ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಿಜಾಬ್ ವಿವಾದದ ವರದಿ ಮಾಡಲು ತೆರಳಿದ್ದ ದೃಶ್ಯ ಮಾಧ್ಯಮದ ವರದಿಗಾರರ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ. ಘಟನೆಯನ್ನು ಖಂಡಿಸಿದ ಪತ್ರಕರ್ತರ ಸಂಘವು ತಕ್ಷಣವೇ ಆರೋಪಿಗಳನ್ನು ಬಂಧಿಸಲು ಒತ್ತಾಯಿಸಿದೆ.
ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಳೆದೊಂದು ವಾರದಿಂದ ಹಿಜಾಬ್ ವಿವಾದ ಚರ್ಚೆಯಾಗುತ್ತಿತ್ತು. ಹಿಜಾಬ್ ಕುರಿತಾಗಿ ನ್ಯಾಯಾಲಯದ ತೀರ್ಪು ಮತ್ತು ಸರ್ಕಾರದ ಸಮವಸ್ತ್ರ ನೀತಿ ಸಂಹಿತೆಯ ಬಳಿಕವು ಈ ಕಾಲೇಜಿನ ಕೆಲವು ವಿದ್ಯಾರ್ಥಿನಿಯರು ಹಿಜಾಬ್ ಧರಿಸಿಕೊಂಡು ಕಾಲೇಜಿಗೆ ಬರುತ್ತಿದ್ದರು. ಈ ಬಗ್ಗೆ ಪ್ರಿನ್ಸಿಪಾಲ್ ಸರ್ಕಾರದ ಕಟ್ಟುನಿಟ್ಟಿನ ನಿಯಮ ಮತ್ತು ಕೋರ್ಟ್ ಆದೇಶದ ಬಗ್ಗೆ ವಿವರವಾಗಿ ತಿಳಿಸಿದ ಬಳಿಕವೂ ಹಿಜಾಬ್ ಧಾರಣೆ ಮುಂದುವರಿದಿತ್ತು. ಹೀಗಾಗಿ ಆರು ವಿದ್ಯಾರ್ಥಿನಿಯರನ್ನು ಮುಂದಿನ ಆದೇಶದವರೆಗೆ ಕಾಲೇಜಿನಿಂದ ಅಮಾನತು ಮಾಡಿ ಪ್ರಿನ್ಸಿಪಾಲ್ ಜೂನ್ 1 ರಂದು ಆದೇಶ ಹೊರಡಿಸಿದ್ದರು.
ಇಂದು ಕಾಲೇಜ್ ಅವರಣದಲ್ಲಿ ಹಿಜಾಬ್ ಪರ ಹಾಗೂ ವಿರುದ್ದ ಇರುವ ತಂಡಗಳ ನಡುವೆ ವಾಗ್ವಾದ ನಡೆದಿದ್ದು, ಹಿಜಾಬ್ ಧರಿಸಿಕೊಂಡು ಬಂದ 6 ವಿದ್ಯಾರ್ಥಿನಿಯರನ್ನು ಕಾಲೇಜಿನ ಪ್ರಾಂಶುಪಾಲರು ಅಮಾನತುಗೊಳಿಸಿದ್ದರು. ಹೀಗಾಗಿ ವಿವಾದದ ಹಿನ್ನೆಲೆಯಲ್ಲಿ ದೃಶ್ಯ ಮಾಧ್ಯಮದ ಪ್ರಮುಖರ ಸೂಚನೆಯ ಮೇರೆಗೆ ವರದಿ ಮಾಡಲು ವರದಿಗಾರರು ತೆರಳಿದ್ದರು. ಈ ಸಂದರ್ಭ ದೃಶ್ಯ ಮಾಧ್ಯಮದ ವರದಿಗಾರರಿಗೆ ದಿಗ್ಬಂಧನ ಹಾಕಿ ಚಿತ್ರೀಕರಿಸಿದ ವೀಡಿಯೋಗಳನ್ನು ಬಲವಂತವಾಗಿ ಅಳಿಸಿ ಹಾಕಿ ವಿದ್ಯಾರ್ಥಿಗಳ ಗುಂಪೊಂದು ಹಲ್ಲೆ ನಡೆಸಿದ್ದಾರೆ ಎಂದು ದೃಶ್ಯ ಮಾಧ್ಯಮದ ವರದಿಗಾರರು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಇದುವರೆಗೂ ಹಿಜಾಬ್ ವಿವಾದವು ಸುದ್ದಿ ಮಾಧ್ಯಮಗಳ ಮೂಲಕವೇ ಹೆಚ್ಚು ಪ್ರಚಾರ ಪಡೆದಿತ್ತು.
ಚಿಕ್ಕ ವಯಸ್ಸಿನ ಕುಕನೂರಿನ ಶಿವಾನಂದ ಕ್ರಿಕೆಟ್ ಫೀಲ್ಡಿಂಗ್ ಮಾಡುತ್ತಿದ್ದ. ಚಂಡು ಕಳ್ಳಿಯ ಪೊದೆಯಲ್ಲಿ…
ಬಹುತೇಕ ಕೊಳೆತು ಮಣ್ಣುಪಾಲಾಗುವ ಗೇರುಹಣ್ಣಿಗೂ(Cashew fruit) ಮೌಲ್ಯವಿದೆ. ಆದರೆ ಮೌಲ್ಯವರ್ಧನೆ(Value addition) ಮಾಡಿದಾಗ ಮಾತ್ರ!…
ಬಿದಿರು(Bamboo) ನಾನಾರಿಗಲ್ಲದವಳು ಎಂಬ ಸಂತ ಶಿಶುನಾಳ ಶರೀಪರ(Shishunala Sharifa) ಹಾಡನ್ನು ನೀವು ಕೇಳಿರುತ್ತೀರಿ.…
ಇಂದು ಮೊಬೈಲ್ ಫೋನ್(Mobile Phone) ಪ್ರತಿಯೊಬ್ಬರ ಜೀವನದ ಅವಿಭಾಜ್ಯ ಅಂಗವಾಗಿದೆ. ಫೋನ್ ಅನ್ನು…
ಕಳೆದ ಬಾರಿ ಕೆಂಪು ಮೆಣಸಿನಕಾಯಿ(Red chilli) ಬೆಲೆ(Price hike) ಗಗನಕ್ಕೇರಿತ್ತು. ಈ ಬಾರಿ…
ಈಗಿನ ಪ್ರಕಾರ ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ.