Advertisement
ಹೊಸರುಚಿ-ಅಡುಗೆ

ಹೊಸರುಚಿ | ಮನೆಲ್ಲೇ ಸುಲಭವಾಗಿ ಮಾಡುವ “ಉಪ್ಪು ಸೊಳೆ ಬೋಳು ಬೆಂದಿ”

Share

ಬಿಸಿ ಬಿಸಿ ಅನ್ನಕ್ಕೆ ಸರಳವಾದ ಆದರೆ ರುಚಿಕರವಾದ ಪದಾರ್ಥಗಳು ಬೇಕು. ಅಂತಹ ಸಾಂಪ್ರದಾಯಿಕ ಊಟಗಳಲ್ಲಿ ಒಂದೇ ಉಪ್ಪು ಸೊಳೆ ಬೋಳು ಬೆಂದಿ.
ಸ್ವಲ್ಪ ಹುಳಿ, ಸಿಹಿ ಹಾಗೂ ಖಾರದ ಮಿಶ್ರಣ ಹೊಂದಿರುವ ಈ ತಿನಿಸು ಗ್ರಾಮೀಣ ಅಡುಗೆ ಸಂಸ್ಕೃತಿಯ ರುಚಿಯನ್ನು ನೆನಪಿಸುತ್ತದೆ. ಬಿಸಿ ಅನ್ನಕ್ಕೆ ತುಪ್ಪ ಹಾಕಿ ಈ ಬೋಳು ಬೆಂದಿ ಜೊತೆ ತಿಂದರೆ ಅದರ ಸವಿಯೇ ವಿಭಿನ್ನ.

ಬೇಕಾಗುವ ಸಾಮಗ್ರಿಗಳು:

  • ಉಪ್ಪು ಸೊಳೆ – ½ ಕಪ್

  • ಬೆಲ್ಲ – ರುಚಿಗೆ ತಕ್ಕಷ್ಟು

  • ಮೆಣಸಿನ ಪುಡಿ – 1½ ಚಮಚ

  • ಹುಣಸೆ ರಸ – ¼ ಕಪ್

  • ಎಣ್ಣೆ – 2 ಚಮಚ

  • ಸಾಸಿವೆ – ½ ಚಮಚ

  • ಬೆಳ್ಳುಳ್ಳಿ – ಕೆಲವು ಕಾಳು

  • ಒಣ ಕೆಂಪು ಮೆಣಸು – 2

  • ಕರಿಬೇವಿನ ಎಲೆ – ಸ್ವಲ್ಪ

  • ನೀರು – ಅಗತ್ಯವಿದ್ದಷ್ಟು

ಮಾಡುವ ವಿಧಾನ :  ಮೊದಲು ಉಪ್ಪು ಸೊಳೆಯನ್ನು ಸುಮಾರು ಒಂದು ಗಂಟೆ ಬಿಸಿ ನೀರಿನಲ್ಲಿ ನೆನೆಸಿಡಬೇಕು. ನಂತರ ಅದನ್ನು ಸಣ್ಣ ತುಂಡುಗಳಾಗಿ ಕತ್ತರಿಸಿ ಚೆನ್ನಾಗಿ ಬೇಯಿಸಬೇಕು. ಬೇಯಿಸಿದ ಸೊಳೆಯನ್ನು ನಂತರ ತರಿ ತರಿಯಾಗಿ ರುಬ್ಬಿ.

ಇದಾದ ಬಳಿಕ ಬಾಣಲೆಗೆ ರುಬ್ಬಿದ ಮಿಶ್ರಣ ಹಾಕಿ ಅದಕ್ಕೆ ಸ್ವಲ್ಪ ನೀರು, ಬೆಲ್ಲ, ಮೆಣಸಿನ ಪುಡಿ ಹಾಗೂ ಹುಣಸೆ ರಸ ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ ಕುದಿಸಬೇಕು. ಕುದಿದ ಬಳಿಕ ಸ್ಟವ್ ಆಫ್ ಮಾಡಬೇಕು.

ನಂತರ ಒಂದು ಪಾತ್ರೆಯಲ್ಲಿ ಎಣ್ಣೆ ಹಾಕಿ ಸಾಸಿವೆ, ಬೆಳ್ಳುಳ್ಳಿ, ಒಣ ಕೆಂಪು ಮೆಣಸು ಹಾಗೂ ಕರಿಬೇವಿನ ಎಲೆ ಹಾಕಿ ಒಗ್ಗರಣೆ ಮಾಡಬೇಕು. ಈ ಒಗ್ಗರಣೆಯನ್ನು ಬೋಳು ಬೆಂದಿಗೆ ಸೇರಿಸಿದರೆ ರುಚಿ ಇನ್ನಷ್ಟು ಹೆಚ್ಚುತ್ತದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಗಮನಿಸಿ: ಉಪ್ಪು ಸೊಳೆಯಲ್ಲಿ ಈಗಾಗಲೇ ಉಪ್ಪು ಇರುವುದರಿಂದ ಹೆಚ್ಚುವರಿ ಉಪ್ಪು ಹಾಕುವ ಅಗತ್ಯವಿಲ್ಲ.  ಬಿಸಿ ಬಿಸಿ ಅನ್ನಕ್ಕೆ ತುಪ್ಪ ಹಾಕಿ ಈ ಬೋಳು ಬೆಂದಿ ಜೊತೆ ತಿಂದರೆ ಊಟದ ಸವಿ ದ್ವಿಗುಣವಾಗುತ್ತದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

Published by
ದಿವ್ಯ ಮಹೇಶ್

Recent Posts

ಭತ್ತದ ಗದ್ದೆಯಿಂದ ಅಡಿಕೆ ತೋಟ | ಮಣ್ಣಿನ ಆರೋಗ್ಯದ ಮೇಲೆ ಪರಿಣಾಮ ಬಿಚ್ಚಿಟ್ಟ ಸಂಶೋಧನೆ

ಅಕ್ಕಿ ಗದ್ದೆಗಳನ್ನು ಅಡಿಕೆ ತೋಟಗಳಾಗಿ ಪರಿವರ್ತಿಸಿದಾಗ ಮಣ್ಣಿನ ನೈಟ್ರೋಜನ್‌ ಲಭ್ಯತೆ ಕಡಿಮೆಯಾಗುತ್ತದೆ ಎಂದು…

33 minutes ago

ಹವಾಮಾನ ವರದಿ | 09-03-2026 | ಕರಾವಳಿ–ಮಲೆನಾಡಿನಲ್ಲಿ ಇಂದು ಸಂಜೆ ಗುಡುಗು ಮಳೆಯ ಸಾಧ್ಯತೆ | ಮಾರ್ಚ್ ಮಧ್ಯಭಾಗದಲ್ಲಿ ಮಳೆ ಚಟುವಟಿಕೆ ಹೆಚ್ಚಳ..?

ರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಿಸಿಲಿನೊಂದಿಗೆ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕರಾವಳಿ ಹಾಗೂ…

8 hours ago

ರೈತರಿಂದ ಉದ್ಯಮಿಗಳವರೆಗೆ : ಕೃಷಿ ಕ್ಷೇತ್ರಕ್ಕೆ ಸರ್ಕಾರದ ಹೊಸ ದೃಷ್ಟಿಕೋನ

ರೈತರನ್ನು ಉದ್ಯಮಿಗಳನ್ನಾಗಿ ಮಾಡಲು ಬೆಳೆ ಮೌಲ್ಯವರ್ಧನೆ ಮತ್ತು ಮಾರುಕಟ್ಟೆ ಸಂಪರ್ಕ ವ್ಯವಸ್ಥೆಗಳನ್ನು ಸರ್ಕಾರ…

16 hours ago

ಎಲೆಚುಕ್ಕಿ ರೋಗದಿಂದ ಅಡಿಕೆ ರೈತರಿಗೆ ಸಂಕಷ್ಟ | ಸಾಲ ಮರುಪಾವತಿ ಒಂದು ವರ್ಷ ಮುಂದೂಡುವ ಪ್ರಸ್ತಾವನೆ..!

ಉತ್ತರ ಕನ್ನಡದಲ್ಲಿ ಎಲೆಚುಕ್ಕಿ ರೋಗದಿಂದ ಸಂಕಷ್ಟದಲ್ಲಿರುವ ಅಡಿಕೆ ಬೆಳೆಗಾರರಿಗೆ ಸಾಲ ಮರುಪಾವತಿ ಅವಧಿ…

16 hours ago

ಕೃಷಿಯ ನಿಜವಾದ ಶಕ್ತಿ ಮಹಿಳೆಯರು : ಭಾರತದಲ್ಲಿ ಮೌನ ಕ್ರಾಂತಿ ಶುರುವಾಗಿದೆ..!

ಭಾರತದ ಕೃಷಿಯಲ್ಲಿ ಮಹಿಳೆಯರ ಪಾತ್ರ ದಿನೇದಿನೇ ಹೆಚ್ಚುತ್ತಿದೆ. ಸಂಪನ್ಮೂಲ ಹಾಗೂ ನಾಯಕತ್ವ ಅವಕಾಶ…

1 day ago

ಅಡಿಕೆ ಮಾರುಕಟ್ಟೆ- ಸದ್ಯ ಮಾರುಕಟ್ಟೆ ಸ್ಥಿರ | ರಬ್ಬರ್‌ ಧಾರಣೆ ಇಳಿಕೆಯ ಹಾದಿ

ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…

2 days ago