Advertisement
ಸುದ್ದಿಗಳು

ಉಪ್ಪಿನಂಗಡಿಯಲ್ಲಿ ಹಿಜಾಬ್‌ ವಿವಾದ | ವರದಿ ಮಾಡಲು ತೆರಳಿದ ಪತ್ರಕರ್ತರಿಗೆ ಹಲ್ಲೆ – ದೂರು | ಆರೋಪಿಗಳ ಬಂಧನಕ್ಕೆ ಪತ್ರಕರ್ತರ ಸಂಘ ಒತ್ತಾಯ |

Share

ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಿಜಾಬ್ ವಿವಾದದ ವರದಿ ಮಾಡಲು ತೆರಳಿದ್ದ ದೃಶ್ಯ ಮಾಧ್ಯಮದ ವರದಿಗಾರರ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ. ಘಟನೆಯನ್ನು ಖಂಡಿಸಿದ ಪತ್ರಕರ್ತರ ಸಂಘವು ತಕ್ಷಣವೇ ಆರೋಪಿಗಳನ್ನು ಬಂಧಿಸಲು ಒತ್ತಾಯಿಸಿದೆ.

ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಳೆದೊಂದು ವಾರದಿಂದ ಹಿಜಾಬ್‌ ವಿವಾದ ಚರ್ಚೆಯಾಗುತ್ತಿತ್ತು. ಹಿಜಾಬ್ ಕುರಿತಾಗಿ ನ್ಯಾಯಾಲಯದ ತೀರ್ಪು ಮತ್ತು ಸರ್ಕಾರದ ಸಮವಸ್ತ್ರ ನೀತಿ ಸಂಹಿತೆಯ ಬಳಿಕವು ಈ ಕಾಲೇಜಿನ ಕೆಲವು ವಿದ್ಯಾರ್ಥಿನಿಯರು ಹಿಜಾಬ್ ಧರಿಸಿಕೊಂಡು ಕಾಲೇಜಿಗೆ ಬರುತ್ತಿದ್ದರು. ಈ ಬಗ್ಗೆ ಪ್ರಿನ್ಸಿಪಾಲ್ ಸರ್ಕಾರದ ಕಟ್ಟುನಿಟ್ಟಿನ ನಿಯಮ ಮತ್ತು ಕೋರ್ಟ್ ಆದೇಶದ ಬಗ್ಗೆ ವಿವರವಾಗಿ ತಿಳಿಸಿದ ಬಳಿಕವೂ ಹಿಜಾಬ್ ಧಾರಣೆ ಮುಂದುವರಿದಿತ್ತು. ಹೀಗಾಗಿ ಆರು ವಿದ್ಯಾರ್ಥಿನಿಯರನ್ನು ಮುಂದಿನ ಆದೇಶದವರೆಗೆ ಕಾಲೇಜಿನಿಂದ ಅಮಾನತು ಮಾಡಿ ಪ್ರಿನ್ಸಿಪಾಲ್ ಜೂನ್ 1 ರಂದು ಆದೇಶ ಹೊರಡಿಸಿದ್ದರು.

ಇಂದು ಕಾಲೇಜ್ ಅವರಣದಲ್ಲಿ ಹಿಜಾಬ್ ಪರ ಹಾಗೂ ವಿರುದ್ದ ಇರುವ ತಂಡಗಳ ನಡುವೆ ವಾಗ್ವಾದ ನಡೆದಿದ್ದು, ಹಿಜಾಬ್ ಧರಿಸಿಕೊಂಡು ಬಂದ 6 ವಿದ್ಯಾರ್ಥಿನಿಯರನ್ನು ಕಾಲೇಜಿನ ಪ್ರಾಂಶುಪಾಲರು ಅಮಾನತುಗೊಳಿಸಿದ್ದರು. ಹೀಗಾಗಿ ವಿವಾದದ ಹಿನ್ನೆಲೆಯಲ್ಲಿ ದೃಶ್ಯ ಮಾಧ್ಯಮದ ಪ್ರಮುಖರ ಸೂಚನೆಯ ಮೇರೆಗೆ ವರದಿ ಮಾಡಲು ವರದಿಗಾರರು ತೆರಳಿದ್ದರು. ಈ ಸಂದರ್ಭ  ದೃಶ್ಯ ಮಾಧ್ಯಮದ ವರದಿಗಾರರಿಗೆ ದಿಗ್ಬಂಧನ ಹಾಕಿ ಚಿತ್ರೀಕರಿಸಿದ ವೀಡಿಯೋಗಳನ್ನು ಬಲವಂತವಾಗಿ ಅಳಿಸಿ ಹಾಕಿ ವಿದ್ಯಾರ್ಥಿಗಳ ಗುಂಪೊಂದು ಹಲ್ಲೆ ನಡೆಸಿದ್ದಾರೆ ಎಂದು ದೃಶ್ಯ ಮಾಧ್ಯಮದ ವರದಿಗಾರರು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಈ ಘಟನೆಯನ್ನು ಖಂಡಿಸಿದ ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಶ್ರವಣ್ ಕುಮಾರ್ ನಾಳ, ವರದಿಗೆ ತೆರಳಿದ ಪತ್ರಕರ್ತರ ಮೇಲಿನ ಹಲ್ಲೆ ಖಂಡನೀಯ. ತಕ್ಷಣವೇ ಆರೋಪಿಗಳನ್ನು ಬಂಧಿಸಬೇಕು. ಇಲ್ಲದೇ ಇದ್ದರೆ ಠಾಣೆಗೆ ಮುತ್ತಿಗೆ ಕೂಡಾ ಹಾಕಲು ಹಿಂದೇಟು ಹಾಕುವುದಿಲ್ಲ ಎಂದು ಹೇಳಿದ್ದಾರೆ.

ಇದುವರೆಗೂ ಹಿಜಾಬ್‌ ವಿವಾದವು ಸುದ್ದಿ ಮಾಧ್ಯಮಗಳ ಮೂಲಕವೇ ಹೆಚ್ಚು ಪ್ರಚಾರ ಪಡೆದಿತ್ತು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

12 hours ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ

ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…

13 hours ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಲೋಕದಲ್ಲಿ ಪುಟ್ಟ ಮನಸ್ಸಿನ ಖುಷಿ

ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…

14 hours ago

ವಿಘ್ನಗಳ ಆಚೆ ಕಾಣುವ ಗಣೇಶತತ್ತ್ವ

ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…

16 hours ago

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

1 day ago