Advertisement
ಸುದ್ದಿಗಳು

ಉಪ್ಪುಕಳ ಸೇತುವೆ | ಗ್ರಾಮೀಣ ಭಾಗಗಳ ಕಡೆಗೆ ಯಾಕಿಷ್ಟು ನಿರ್ಲಕ್ಷ್ಯ..? | ನೆರವಿಗೆ ಬಂದ ಶೌರ್ಯ ವಿಪತ್ತುನಿರ್ವಹಣೆ ಘಟಕ | ಸರ್ಕಾರದ ನೆರವು ಯಾವಾಗ.. ? |

Share

ಗ್ರಾಮೀಣ ಭಾಗಗಳನ್ನು ಯಾಕೆ ಇಷ್ಟು ನಿರ್ಲಕ್ಷ್ಯ ಮಾಡುತ್ತಾರೆ ? ಈ ಪ್ರಶ್ನೆ ಇದೀಗ ಸುಳ್ಯದಲ್ಲಿ ಕೇಳಲೇಬೇಕು. ಏಕೆಂದರೆ ಬಾಳುಗೋಡು ಗ್ರಾಮದ ಉಪ್ಪುಕಳ ನಿವಾಸಿಗಳನ್ನು ಕಂಡರೆ, ಅವರೊಡನೆ ಮಾತನಾಡಿದರೆ ಈ ಮಾತುಗಳನ್ನು ಯಾರಾದರೂ ಕೇಳುತ್ತಾರೆ. ಭಾರೀ ಮಳೆಯಿಂದಾಗಿ ಬಾಳುಗೋಡು ಗ್ರಾಮದ ಉಪ್ಪುಕಳ ನಿವಾಸಿಗಳ ಸಂಪರ್ಕ ಕೊಂಡಿಯಾಗಿದ್ದ ಮಾನವ ನಿರ್ಮಿತ  ಕಾಲು ಸಂಕ ಮಳೆ ಹಾಗೂ ಪ್ರವಾಹಕ್ಕೆ ಕೊಚ್ಚಿ ಹೋಗಿ ದ್ವೀಪದಂತಾಗಿತ್ತು.ಇದೀಗ ತಾತ್ಕಾಲಿಕವಾಗಿ ಶೌರ್ಯ ವಿಪತ್ತುನಿರ್ವಹಣೆ ಘಟಕದ ಸದಸ್ಯರು ನೆರವಿಗೆ ಬಂದಿದ್ದಾರೆ. ತಾತ್ಕಾಲಿಕ ಮರದ ಕಾಲು ಸಂಕ ಮತ್ತೆ ನಿರ್ಮಾಣವಾಗಿದೆ.

ದ.ಕ ಜಿಲ್ಲೆಯ ‌ಸುಳ್ಯ ತಾಲೂಕಿನ ಬಾಳುಗೋಡು ಗ್ರಾಮದ ಉಪ್ಪುಕಳದಲ್ಲಿ ಸುಮಾರು 11 ಕುಟುಂಬಗಳು ವಾಸಿಸುತ್ತಿದ್ದು, ಈ ಪರಿಸರವನ್ನು ಸಂಪರ್ಕಿಸಲು ಮರದ ಪಾಲವೇ ಇದುವರೆಗೂ ಗತಿಯಾಗಿತ್ತು. 49 ಕ್ಕೂ ಹೆಚ್ಚು ಮಂದಿ ವಾಸಿಸುತ್ತಿದ್ದು ಒಬ್ಬ ಅಂಗವಿಕಲರೂ ಇದ್ದಾರೆ. ಈ ಗ್ರಾಮವನ್ನು ಸಂಪರ್ಕಿಸುವ ಹೊಳೆ ಮಳೆಗಾಲದಲ್ಲಿ ತುಂಬಿ ಹರಿಯುತ್ತಿದ್ದು, ಗ್ರಾಮಸ್ಥರೇ ಮರದ ಪಾಲ ನಿರ್ಮಿಸಿಕೊಂಡು ಹೊಳೆ ದಾಟುತ್ತಾರೆ. ಸ್ವಾತಂತ್ರ್ಯ ನಂತರ ಇದುವರೆಗೂ ಇದೇ ಮಾದರಿಯಲ್ಲಿ ಇವರು ಸಂಚರಿಸುತ್ತಾರೆ. ಈಗ ಅಮೃತಮಹೋತ್ಸವ ಸಂದರ್ಭ ಹೊರಜಗತ್ತಿಗೆ ತಿಳಿದಿದೆ.

ಪ್ರತಿ ವರ್ಷ ಮಳೆಗೆ ಮೊದಲು ಈ ಭಾಗದ ನಿವಾಸಿಗಳೇ ಸೇರಿ ಸ್ಥಳೀಯವಾಗಿ ಸಿಗುವ ಮರ,ಬಿದಿರು, ಬಳ್ಳಿಗಳನ್ನು ಬಳಸಿ ಕಾಲು ಸೇತುವೆ ದುರಸ್ತಿ ಪಡಿಸಿ ಜೀವಮಾನ ಕಳೆಯುತ್ತಿದ್ದಾರೆ. ಈ ಭಾರಿ ಸುರಿದ ವಿಪರೀತ ಮಳೆಗೆ ಹೆಚ್ಚಿನ ಪ್ರವಾಹ ಬಂದು ಕಾಲು ಸೇತುವೆ ನೀರಿನಲ್ಲಿ ಭಾಗಶಃ ಕೊಚ್ಚಿ ಹೋಗಿದೆ. ಇಲ್ಲಿ ನೆಲೆಸಿರುವ 11 ಮನೆಗಳಿಗೆ ಈ ದಾರಿಯಿಲ್ಲದಾಗಿತ್ತು. ಹೊರಜಗತ್ತಿಗೆ ಈ ಸಮಸ್ಯೆ ಗೋಚರಿಸಿದ ಬಳಿಕ  ಸುಳ್ಯ ತಹಶೀಲ್ದಾರ್ ಅನಿತಾಲಕ್ಷ್ಮೀ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಈ ನಡುವೆ  ಶೌರ್ಯ ವಿಪತ್ತು ನಿರ್ವಹಣೆ ಘಟಕದ ಸದಸ್ಯರು ತಾತ್ಕಾಲಿಕ ಮರದ ಕಾಲು ಸಂಕ ಮತ್ತೆ ನಿರ್ಮಾಣ ಮಾಡಿದ್ದಾರೆ ಹೀಗಾಗಿ ಸದ್ಯ ಈಲ್ಲಿನ ಜನರಿಗೆ ಓಡಾಟಕ್ಕೆ ಅನುಕೂಲವಾಗಿದೆ. ಆದರೆ ಗ್ರಾಮೀಣ ಭಾಗದ ಈ ಜನರ ಬೇಡಿಕೆಗೆ ಸರ್ಕಾರ ಸ್ಪಂದಿಸುವುದೇ ? ಮುಂದಿನ ಚುನಾವಣೆ ವೇಳೆಗೆ ಈ ಭರವಸೆ ಈಡೇರಬಹುದೇ ? ಎನ್ನುವುದು  ಪ್ರಶ್ನೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

6 hours ago

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

1 day ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ

ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…

1 day ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಲೋಕದಲ್ಲಿ ಪುಟ್ಟ ಮನಸ್ಸಿನ ಖುಷಿ

ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…

1 day ago

ವಿಘ್ನಗಳ ಆಚೆ ಕಾಣುವ ಗಣೇಶತತ್ತ್ವ

ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…

1 day ago