ಉಪ್ಪುಕಳ ಸೇತುವೆ | ಗ್ರಾಮೀಣ ಭಾಗಗಳ ಕಡೆಗೆ ಯಾಕಿಷ್ಟು ನಿರ್ಲಕ್ಷ್ಯ..? | ನೆರವಿಗೆ ಬಂದ ಶೌರ್ಯ ವಿಪತ್ತುನಿರ್ವಹಣೆ ಘಟಕ | ಸರ್ಕಾರದ ನೆರವು ಯಾವಾಗ.. ? |

July 13, 2022
9:23 PM

ಗ್ರಾಮೀಣ ಭಾಗಗಳನ್ನು ಯಾಕೆ ಇಷ್ಟು ನಿರ್ಲಕ್ಷ್ಯ ಮಾಡುತ್ತಾರೆ ? ಈ ಪ್ರಶ್ನೆ ಇದೀಗ ಸುಳ್ಯದಲ್ಲಿ ಕೇಳಲೇಬೇಕು. ಏಕೆಂದರೆ ಬಾಳುಗೋಡು ಗ್ರಾಮದ ಉಪ್ಪುಕಳ ನಿವಾಸಿಗಳನ್ನು ಕಂಡರೆ, ಅವರೊಡನೆ ಮಾತನಾಡಿದರೆ ಈ ಮಾತುಗಳನ್ನು ಯಾರಾದರೂ ಕೇಳುತ್ತಾರೆ. ಭಾರೀ ಮಳೆಯಿಂದಾಗಿ ಬಾಳುಗೋಡು ಗ್ರಾಮದ ಉಪ್ಪುಕಳ ನಿವಾಸಿಗಳ ಸಂಪರ್ಕ ಕೊಂಡಿಯಾಗಿದ್ದ ಮಾನವ ನಿರ್ಮಿತ  ಕಾಲು ಸಂಕ ಮಳೆ ಹಾಗೂ ಪ್ರವಾಹಕ್ಕೆ ಕೊಚ್ಚಿ ಹೋಗಿ ದ್ವೀಪದಂತಾಗಿತ್ತು.ಇದೀಗ ತಾತ್ಕಾಲಿಕವಾಗಿ ಶೌರ್ಯ ವಿಪತ್ತುನಿರ್ವಹಣೆ ಘಟಕದ ಸದಸ್ಯರು ನೆರವಿಗೆ ಬಂದಿದ್ದಾರೆ. ತಾತ್ಕಾಲಿಕ ಮರದ ಕಾಲು ಸಂಕ ಮತ್ತೆ ನಿರ್ಮಾಣವಾಗಿದೆ.

ದ.ಕ ಜಿಲ್ಲೆಯ ‌ಸುಳ್ಯ ತಾಲೂಕಿನ ಬಾಳುಗೋಡು ಗ್ರಾಮದ ಉಪ್ಪುಕಳದಲ್ಲಿ ಸುಮಾರು 11 ಕುಟುಂಬಗಳು ವಾಸಿಸುತ್ತಿದ್ದು, ಈ ಪರಿಸರವನ್ನು ಸಂಪರ್ಕಿಸಲು ಮರದ ಪಾಲವೇ ಇದುವರೆಗೂ ಗತಿಯಾಗಿತ್ತು. 49 ಕ್ಕೂ ಹೆಚ್ಚು ಮಂದಿ ವಾಸಿಸುತ್ತಿದ್ದು ಒಬ್ಬ ಅಂಗವಿಕಲರೂ ಇದ್ದಾರೆ. ಈ ಗ್ರಾಮವನ್ನು ಸಂಪರ್ಕಿಸುವ ಹೊಳೆ ಮಳೆಗಾಲದಲ್ಲಿ ತುಂಬಿ ಹರಿಯುತ್ತಿದ್ದು, ಗ್ರಾಮಸ್ಥರೇ ಮರದ ಪಾಲ ನಿರ್ಮಿಸಿಕೊಂಡು ಹೊಳೆ ದಾಟುತ್ತಾರೆ. ಸ್ವಾತಂತ್ರ್ಯ ನಂತರ ಇದುವರೆಗೂ ಇದೇ ಮಾದರಿಯಲ್ಲಿ ಇವರು ಸಂಚರಿಸುತ್ತಾರೆ. ಈಗ ಅಮೃತಮಹೋತ್ಸವ ಸಂದರ್ಭ ಹೊರಜಗತ್ತಿಗೆ ತಿಳಿದಿದೆ.

ಪ್ರತಿ ವರ್ಷ ಮಳೆಗೆ ಮೊದಲು ಈ ಭಾಗದ ನಿವಾಸಿಗಳೇ ಸೇರಿ ಸ್ಥಳೀಯವಾಗಿ ಸಿಗುವ ಮರ,ಬಿದಿರು, ಬಳ್ಳಿಗಳನ್ನು ಬಳಸಿ ಕಾಲು ಸೇತುವೆ ದುರಸ್ತಿ ಪಡಿಸಿ ಜೀವಮಾನ ಕಳೆಯುತ್ತಿದ್ದಾರೆ. ಈ ಭಾರಿ ಸುರಿದ ವಿಪರೀತ ಮಳೆಗೆ ಹೆಚ್ಚಿನ ಪ್ರವಾಹ ಬಂದು ಕಾಲು ಸೇತುವೆ ನೀರಿನಲ್ಲಿ ಭಾಗಶಃ ಕೊಚ್ಚಿ ಹೋಗಿದೆ. ಇಲ್ಲಿ ನೆಲೆಸಿರುವ 11 ಮನೆಗಳಿಗೆ ಈ ದಾರಿಯಿಲ್ಲದಾಗಿತ್ತು. ಹೊರಜಗತ್ತಿಗೆ ಈ ಸಮಸ್ಯೆ ಗೋಚರಿಸಿದ ಬಳಿಕ  ಸುಳ್ಯ ತಹಶೀಲ್ದಾರ್ ಅನಿತಾಲಕ್ಷ್ಮೀ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಈ ನಡುವೆ  ಶೌರ್ಯ ವಿಪತ್ತು ನಿರ್ವಹಣೆ ಘಟಕದ ಸದಸ್ಯರು ತಾತ್ಕಾಲಿಕ ಮರದ ಕಾಲು ಸಂಕ ಮತ್ತೆ ನಿರ್ಮಾಣ ಮಾಡಿದ್ದಾರೆ ಹೀಗಾಗಿ ಸದ್ಯ ಈಲ್ಲಿನ ಜನರಿಗೆ ಓಡಾಟಕ್ಕೆ ಅನುಕೂಲವಾಗಿದೆ. ಆದರೆ ಗ್ರಾಮೀಣ ಭಾಗದ ಈ ಜನರ ಬೇಡಿಕೆಗೆ ಸರ್ಕಾರ ಸ್ಪಂದಿಸುವುದೇ ? ಮುಂದಿನ ಚುನಾವಣೆ ವೇಳೆಗೆ ಈ ಭರವಸೆ ಈಡೇರಬಹುದೇ ? ಎನ್ನುವುದು  ಪ್ರಶ್ನೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ
July 14, 2026
7:12 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ
July 14, 2026
7:01 AM
by: ದ ರೂರಲ್ ಮಿರರ್.ಕಾಂ
ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ
July 14, 2026
6:53 AM
by: ದ ರೂರಲ್ ಮಿರರ್.ಕಾಂ
ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ
July 14, 2026
6:47 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror