Advertisement
ಸುದ್ದಿಗಳು

ಉಪ್ಪಿನಂಗಡಿಯಲ್ಲಿ ಹಿಜಾಬ್‌ ವಿವಾದ | ವರದಿ ಮಾಡಲು ತೆರಳಿದ ಪತ್ರಕರ್ತರಿಗೆ ಹಲ್ಲೆ – ದೂರು | ಆರೋಪಿಗಳ ಬಂಧನಕ್ಕೆ ಪತ್ರಕರ್ತರ ಸಂಘ ಒತ್ತಾಯ |

Share

ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಿಜಾಬ್ ವಿವಾದದ ವರದಿ ಮಾಡಲು ತೆರಳಿದ್ದ ದೃಶ್ಯ ಮಾಧ್ಯಮದ ವರದಿಗಾರರ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ. ಘಟನೆಯನ್ನು ಖಂಡಿಸಿದ ಪತ್ರಕರ್ತರ ಸಂಘವು ತಕ್ಷಣವೇ ಆರೋಪಿಗಳನ್ನು ಬಂಧಿಸಲು ಒತ್ತಾಯಿಸಿದೆ.

ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಳೆದೊಂದು ವಾರದಿಂದ ಹಿಜಾಬ್‌ ವಿವಾದ ಚರ್ಚೆಯಾಗುತ್ತಿತ್ತು. ಹಿಜಾಬ್ ಕುರಿತಾಗಿ ನ್ಯಾಯಾಲಯದ ತೀರ್ಪು ಮತ್ತು ಸರ್ಕಾರದ ಸಮವಸ್ತ್ರ ನೀತಿ ಸಂಹಿತೆಯ ಬಳಿಕವು ಈ ಕಾಲೇಜಿನ ಕೆಲವು ವಿದ್ಯಾರ್ಥಿನಿಯರು ಹಿಜಾಬ್ ಧರಿಸಿಕೊಂಡು ಕಾಲೇಜಿಗೆ ಬರುತ್ತಿದ್ದರು. ಈ ಬಗ್ಗೆ ಪ್ರಿನ್ಸಿಪಾಲ್ ಸರ್ಕಾರದ ಕಟ್ಟುನಿಟ್ಟಿನ ನಿಯಮ ಮತ್ತು ಕೋರ್ಟ್ ಆದೇಶದ ಬಗ್ಗೆ ವಿವರವಾಗಿ ತಿಳಿಸಿದ ಬಳಿಕವೂ ಹಿಜಾಬ್ ಧಾರಣೆ ಮುಂದುವರಿದಿತ್ತು. ಹೀಗಾಗಿ ಆರು ವಿದ್ಯಾರ್ಥಿನಿಯರನ್ನು ಮುಂದಿನ ಆದೇಶದವರೆಗೆ ಕಾಲೇಜಿನಿಂದ ಅಮಾನತು ಮಾಡಿ ಪ್ರಿನ್ಸಿಪಾಲ್ ಜೂನ್ 1 ರಂದು ಆದೇಶ ಹೊರಡಿಸಿದ್ದರು.

ಇಂದು ಕಾಲೇಜ್ ಅವರಣದಲ್ಲಿ ಹಿಜಾಬ್ ಪರ ಹಾಗೂ ವಿರುದ್ದ ಇರುವ ತಂಡಗಳ ನಡುವೆ ವಾಗ್ವಾದ ನಡೆದಿದ್ದು, ಹಿಜಾಬ್ ಧರಿಸಿಕೊಂಡು ಬಂದ 6 ವಿದ್ಯಾರ್ಥಿನಿಯರನ್ನು ಕಾಲೇಜಿನ ಪ್ರಾಂಶುಪಾಲರು ಅಮಾನತುಗೊಳಿಸಿದ್ದರು. ಹೀಗಾಗಿ ವಿವಾದದ ಹಿನ್ನೆಲೆಯಲ್ಲಿ ದೃಶ್ಯ ಮಾಧ್ಯಮದ ಪ್ರಮುಖರ ಸೂಚನೆಯ ಮೇರೆಗೆ ವರದಿ ಮಾಡಲು ವರದಿಗಾರರು ತೆರಳಿದ್ದರು. ಈ ಸಂದರ್ಭ  ದೃಶ್ಯ ಮಾಧ್ಯಮದ ವರದಿಗಾರರಿಗೆ ದಿಗ್ಬಂಧನ ಹಾಕಿ ಚಿತ್ರೀಕರಿಸಿದ ವೀಡಿಯೋಗಳನ್ನು ಬಲವಂತವಾಗಿ ಅಳಿಸಿ ಹಾಕಿ ವಿದ್ಯಾರ್ಥಿಗಳ ಗುಂಪೊಂದು ಹಲ್ಲೆ ನಡೆಸಿದ್ದಾರೆ ಎಂದು ದೃಶ್ಯ ಮಾಧ್ಯಮದ ವರದಿಗಾರರು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಈ ಘಟನೆಯನ್ನು ಖಂಡಿಸಿದ ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಶ್ರವಣ್ ಕುಮಾರ್ ನಾಳ, ವರದಿಗೆ ತೆರಳಿದ ಪತ್ರಕರ್ತರ ಮೇಲಿನ ಹಲ್ಲೆ ಖಂಡನೀಯ. ತಕ್ಷಣವೇ ಆರೋಪಿಗಳನ್ನು ಬಂಧಿಸಬೇಕು. ಇಲ್ಲದೇ ಇದ್ದರೆ ಠಾಣೆಗೆ ಮುತ್ತಿಗೆ ಕೂಡಾ ಹಾಕಲು ಹಿಂದೇಟು ಹಾಕುವುದಿಲ್ಲ ಎಂದು ಹೇಳಿದ್ದಾರೆ.

ಇದುವರೆಗೂ ಹಿಜಾಬ್‌ ವಿವಾದವು ಸುದ್ದಿ ಮಾಧ್ಯಮಗಳ ಮೂಲಕವೇ ಹೆಚ್ಚು ಪ್ರಚಾರ ಪಡೆದಿತ್ತು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

3 hours ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

5 hours ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

12 hours ago

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ

ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…

18 hours ago

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

1 day ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

1 day ago