲಕ ಕ್ಯಾನ್ಸರ್ ಶುಶ್ರೂಷೆಗೆ ಅಗತ್ಯ ಆರ್ಥಿಕ ನೆರವು…

9 hours ago

ನೈರುತ್ಯ ಮುಂಗಾರು ಉತ್ತರ ಒಳನಾಡಿನಲ್ಲಿ ತೀವ್ರ  | ರಾಜ್ಯದ ವಿವಿದೆಡೆ ಮಳೆ

ರಾಜ್ಯದಲ್ಲಿ ನೈರುತ್ಯ ಮುಂಗಾರು ಉತ್ತರ ಒಳನಾಡಿನಲ್ಲಿ ತೀವ್ರವಾಗಿದ್ದು, ದಕ್ಷಿಣ ಒಳನಾಡಿನಲ್ಲಿ ಸಕ್ರಿಯವಾಗಿದ್ದು, ಕರಾವಳಿಯಲ್ಲಿ…

9 hours ago

ಹಾವೇರಿ ಜಿಲ್ಲೆಯಲ್ಲಿ 441 ಸಾಕ್ಷರತಾ ಕಲಿಕಾ ಕೇಂದ್ರ ಸ್ಥಾಪನೆ

ಹಾವೇರಿ ಜಿಲ್ಲೆಯಲ್ಲಿರುವ ಅನಕ್ಷರಸ್ಥರನ್ನು ಅಕ್ಷರಸ್ಥರನ್ನಾಗಿ ಮಾಡಲು ನಿರಂತರವಾಗಿ ಪ್ರಯತ್ನಿಸಲಾಗುತ್ತಿದ್ದು, ಸಾಕ್ಷರತಾ ಕಾರ್ಯಕ್ರಮದಡಿ ಜಿಲ್ಲೆಯ…

9 hours ago

ಹವಾಮಾನ ವರದಿ | 09-06-2025 | ಜೂನ್ 10 ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ನಿರೀಕ್ಷೆ ಇದೆ | ಮುಂದಿನ 10 ದಿನಗಳವರೆಗೂ ಉತ್ತಮ ಮಳೆ ಸಾಧ್ಯತೆ|

ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳೀಯು ಪಶ್ಚಿಮಾಭಿಮುಖವಾಗಿ ಚಲಿಸುತ್ತಿದ್ದು, ಇದೇ ಸಂದರ್ಭದಲ್ಲಿ ಬಂಗಾಳಕೊಲ್ಲಿಯಲ್ಲೂ ಸಣ್ಣ…

19 hours ago

ಅಡಿಕೆಯ ಮೌಲ್ಯವರ್ಧಿತ ಉತ್ಪನ್ನಗಳು

ಭಾರತದಲ್ಲಿ ಉತ್ಪಾದನೆ ಆಗುತ್ತಿರುವ ಒಟ್ಟು ಅಡಿಕೆಯ ಪ್ರಮಾಣ ಸುಮಾರು ಹದಿನಾರು ಲಕ್ಷ ಟನ್,…

20 hours ago

ವಿಶ್ವದ ಅತೀ ಎತ್ತರದ ಚೆನಾಬ್ ರೈಲ್ವೆ ಸೇತುವೆ ನಿರ್ಮಾಣ | ಬೆಂಗಳೂರಿನ ಜಿ.ಮಾಧವಿ ಲತಾ ಪ್ರಮುಖ ಪಾತ್ರ | ಭೂತಾಂತ್ರಿಕ ಸಲಹೆಗಾರರಾಗಿ 17 ವರ್ಷಗಳ ಕಾಲ ಕೊಡುಗೆ

1,486 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಚೆನಾಬ್ ಸೇತುವೆಯನ್ನು ಸರ್ಕಾರವು "ಇತ್ತೀಚಿನ ಇತಿಹಾಸದಲ್ಲಿ…

23 hours ago