Advertisement
ಸುದ್ದಿಗಳು

ಉಪ್ಪಿನಂಗಡಿಯಲ್ಲಿ ಹಿಜಾಬ್‌ ವಿವಾದ | ವರದಿ ಮಾಡಲು ತೆರಳಿದ ಪತ್ರಕರ್ತರಿಗೆ ಹಲ್ಲೆ – ದೂರು | ಆರೋಪಿಗಳ ಬಂಧನಕ್ಕೆ ಪತ್ರಕರ್ತರ ಸಂಘ ಒತ್ತಾಯ |

Share

ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಿಜಾಬ್ ವಿವಾದದ ವರದಿ ಮಾಡಲು ತೆರಳಿದ್ದ ದೃಶ್ಯ ಮಾಧ್ಯಮದ ವರದಿಗಾರರ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ. ಘಟನೆಯನ್ನು ಖಂಡಿಸಿದ ಪತ್ರಕರ್ತರ ಸಂಘವು ತಕ್ಷಣವೇ ಆರೋಪಿಗಳನ್ನು ಬಂಧಿಸಲು ಒತ್ತಾಯಿಸಿದೆ.

Advertisement
Advertisement

ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಳೆದೊಂದು ವಾರದಿಂದ ಹಿಜಾಬ್‌ ವಿವಾದ ಚರ್ಚೆಯಾಗುತ್ತಿತ್ತು. ಹಿಜಾಬ್ ಕುರಿತಾಗಿ ನ್ಯಾಯಾಲಯದ ತೀರ್ಪು ಮತ್ತು ಸರ್ಕಾರದ ಸಮವಸ್ತ್ರ ನೀತಿ ಸಂಹಿತೆಯ ಬಳಿಕವು ಈ ಕಾಲೇಜಿನ ಕೆಲವು ವಿದ್ಯಾರ್ಥಿನಿಯರು ಹಿಜಾಬ್ ಧರಿಸಿಕೊಂಡು ಕಾಲೇಜಿಗೆ ಬರುತ್ತಿದ್ದರು. ಈ ಬಗ್ಗೆ ಪ್ರಿನ್ಸಿಪಾಲ್ ಸರ್ಕಾರದ ಕಟ್ಟುನಿಟ್ಟಿನ ನಿಯಮ ಮತ್ತು ಕೋರ್ಟ್ ಆದೇಶದ ಬಗ್ಗೆ ವಿವರವಾಗಿ ತಿಳಿಸಿದ ಬಳಿಕವೂ ಹಿಜಾಬ್ ಧಾರಣೆ ಮುಂದುವರಿದಿತ್ತು. ಹೀಗಾಗಿ ಆರು ವಿದ್ಯಾರ್ಥಿನಿಯರನ್ನು ಮುಂದಿನ ಆದೇಶದವರೆಗೆ ಕಾಲೇಜಿನಿಂದ ಅಮಾನತು ಮಾಡಿ ಪ್ರಿನ್ಸಿಪಾಲ್ ಜೂನ್ 1 ರಂದು ಆದೇಶ ಹೊರಡಿಸಿದ್ದರು.

Advertisement

ಇಂದು ಕಾಲೇಜ್ ಅವರಣದಲ್ಲಿ ಹಿಜಾಬ್ ಪರ ಹಾಗೂ ವಿರುದ್ದ ಇರುವ ತಂಡಗಳ ನಡುವೆ ವಾಗ್ವಾದ ನಡೆದಿದ್ದು, ಹಿಜಾಬ್ ಧರಿಸಿಕೊಂಡು ಬಂದ 6 ವಿದ್ಯಾರ್ಥಿನಿಯರನ್ನು ಕಾಲೇಜಿನ ಪ್ರಾಂಶುಪಾಲರು ಅಮಾನತುಗೊಳಿಸಿದ್ದರು. ಹೀಗಾಗಿ ವಿವಾದದ ಹಿನ್ನೆಲೆಯಲ್ಲಿ ದೃಶ್ಯ ಮಾಧ್ಯಮದ ಪ್ರಮುಖರ ಸೂಚನೆಯ ಮೇರೆಗೆ ವರದಿ ಮಾಡಲು ವರದಿಗಾರರು ತೆರಳಿದ್ದರು. ಈ ಸಂದರ್ಭ  ದೃಶ್ಯ ಮಾಧ್ಯಮದ ವರದಿಗಾರರಿಗೆ ದಿಗ್ಬಂಧನ ಹಾಕಿ ಚಿತ್ರೀಕರಿಸಿದ ವೀಡಿಯೋಗಳನ್ನು ಬಲವಂತವಾಗಿ ಅಳಿಸಿ ಹಾಕಿ ವಿದ್ಯಾರ್ಥಿಗಳ ಗುಂಪೊಂದು ಹಲ್ಲೆ ನಡೆಸಿದ್ದಾರೆ ಎಂದು ದೃಶ್ಯ ಮಾಧ್ಯಮದ ವರದಿಗಾರರು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಈ ಘಟನೆಯನ್ನು ಖಂಡಿಸಿದ ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಶ್ರವಣ್ ಕುಮಾರ್ ನಾಳ, ವರದಿಗೆ ತೆರಳಿದ ಪತ್ರಕರ್ತರ ಮೇಲಿನ ಹಲ್ಲೆ ಖಂಡನೀಯ. ತಕ್ಷಣವೇ ಆರೋಪಿಗಳನ್ನು ಬಂಧಿಸಬೇಕು. ಇಲ್ಲದೇ ಇದ್ದರೆ ಠಾಣೆಗೆ ಮುತ್ತಿಗೆ ಕೂಡಾ ಹಾಕಲು ಹಿಂದೇಟು ಹಾಕುವುದಿಲ್ಲ ಎಂದು ಹೇಳಿದ್ದಾರೆ.

ಇದುವರೆಗೂ ಹಿಜಾಬ್‌ ವಿವಾದವು ಸುದ್ದಿ ಮಾಧ್ಯಮಗಳ ಮೂಲಕವೇ ಹೆಚ್ಚು ಪ್ರಚಾರ ಪಡೆದಿತ್ತು.

Advertisement

 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

25 ವರ್ಷಗಳ ಹಿಂದೆ ಹೋದ ದೃಷ್ಟಿ ವಾಪಸು ಬಂತು

ಚಿಕ್ಕ ವಯಸ್ಸಿನ ಕುಕನೂರಿನ ಶಿವಾನಂದ ಕ್ರಿಕೆಟ್ ಫೀಲ್ಡಿಂಗ್ ಮಾಡುತ್ತಿದ್ದ. ಚಂಡು ಕಳ್ಳಿಯ ಪೊದೆಯಲ್ಲಿ…

3 hours ago

ಗೇರುಹಣ್ಣಿನ ಮೌಲ್ಯವರ್ಧನೆ : ಕೇರಳ ಕೃಷಿ ವಿವಿ ಸಾಧನೆ

ಬಹುತೇಕ ಕೊಳೆತು ಮಣ್ಣುಪಾಲಾಗುವ ಗೇರುಹಣ್ಣಿಗೂ(Cashew fruit)  ಮೌಲ್ಯವಿದೆ. ಆದರೆ ಮೌಲ್ಯವರ್ಧನೆ(Value addition) ಮಾಡಿದಾಗ ಮಾತ್ರ!…

4 hours ago

ನಿಮಗೆ ಗೊತ್ತೇ ???? ಬಿದಿರಿನ ಬಗೆಗಿನ ಕೆಲವು ಆಸಕ್ತಿದಾಯಕ ಸಂಗತಿಗಳು

ಬಿದಿರು(Bamboo) ನಾನಾರಿಗಲ್ಲದವಳು ಎಂಬ ಸಂತ ಶಿಶುನಾಳ ಶರೀಪರ(Shishunala Sharifa) ಹಾಡನ್ನು ನೀವು ಕೇಳಿರುತ್ತೀರಿ.…

4 hours ago

ಮೊಬೈಲ್ ಫೋನ್ ಅನ್ನು ನಿಮ್ಮ ದಿಂಬಿನ ಪಕ್ಕದಲ್ಲಿ ಇಟ್ಟುಕೊಂಡು ಮಲಗತ್ತೀರಾ..? ಈ ಸಮಸ್ಯೆಗಳನ್ನು ಎದುರಿಸಲು ಸಿದ್ಧರಾಗಿ…..!

ಇಂದು ಮೊಬೈಲ್ ಫೋನ್(Mobile Phone) ಪ್ರತಿಯೊಬ್ಬರ ಜೀವನದ ಅವಿಭಾಜ್ಯ ಅಂಗವಾಗಿದೆ. ಫೋನ್ ಅನ್ನು…

5 hours ago

ರಾಜ್ಯಾದ್ಯಂತ ಬಿರು ಬಿಸಿಲಿನ ಪರಿಣಾಮ : ಗಗನಕ್ಕೇರಿದ ಹಸಿ ಮೆಣಸಿನಕಾಯಿ ದರ : ಗ್ರಾಹಕರಿಗೆ ಜೋರಾದ ಖಾರದ ಅನುಭವ

ಕಳೆದ ಬಾರಿ ಕೆಂಪು ಮೆಣಸಿನಕಾಯಿ(Red chilli) ಬೆಲೆ(Price hike) ಗಗನಕ್ಕೇರಿತ್ತು. ಈ ಬಾರಿ…

5 hours ago

Karnataka Weather |11-05-2024 | ಹಲವು ಕಡೆ ಗುಡುಗು ಸಹಿತ ಮಳೆ ನಿರೀಕ್ಷೆ |

ಈಗಿನ ಪ್ರಕಾರ ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ.

8 hours ago