Advertisement
ಹೊಸರುಚಿ-ಅಡುಗೆ

ಹೊಸರುಚಿ | ಮನೆಲ್ಲೇ ಸುಲಭವಾಗಿ ಮಾಡುವ “ಉಪ್ಪು ಸೊಳೆ ಬೋಳು ಬೆಂದಿ”

Share

ಬಿಸಿ ಬಿಸಿ ಅನ್ನಕ್ಕೆ ಸರಳವಾದ ಆದರೆ ರುಚಿಕರವಾದ ಪದಾರ್ಥಗಳು ಬೇಕು. ಅಂತಹ ಸಾಂಪ್ರದಾಯಿಕ ಊಟಗಳಲ್ಲಿ ಒಂದೇ ಉಪ್ಪು ಸೊಳೆ ಬೋಳು ಬೆಂದಿ.
ಸ್ವಲ್ಪ ಹುಳಿ, ಸಿಹಿ ಹಾಗೂ ಖಾರದ ಮಿಶ್ರಣ ಹೊಂದಿರುವ ಈ ತಿನಿಸು ಗ್ರಾಮೀಣ ಅಡುಗೆ ಸಂಸ್ಕೃತಿಯ ರುಚಿಯನ್ನು ನೆನಪಿಸುತ್ತದೆ. ಬಿಸಿ ಅನ್ನಕ್ಕೆ ತುಪ್ಪ ಹಾಕಿ ಈ ಬೋಳು ಬೆಂದಿ ಜೊತೆ ತಿಂದರೆ ಅದರ ಸವಿಯೇ ವಿಭಿನ್ನ.

ಬೇಕಾಗುವ ಸಾಮಗ್ರಿಗಳು:

  • ಉಪ್ಪು ಸೊಳೆ – ½ ಕಪ್

  • ಬೆಲ್ಲ – ರುಚಿಗೆ ತಕ್ಕಷ್ಟು

  • ಮೆಣಸಿನ ಪುಡಿ – 1½ ಚಮಚ

  • ಹುಣಸೆ ರಸ – ¼ ಕಪ್

  • ಎಣ್ಣೆ – 2 ಚಮಚ

  • ಸಾಸಿವೆ – ½ ಚಮಚ

  • ಬೆಳ್ಳುಳ್ಳಿ – ಕೆಲವು ಕಾಳು

  • ಒಣ ಕೆಂಪು ಮೆಣಸು – 2

  • ಕರಿಬೇವಿನ ಎಲೆ – ಸ್ವಲ್ಪ

  • ನೀರು – ಅಗತ್ಯವಿದ್ದಷ್ಟು

ಮಾಡುವ ವಿಧಾನ :  ಮೊದಲು ಉಪ್ಪು ಸೊಳೆಯನ್ನು ಸುಮಾರು ಒಂದು ಗಂಟೆ ಬಿಸಿ ನೀರಿನಲ್ಲಿ ನೆನೆಸಿಡಬೇಕು. ನಂತರ ಅದನ್ನು ಸಣ್ಣ ತುಂಡುಗಳಾಗಿ ಕತ್ತರಿಸಿ ಚೆನ್ನಾಗಿ ಬೇಯಿಸಬೇಕು. ಬೇಯಿಸಿದ ಸೊಳೆಯನ್ನು ನಂತರ ತರಿ ತರಿಯಾಗಿ ರುಬ್ಬಿ.

ಇದಾದ ಬಳಿಕ ಬಾಣಲೆಗೆ ರುಬ್ಬಿದ ಮಿಶ್ರಣ ಹಾಕಿ ಅದಕ್ಕೆ ಸ್ವಲ್ಪ ನೀರು, ಬೆಲ್ಲ, ಮೆಣಸಿನ ಪುಡಿ ಹಾಗೂ ಹುಣಸೆ ರಸ ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ ಕುದಿಸಬೇಕು. ಕುದಿದ ಬಳಿಕ ಸ್ಟವ್ ಆಫ್ ಮಾಡಬೇಕು.

ನಂತರ ಒಂದು ಪಾತ್ರೆಯಲ್ಲಿ ಎಣ್ಣೆ ಹಾಕಿ ಸಾಸಿವೆ, ಬೆಳ್ಳುಳ್ಳಿ, ಒಣ ಕೆಂಪು ಮೆಣಸು ಹಾಗೂ ಕರಿಬೇವಿನ ಎಲೆ ಹಾಕಿ ಒಗ್ಗರಣೆ ಮಾಡಬೇಕು. ಈ ಒಗ್ಗರಣೆಯನ್ನು ಬೋಳು ಬೆಂದಿಗೆ ಸೇರಿಸಿದರೆ ರುಚಿ ಇನ್ನಷ್ಟು ಹೆಚ್ಚುತ್ತದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಗಮನಿಸಿ: ಉಪ್ಪು ಸೊಳೆಯಲ್ಲಿ ಈಗಾಗಲೇ ಉಪ್ಪು ಇರುವುದರಿಂದ ಹೆಚ್ಚುವರಿ ಉಪ್ಪು ಹಾಕುವ ಅಗತ್ಯವಿಲ್ಲ.  ಬಿಸಿ ಬಿಸಿ ಅನ್ನಕ್ಕೆ ತುಪ್ಪ ಹಾಕಿ ಈ ಬೋಳು ಬೆಂದಿ ಜೊತೆ ತಿಂದರೆ ಊಟದ ಸವಿ ದ್ವಿಗುಣವಾಗುತ್ತದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

Published by
ದಿವ್ಯ ಮಹೇಶ್

Recent Posts

ಎಲೆಯ ಫೋಟೋ ತೆಗೆದರೆ AI ಕೀಟ ಯಾವುದೆಂದು ಹೇಳುತ್ತದೆ…! – 73 ಬೆಳೆಗಳ ಮೇಲೆ ಭಾರತದ ಹೊಸ ಕೃಷಿ ಕಣ್ಗಾವಲು

ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…

4 minutes ago

ಹವಾಮಾನ ವರದಿ | 24-08-2026 | ಕರಾವಳಿಯಲ್ಲಿ ಮಳೆ ಮುಂದುವರಿಕೆ – ಕರ್ನಾಟಕದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…

10 hours ago

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?

ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…

16 hours ago

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

1 day ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

1 day ago