Advertisement
ಹೊಸರುಚಿ-ಅಡುಗೆ

ಹೊಸರುಚಿ | ಮನೆಲ್ಲೇ ಸುಲಭವಾಗಿ ಮಾಡುವ “ಉಪ್ಪು ಸೊಳೆ ಬೋಳು ಬೆಂದಿ”

Share

ಬಿಸಿ ಬಿಸಿ ಅನ್ನಕ್ಕೆ ಸರಳವಾದ ಆದರೆ ರುಚಿಕರವಾದ ಪದಾರ್ಥಗಳು ಬೇಕು. ಅಂತಹ ಸಾಂಪ್ರದಾಯಿಕ ಊಟಗಳಲ್ಲಿ ಒಂದೇ ಉಪ್ಪು ಸೊಳೆ ಬೋಳು ಬೆಂದಿ.
ಸ್ವಲ್ಪ ಹುಳಿ, ಸಿಹಿ ಹಾಗೂ ಖಾರದ ಮಿಶ್ರಣ ಹೊಂದಿರುವ ಈ ತಿನಿಸು ಗ್ರಾಮೀಣ ಅಡುಗೆ ಸಂಸ್ಕೃತಿಯ ರುಚಿಯನ್ನು ನೆನಪಿಸುತ್ತದೆ. ಬಿಸಿ ಅನ್ನಕ್ಕೆ ತುಪ್ಪ ಹಾಕಿ ಈ ಬೋಳು ಬೆಂದಿ ಜೊತೆ ತಿಂದರೆ ಅದರ ಸವಿಯೇ ವಿಭಿನ್ನ.

ಬೇಕಾಗುವ ಸಾಮಗ್ರಿಗಳು:

Advertisement
  • ಉಪ್ಪು ಸೊಳೆ – ½ ಕಪ್

  • ಬೆಲ್ಲ – ರುಚಿಗೆ ತಕ್ಕಷ್ಟು

    Advertisement
  • ಮೆಣಸಿನ ಪುಡಿ – 1½ ಚಮಚ

  • ಹುಣಸೆ ರಸ – ¼ ಕಪ್

    Advertisement
  • ಎಣ್ಣೆ – 2 ಚಮಚ

  • ಸಾಸಿವೆ – ½ ಚಮಚ

    Advertisement
  • ಬೆಳ್ಳುಳ್ಳಿ – ಕೆಲವು ಕಾಳು

  • ಒಣ ಕೆಂಪು ಮೆಣಸು – 2

    Advertisement
  • ಕರಿಬೇವಿನ ಎಲೆ – ಸ್ವಲ್ಪ

  • ನೀರು – ಅಗತ್ಯವಿದ್ದಷ್ಟು

    Advertisement

ಮಾಡುವ ವಿಧಾನ :  ಮೊದಲು ಉಪ್ಪು ಸೊಳೆಯನ್ನು ಸುಮಾರು ಒಂದು ಗಂಟೆ ಬಿಸಿ ನೀರಿನಲ್ಲಿ ನೆನೆಸಿಡಬೇಕು. ನಂತರ ಅದನ್ನು ಸಣ್ಣ ತುಂಡುಗಳಾಗಿ ಕತ್ತರಿಸಿ ಚೆನ್ನಾಗಿ ಬೇಯಿಸಬೇಕು. ಬೇಯಿಸಿದ ಸೊಳೆಯನ್ನು ನಂತರ ತರಿ ತರಿಯಾಗಿ ರುಬ್ಬಿ.

ಇದಾದ ಬಳಿಕ ಬಾಣಲೆಗೆ ರುಬ್ಬಿದ ಮಿಶ್ರಣ ಹಾಕಿ ಅದಕ್ಕೆ ಸ್ವಲ್ಪ ನೀರು, ಬೆಲ್ಲ, ಮೆಣಸಿನ ಪುಡಿ ಹಾಗೂ ಹುಣಸೆ ರಸ ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ ಕುದಿಸಬೇಕು. ಕುದಿದ ಬಳಿಕ ಸ್ಟವ್ ಆಫ್ ಮಾಡಬೇಕು.

Advertisement

ನಂತರ ಒಂದು ಪಾತ್ರೆಯಲ್ಲಿ ಎಣ್ಣೆ ಹಾಕಿ ಸಾಸಿವೆ, ಬೆಳ್ಳುಳ್ಳಿ, ಒಣ ಕೆಂಪು ಮೆಣಸು ಹಾಗೂ ಕರಿಬೇವಿನ ಎಲೆ ಹಾಕಿ ಒಗ್ಗರಣೆ ಮಾಡಬೇಕು. ಈ ಒಗ್ಗರಣೆಯನ್ನು ಬೋಳು ಬೆಂದಿಗೆ ಸೇರಿಸಿದರೆ ರುಚಿ ಇನ್ನಷ್ಟು ಹೆಚ್ಚುತ್ತದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಗಮನಿಸಿ: ಉಪ್ಪು ಸೊಳೆಯಲ್ಲಿ ಈಗಾಗಲೇ ಉಪ್ಪು ಇರುವುದರಿಂದ ಹೆಚ್ಚುವರಿ ಉಪ್ಪು ಹಾಕುವ ಅಗತ್ಯವಿಲ್ಲ.  ಬಿಸಿ ಬಿಸಿ ಅನ್ನಕ್ಕೆ ತುಪ್ಪ ಹಾಕಿ ಈ ಬೋಳು ಬೆಂದಿ ಜೊತೆ ತಿಂದರೆ ಊಟದ ಸವಿ ದ್ವಿಗುಣವಾಗುತ್ತದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

Published by
ದಿವ್ಯ ಮಹೇಶ್

Recent Posts

ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ

ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…

7 hours ago

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…

1 day ago

ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ

ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…

1 day ago

ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ

ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…

2 days ago

ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು

ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…

2 days ago

ಭಾರೀ ಮಳೆ ಎಚ್ಚರಿಕೆ : 13 ರಾಜ್ಯಗಳಿಗೆ IMD ಅಲರ್ಟ್‌ | ಉಳಿದೆಡೆ ಉಷ್ಣ ಅಲೆ ಮುಂದುವರಿಕೆ

ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…

2 days ago