MIRROR FOCUS

ಆಲಮಟ್ಟಿ ಜಲಾಶಯದ ಎತ್ತರ ಹೆಚ್ಚಿಸುವ ಕುರಿತು ಕೇಂದ್ರ ಸರ್ಕಾರಕ್ಕೆ ಒತ್ತಾಯ | ಮುಖ್ಯಮಂತ್ರಿ ಸಿದ್ದರಾಮಯ್ಯ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕೃಷ್ಣಾ ನ್ಯಾಯಾಧೀಕರಣ-2ರ ತೀರ್ಪಿನನ್ವಯ ರಾಜ್ಯಕ್ಕೆ 130 ಟಿಎಂಸಿ ನೀರು ಹೆಚ್ಚುವರಿಯಾಗಿ ದೊರೆಯಲಿದ್ದು, ಇದಕ್ಕಾಗಿ ಆಲಮಟ್ಟಿ ಜಲಾಶಯದ(Alamatti Dam) ಎತ್ತರವನ್ನು ಹೆಚ್ಚಿಸುವ ಕುರಿತು ಅಧಿಸೂಚನೆ ಹೊರಡಿಸಲು ಈಗಾಗಲೇ ಕೇಂದ್ರ ಸರ್ಕಾರವನ್ನು(Central Govt) ಒತ್ತಾಯಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

Advertisement
Advertisement

ಅವರು ಬುಧವಾರ ಆಲಮಟ್ಟಿ ಜಲಾಶಯದ ಬಳಿ ಕೃಷ್ಣೆಯ ಜಲಧಿಗೆ ಗಂಗಾ ಪೂಜೆ(Ganga Pooja) ನೆರವೇರಿಸಿದ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ಆಲಮಟ್ಟಿ ಜಲಾಶಯದ ಈಗಿನ ಎತ್ತರ 519.60 ಮೀಟರ್ ನಿಂದ 524.25 ಮೀಟರ್ ಎತ್ತರಕ್ಕೆ ಹೆಚ್ಚಿಸಬೇಕಾಗಿದೆ. ಆದರೆ ಇದಕ್ಕೆ ಕೇಂದ್ರಸರ್ಕಾರದ ನೋಟಿಫಿಕೇಶನ್ ಇನ್ನೂ ಆಗಿರುವುದರಿಂದ ಎತ್ತರವನ್ನು ಹೆಚ್ಚಿಸಲು ಸಾಧ್ಯವಾಗುವುದಿಲ್ಲ. ಇದಕ್ಕಾಗಿ ಕೇಂದ್ರಸರ್ಕಾರವು , ಮಹಾರಾಷ್ಟ್ರ, ಆಂಧ್ರ, ತೆಲಂಗಾಣ ಹಾಗೂ ಕರ್ನಾಟಕ ರಾಜ್ಯಗಳೊಂದಿಗೆ ಚರ್ಚೆ ನಡೆಸಿ ಇತ್ಯರ್ಥ ಮಾಡಿಸುವುದು ಅಗತ್ಯವಿದೆ ಎಂದರು.

ಕೃಷ್ಣಾ ನ್ಯಾಯಾಧೀಕರಣ-2ರ ಅಂತಿಮ ತೀರ್ಪಿಗೆ ಕೇಂದ್ರ ಸರ್ಕಾರದಿಂದ ಗೆಜೆಟ್ ಅಧಿಸೂಚನೆ ಹೊರಡಿಸಲು ನಾನು ಮತ್ತು ಉಪಮುಖ್ಯಮಂತ್ರಿ ಅವರು ಈಗಾಗಲೇ ಪ್ರಧಾನಮಂತ್ರಿ ಅವರನ್ನು ಹಾಗೂ ಸಂಬಂಧಪಟ್ಟ ಕೇಂದ್ರ ಸಚಿವರನ್ನು ಭೇಟಿ ಮಾಡಿ ಒತ್ತಾಯಿಸಿದ್ದೇವೆ ಎಂದರು. ಇದಕ್ಕೆ ಸಂಬಂಧಿಸಿದಂತೆ ನಾವು ಪುನರ್‌ ವಸತಿ ಮತ್ತು ಪುನರ್‌ ನಿರ್ಮಾಣಕ್ಕಾಗಿ ಸಿದ್ದರಿದ್ದೇವೆ. ನಮ್ಮ ಹಿಂದಿನ ಅವಧಿಯಲ್ಲಿ ಈ ಯೋಜನೆಯ ಅನುಷ್ಠಾನಕ್ಕೆ 51,148 ಕೋಟಿ ರೂ.ಗಳ ಅಂದಾಜಿಗೆ ಅನುಮೋದನೆ ನೀಡಲಾಗಿತ್ತು. ಈಗ ಈ ಮೊತ್ತ 80 ಸಾವಿರ ಕೋಟಿ ರೂ.ಗಳಷ್ಟಾಗಬಹುದು ಎಂಬ ಅಂದಾಜಿದೆ. ಪ್ರತಿ ವರ್ಷ ನಮ್ಮ ಸರ್ಕಾರ 20,000 ಕೋಟಿ ಖರ್ಚು ಮಾಡುವ ಮೂಲಕ, 5 ವರ್ಷಕ್ಕೆ ಅಂದಾಜು 1 ಲಕ್ಷ ಕೋಟಿ ರೂ.ಗಳನ್ನು ವೆಚ್ಚ ಮಾಡಬೇಕೆಂಬುದು ನಮ್ಮ ಸರ್ಕಾರದ ಉದ್ದೇಶಿಸಲಾಗಿದೆ. ಆದರೆ ಇದಕ್ಕೆ ಮೊದಲು ಕೇಂದ್ರ ಸರ್ಕಾರದ ನೋಟಿಫಿಕೇಷನ್ ಆಗಬೇಕಿರುವುದರಿಂದ, ಪ್ರಧಾನಮಂತ್ರಿಗಳ ಮಧ್ಯಸ್ಥಿಕೆಯಲ್ಲಿ ನಿರ್ಣಯವಾದರೆ, ಆಲಮಟ್ಟಿ ಜಲಾಶಯದ ಎತ್ತರ ಹೆಚ್ಚಿಸುವ ಯೋಜನೆಗೆ ನಾವು ಚಾಲನೆ ನೀಡಬಹುದು.

ಕೃಷ್ಣಾ ನ್ಯಾಯಾಧೀಕರಣ-1ರ ತೀರ್ಪಿನನ್ವಯ ಯುಕೆಪಿ 1 ಹಾಗೂ2ರಲ್ಲಿ 173 ಟಿಎಂಸಿ ನೀರಿನ ಹಂಚಿಕೆಯಡಿ 16.47 ಲಕ್ಷ ಎಕರೆ ಕ್ಷೇತ್ರಕ್ಕೆ ನೀರಾವರಿ ಸೌಲಭ್ಯ ಒದಗಿಸಲಾಗುತ್ತಿದೆ. ಆಲಮಟ್ಟಿ ಜಲಾಶಯ ಎತ್ತರ ಹೆಚ್ಚಳದಿಂದ ಯೋಜನೆಯಿಂದ ಒಟ್ಟು 5.94 ಲಕ್ಷ ಹೆಕ್ಟೇರ್ (14.68 ಲಕ್ಷ ಎಕರೆ) ಅಚ್ಚುಕಟ್ಟು ಪ್ರದೇಶಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸಬಹುದಾಗಿದೆ. ಬಾಗಲಕೋಟೆ, ಬಿಜಾಪುರ, ಯಲಬುರ್ಗಾ, ಕೊಪ್ಪಳರಾಯಚೂರು, ಬಳ್ಳಾರಿ, ಗುಲ್ಬರ್ಗ, ಯಾದಗಿರಿ ಇವರ ಜನಪ್ರತಿನಿಧಿಗಳೊಂದಿಗೆ ಬೆಂಗಳೂರಿನಲ್ಲಿ ಸಭೆ ನಡೆಸಿ, ಪುನರ್ವಸತಿ, ಪುನರ್ನಿರ್ಮಾಣ ಕಾರ್ಯದ ಬಗ್ಗೆ ಚರ್ಚೆ ಮಾಡಲಿದ್ದೇವೆ.
ಆಲಮಟ್ಟಿ ಮತ್ತು ನಾರಾಯಣಪುರ ಜಲಾಶಯದಲ್ಲಿ ಹೂಳು ತುಂಬಿರುವುದರಿಂದ, ಇಲ್ಲಿಯೂ ಸಮಾನಾಂತರ ಜಲಾಶಯ ನಿರ್ಮಾಣದ ಪ್ರಸ್ತಾಪ ತಮ್ಮ ಮುಂದಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಜಲಾಶಯದಲ್ಲಿ ಹೂಳು ತುಂಬಿರುವ ಪ್ರಮಾಣ, ನೀರಿನ ಸಾಮರ್ಥ್ಯ, ಇದರಿಂದ ರೈತರಿಗಾಗಬಹುದಾದ ತೊಂದರೆ ಬಗ್ಗೆ ಚರ್ಚೆ ನಡೆಸುತ್ತೇವೆ.

ರೈತರ ಅನುಕೂಲಕ್ಕಾಗಿ ಬಸವ ಸಾಗರ ಸೇರಿದಂತೆ ಇತರ ಜಲಾಶಯಗಳಿಗೆ ನೀರು ಮರುಹಂಚಿಕೆ ಬಗ್ಗೆ ಪ್ರತಿಕ್ರಿಯೆ ನೀಡಿ, ಯೋಜನೆಯಲ್ಲಿ ಸ್ಕೀಂ ಎ ಮತ್ತು ಬಿ ಎರಡು ವಿಧವಿದ್ದು, ಯೋಜನಾವಾರು 3ನೇ ಹಂತದಲ್ಲಿ ಹಂಚಿಕೆಯಾಗಿದೆ. ಕೃಷ್ಣಾ ನ್ಯಾಯಾಧೀಕರಣ-1ರ ತೀರ್ಪಿನನ್ವಯ ಯುಕೆಪಿ 1 ಹಾಗೂ2ರಲ್ಲಿ 173 ಟಿಎಂಸಿ ನೀರಿನ ಹಂಚಿಕೆಯಾಗಿದೆ. ಈ ನೀರನ್ನು ಸಂಬಂಧಪಟ್ಟ ಜಿಲ್ಲೆಗೆ ನೀರು ಮರುಹಂಚಿಕೆ ಮಾಡುವ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ತುಂಗಭದ್ರಾ ಜಲಾಶಯದಲ್ಲಿ 19ನೇ ಕ್ರಸ್ಟ್‌ಗೇಟ್ ಅಳವಡಿಕೆಯನ್ನು ಮೂರ್ನಾಲ್ಕು ದಿನಗಳ ಒಳಗಾಗಿ ಪೂರ್ಣಗೊಳಿಸಲಾಗಿದೆ. ದುರಸ್ತಿಯ ಅವಧಿಯಲ್ಲಿ 35 ಟಿಎಂಸಿ ನೀರು ಮಾತ್ರ ಪೋಲಾಗಿದೆ. ಇಂದಿಗೂ ಜಲಾಶಯದಲ್ಲಿ ಸುಮಾರು 78 ಟಿಎಂಸಿ ನೀರಿದೆ. ಇನ್ನೂ 20 ಟಿಎಂಸಿ ನೀರು ಹರಿದುಬಂದರೆ, ಜಲಾಶಯ ಶೇ.95 ರಷ್ಟು ಭರ್ತಿಯಾಗುತ್ತದೆ. ಈಗಾಗಲೇ ಕರ್ನಾಟಕ, ತೆಲಂಗಾಣ, ಆಂಧ್ರದ ರೈತರ ಮೊದಲ ಬೆಳೆಗೆ ನೀರು ಬಿಡಲಾಗಿದೆ. ಆದ್ದರಿಂದ ರೈತರಿಗೆ ಯಾವುದೇ ಆತಂಕ ಬೇಡ ಎಂದು ಹೇಳಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ವಿದೇಶದಿಂದ ಹಳ್ಳಿಗೆ ಬಂದು ಕೃಷಿ ಸಾಧನೆ ಮಾಡಿದ ಯುವಕ

ಕೃಷಿಯನ್ನು ನಂಬಿ ಕೆಲಸ ಮಾಡಿದರೆ ಯಶಸ್ಸು ಕಾಣಬಹುದು ಎಂಬುದನ್ನು ರೈತ  ಯೋಗೇಶ್ ತೋರಿಸಿಕೊಟ್ಟಿದ್ದಾರೆ.…

29 minutes ago

ಬದುಕು ಪುರಾಣ | ‘ಅವನೇನು.. ಹರಿಶ್ಚಂದ್ರನೋ!’

ನುಡಿದಂತೆ ನಡೆದಾತ ‘ರಾಜಾ ಹರಿಶ್ಚಂದ್ರ’. ಸತ್ಯಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ತ್ಯಾಗಿ. ಅನೃತವನ್ನಾಡದೆ…

5 hours ago

ಗುರು ಆದಿತ್ಯ ರಾಜಯೋಗ | ಯಾರಿಗೆಲ್ಲಾ ಕುಬೇರ ಯೋಗ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

5 hours ago

ಸೆ.30 ವರೆಗೆ ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿರ್ಬಂಧ

ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು…

13 hours ago

ಕೃಷಿ ಸಂಸ್ಕರಣಾ ಘಟಕ | 15 ಲಕ್ಷ ರೂಪಾಯಿ ಸಹಾಯಧನ ನೀಡಲು ಸರ್ಕಾರ  ನಿರ್ಧಾರ

ಕೃಷಿ ಸಂಸ್ಕರಣಾ ಘಟಕ ಸ್ಥಾಪಿಸುವ ರೈತರಿಗೆ ಈ ವರ್ಷದಿಂದ ರಾಜ್ಯ ಸರ್ಕಾರ 9…

13 hours ago

ಚಿಕ್ಕಮಗಳೂರು ಜಿಲ್ಲೆಯಲ್ಲಿ  ಧಾರಾಕಾರ ಮಳೆ | ಧಾರವಾಡ ಜಿಲ್ಲೆಯಲ್ಲಿ 130 ಮನೆಗಳಿಗೆ ಭಾಗಶಃ ಹಾನಿ

ಚಿಕ್ಕಮಗಳೂರು  ಜಿಲ್ಲೆಯಲ್ಲಿ ಸಾಧಾರಣದಿಂದ ಹೆಚ್ಚು ಮಳೆಯಾಗುತ್ತಿದೆ. ಹೆಚ್ಚು ಮಳೆಯಿಂದಾಗಿ  ಜಿಲ್ಲೆಯ ಮುಳ್ಳಯ್ಯನಗಿರಿ ರಸ್ತೆಯೆ…

14 hours ago