ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಿಜಾಬ್ ವಿವಾದದ ವರದಿ ಮಾಡಲು ತೆರಳಿದ್ದ ದೃಶ್ಯ ಮಾಧ್ಯಮದ ವರದಿಗಾರರ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ. ಘಟನೆಯನ್ನು ಖಂಡಿಸಿದ ಪತ್ರಕರ್ತರ ಸಂಘವು ತಕ್ಷಣವೇ ಆರೋಪಿಗಳನ್ನು ಬಂಧಿಸಲು ಒತ್ತಾಯಿಸಿದೆ.
ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಳೆದೊಂದು ವಾರದಿಂದ ಹಿಜಾಬ್ ವಿವಾದ ಚರ್ಚೆಯಾಗುತ್ತಿತ್ತು. ಹಿಜಾಬ್ ಕುರಿತಾಗಿ ನ್ಯಾಯಾಲಯದ ತೀರ್ಪು ಮತ್ತು ಸರ್ಕಾರದ ಸಮವಸ್ತ್ರ ನೀತಿ ಸಂಹಿತೆಯ ಬಳಿಕವು ಈ ಕಾಲೇಜಿನ ಕೆಲವು ವಿದ್ಯಾರ್ಥಿನಿಯರು ಹಿಜಾಬ್ ಧರಿಸಿಕೊಂಡು ಕಾಲೇಜಿಗೆ ಬರುತ್ತಿದ್ದರು. ಈ ಬಗ್ಗೆ ಪ್ರಿನ್ಸಿಪಾಲ್ ಸರ್ಕಾರದ ಕಟ್ಟುನಿಟ್ಟಿನ ನಿಯಮ ಮತ್ತು ಕೋರ್ಟ್ ಆದೇಶದ ಬಗ್ಗೆ ವಿವರವಾಗಿ ತಿಳಿಸಿದ ಬಳಿಕವೂ ಹಿಜಾಬ್ ಧಾರಣೆ ಮುಂದುವರಿದಿತ್ತು. ಹೀಗಾಗಿ ಆರು ವಿದ್ಯಾರ್ಥಿನಿಯರನ್ನು ಮುಂದಿನ ಆದೇಶದವರೆಗೆ ಕಾಲೇಜಿನಿಂದ ಅಮಾನತು ಮಾಡಿ ಪ್ರಿನ್ಸಿಪಾಲ್ ಜೂನ್ 1 ರಂದು ಆದೇಶ ಹೊರಡಿಸಿದ್ದರು.
ಇಂದು ಕಾಲೇಜ್ ಅವರಣದಲ್ಲಿ ಹಿಜಾಬ್ ಪರ ಹಾಗೂ ವಿರುದ್ದ ಇರುವ ತಂಡಗಳ ನಡುವೆ ವಾಗ್ವಾದ ನಡೆದಿದ್ದು, ಹಿಜಾಬ್ ಧರಿಸಿಕೊಂಡು ಬಂದ 6 ವಿದ್ಯಾರ್ಥಿನಿಯರನ್ನು ಕಾಲೇಜಿನ ಪ್ರಾಂಶುಪಾಲರು ಅಮಾನತುಗೊಳಿಸಿದ್ದರು. ಹೀಗಾಗಿ ವಿವಾದದ ಹಿನ್ನೆಲೆಯಲ್ಲಿ ದೃಶ್ಯ ಮಾಧ್ಯಮದ ಪ್ರಮುಖರ ಸೂಚನೆಯ ಮೇರೆಗೆ ವರದಿ ಮಾಡಲು ವರದಿಗಾರರು ತೆರಳಿದ್ದರು. ಈ ಸಂದರ್ಭ ದೃಶ್ಯ ಮಾಧ್ಯಮದ ವರದಿಗಾರರಿಗೆ ದಿಗ್ಬಂಧನ ಹಾಕಿ ಚಿತ್ರೀಕರಿಸಿದ ವೀಡಿಯೋಗಳನ್ನು ಬಲವಂತವಾಗಿ ಅಳಿಸಿ ಹಾಕಿ ವಿದ್ಯಾರ್ಥಿಗಳ ಗುಂಪೊಂದು ಹಲ್ಲೆ ನಡೆಸಿದ್ದಾರೆ ಎಂದು ದೃಶ್ಯ ಮಾಧ್ಯಮದ ವರದಿಗಾರರು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಇದುವರೆಗೂ ಹಿಜಾಬ್ ವಿವಾದವು ಸುದ್ದಿ ಮಾಧ್ಯಮಗಳ ಮೂಲಕವೇ ಹೆಚ್ಚು ಪ್ರಚಾರ ಪಡೆದಿತ್ತು.
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…