ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಿಜಾಬ್ ವಿವಾದದ ವರದಿ ಮಾಡಲು ತೆರಳಿದ್ದ ದೃಶ್ಯ ಮಾಧ್ಯಮದ ವರದಿಗಾರರ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ. ಘಟನೆಯನ್ನು ಖಂಡಿಸಿದ ಪತ್ರಕರ್ತರ ಸಂಘವು ತಕ್ಷಣವೇ ಆರೋಪಿಗಳನ್ನು ಬಂಧಿಸಲು ಒತ್ತಾಯಿಸಿದೆ.
ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಳೆದೊಂದು ವಾರದಿಂದ ಹಿಜಾಬ್ ವಿವಾದ ಚರ್ಚೆಯಾಗುತ್ತಿತ್ತು. ಹಿಜಾಬ್ ಕುರಿತಾಗಿ ನ್ಯಾಯಾಲಯದ ತೀರ್ಪು ಮತ್ತು ಸರ್ಕಾರದ ಸಮವಸ್ತ್ರ ನೀತಿ ಸಂಹಿತೆಯ ಬಳಿಕವು ಈ ಕಾಲೇಜಿನ ಕೆಲವು ವಿದ್ಯಾರ್ಥಿನಿಯರು ಹಿಜಾಬ್ ಧರಿಸಿಕೊಂಡು ಕಾಲೇಜಿಗೆ ಬರುತ್ತಿದ್ದರು. ಈ ಬಗ್ಗೆ ಪ್ರಿನ್ಸಿಪಾಲ್ ಸರ್ಕಾರದ ಕಟ್ಟುನಿಟ್ಟಿನ ನಿಯಮ ಮತ್ತು ಕೋರ್ಟ್ ಆದೇಶದ ಬಗ್ಗೆ ವಿವರವಾಗಿ ತಿಳಿಸಿದ ಬಳಿಕವೂ ಹಿಜಾಬ್ ಧಾರಣೆ ಮುಂದುವರಿದಿತ್ತು. ಹೀಗಾಗಿ ಆರು ವಿದ್ಯಾರ್ಥಿನಿಯರನ್ನು ಮುಂದಿನ ಆದೇಶದವರೆಗೆ ಕಾಲೇಜಿನಿಂದ ಅಮಾನತು ಮಾಡಿ ಪ್ರಿನ್ಸಿಪಾಲ್ ಜೂನ್ 1 ರಂದು ಆದೇಶ ಹೊರಡಿಸಿದ್ದರು.
ಇಂದು ಕಾಲೇಜ್ ಅವರಣದಲ್ಲಿ ಹಿಜಾಬ್ ಪರ ಹಾಗೂ ವಿರುದ್ದ ಇರುವ ತಂಡಗಳ ನಡುವೆ ವಾಗ್ವಾದ ನಡೆದಿದ್ದು, ಹಿಜಾಬ್ ಧರಿಸಿಕೊಂಡು ಬಂದ 6 ವಿದ್ಯಾರ್ಥಿನಿಯರನ್ನು ಕಾಲೇಜಿನ ಪ್ರಾಂಶುಪಾಲರು ಅಮಾನತುಗೊಳಿಸಿದ್ದರು. ಹೀಗಾಗಿ ವಿವಾದದ ಹಿನ್ನೆಲೆಯಲ್ಲಿ ದೃಶ್ಯ ಮಾಧ್ಯಮದ ಪ್ರಮುಖರ ಸೂಚನೆಯ ಮೇರೆಗೆ ವರದಿ ಮಾಡಲು ವರದಿಗಾರರು ತೆರಳಿದ್ದರು. ಈ ಸಂದರ್ಭ ದೃಶ್ಯ ಮಾಧ್ಯಮದ ವರದಿಗಾರರಿಗೆ ದಿಗ್ಬಂಧನ ಹಾಕಿ ಚಿತ್ರೀಕರಿಸಿದ ವೀಡಿಯೋಗಳನ್ನು ಬಲವಂತವಾಗಿ ಅಳಿಸಿ ಹಾಕಿ ವಿದ್ಯಾರ್ಥಿಗಳ ಗುಂಪೊಂದು ಹಲ್ಲೆ ನಡೆಸಿದ್ದಾರೆ ಎಂದು ದೃಶ್ಯ ಮಾಧ್ಯಮದ ವರದಿಗಾರರು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಇದುವರೆಗೂ ಹಿಜಾಬ್ ವಿವಾದವು ಸುದ್ದಿ ಮಾಧ್ಯಮಗಳ ಮೂಲಕವೇ ಹೆಚ್ಚು ಪ್ರಚಾರ ಪಡೆದಿತ್ತು.
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…
ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…
ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್ನಲ್ಲಿ…
ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…