Advertisement
ಪ್ರಮುಖ

ಅಮೆರಿಕ ತೆರಿಗೆ ಇಳಿಕೆ : ಭಾರತದ ತೆಂಗಿನ ನಾರು ರಫ್ತುಗಳಿಗೆ ಹೊಸ ಬಲ

Share

ಅಮೆರಿಕ ಆಮದು ಸುಂಕವನ್ನು ಶೇ. 18 ಕ್ಕೆ ಇಳಿಸಿದ ನಂತರ ಭಾರತದ ತೆಂಗಿನ ನಾರು ಮತ್ತು ತೆಂಗಿನ ನಾರು ಉತ್ಪನ್ನಗಳ ರಫ್ತು ಹೆಚ್ಚಾಗುವ ನಿರೀಕ್ಷೆಯಿದೆ. ಭಾರತೀಯ ತೆಂಗಿನ ನಾರು ರಫ್ತುದಾರರ ಸಂಘದ (Federation of Indian Coir Exporters Associations) ಪ್ರಧಾನ ಕಾರ್ಯದರ್ಶಿ ಸಜನ್ ಬಿ. ನಾಯರ್ ಈ ನಿರ್ಧಾರವನ್ನು ಬಹುನಿರೀಕ್ಷಿತ ಕ್ರಮ ಎಂದು ಹೇಳಿದ್ದಾರೆ. ತೆರಿಗೆ ಕಡಿತದ ನಂತರ ಖರೀದಿದಾರರಿಂದ ಸಕಾರಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಅವರು ತಿಳಿಸಿದ್ದಾರೆ.

ಬಿಸಿನೆಸ್‌ ಲೈನ್  ವರದಿಯ ಪ್ರಕಾರ, ಈ ತೆರಿಗೆ ಇಳಿಕೆ ದೀರ್ಘಾವಧಿಯಲ್ಲಿ ಸಕಾರಾತ್ಮಕ ಪರಿಣಾಮ ಬೀರುವ ಸಾಧ್ಯತೆ ಇದೆ, ವಿಶೇಷವಾಗಿ ಕ್ರಿಸ್‌ಮಸ್ ಮತ್ತು ಹೊಸ ವರ್ಷದ‌ ಸಂದರ್ಭ ರಫ್ತು ಹೆಚ್ಚಳವಾಗಲಿದೆ. ಕಳೆದ ಹಣಕಾಸು ವರ್ಷದಲ್ಲಿ ಭಾರತವು ತೆಂಗಿನ ನಾರಿನ ರಫ್ತಿನಿಂದ ₹4,343 ಕೋಟಿ ಆದಾಯ ಗಳಿಸಿದ್ದು, ಅದರಲ್ಲಿ ಅಮೆರಿಕದಿಂದಲೇ ಸುಮಾರು ₹1,400 ಕೋಟಿ ಬಂದಿದೆ. ಒಟ್ಟು ತೆಂಗಿನ ನಾರು ರಫ್ತಿನ ಸರಿಸುಮಾರು ಶೇ.40ರಷ್ಟು ಅಮೆರಿಕ ಮಾರುಕಟ್ಟೆಗೆ ಹೋಗುತ್ತದೆ.

ಆಗಸ್ಟ್ 27, 2025ರಿಂದ ಜಾರಿಗೆ ಬಂದಿದ್ದ ಶೇ.50ರಷ್ಟು ತೆರಿಗೆಯಿಂದಾಗಿ ಅಮೆರಿಕ ಮಾರುಕಟ್ಟೆಯಲ್ಲಿ ಭಾರತೀಯ ತೆಂಗಿನ ನಾರು ಉತ್ಪನ್ನಗಳ ಬೆಲೆ ಗಣನೀಯವಾಗಿ ಹೆಚ್ಚಿತ್ತು. ಇದರ ಪರಿಣಾಮವಾಗಿ ಕೇವಲ ಒಂದು ತ್ರೈಮಾಸಿಕದಲ್ಲೇ ಸುಮಾರು ₹400 ಕೋಟಿ ನಷ್ಟ ಉಂಟಾಗಿತ್ತು. ಈ ತೆರಿಗೆಯ ಹೊಡೆತವನ್ನು ಹೆಚ್ಚು ಅನುಭವಿಸಿದ್ದು ಕೇರಳದ ತೆಂಗಿನ ನಾರು ಉದ್ಯಮ. ಅಮೆರಿಕಕ್ಕೆ ಭಾರತದ ಒಟ್ಟು ತೆಂಗಿನ ನಾರು ರಫ್ತಿನಲ್ಲಿ ಕೇರಳದ ಪಾಲು ಸುಮಾರು ಶೇ.57ರಷ್ಟಿದೆ. ಹೆಚ್ಚಿನ ತೆರಿಗೆಯಿಂದಾಗಿ ರಫ್ತುದಾರರು ಯುರೋಪ್ ಮತ್ತು ಏಷ್ಯಾದ ಇತರೆ ಮಾರುಕಟ್ಟೆಗಳತ್ತ ಮುಖ ಮಾಡಬೇಕಾಯಿತು.

ಆದರೆ ಈಗ ತೆರಿಗೆಯನ್ನು ಶೇ.18ಕ್ಕೆ ಇಳಿಸಿರುವುದರಿಂದ, ತೆಂಗಿನ ನಾರು ಮ್ಯಾಟ್‌ಗಳಂತಹ ಉತ್ಪನ್ನಗಳು ಮತ್ತೆ ಸ್ಪರ್ಧಾತ್ಮಕವಾಗಲಿದ್ದು, ಬೇಡಿಕೆ ಹೆಚ್ಚಾಗುವ ನಿರೀಕ್ಷೆಯಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಇದಕ್ಕೆ ಸಮಾನವಾಗಿ, ಅಮೆರಿಕವು ಸಿಗಡಿ ರಫ್ತಿನ ಮೇಲಿನ ಪರಸ್ಪರ ತೆರಿಗೆಯನ್ನು ಕಡಿಮೆ ಮಾಡಿರುವುದರಿಂದ ಆಂಧ್ರಪ್ರದೇಶದಲ್ಲಿ ಜಲಚರ ಸಾಕಣೆ ಕ್ಷೇತ್ರ ಪುನರುಜ್ಜೀವನಗೊಳ್ಳುವ ನಿರೀಕ್ಷೆ ಇದೆ. ಕಳೆದ ವರ್ಷ ಆರ್ಥಿಕ ಅನಿಶ್ಚಿತತೆಯಲ್ಲಿ ಸಿಲುಕಿದ್ದ ಲಕ್ಷಾಂತರ ಜಲಚರ ಸಾಕಣೆ ರೈತರಿಗೆ ಇದು ದೊಡ್ಡ ರಿಲೀಫ್ ಆಗಿದೆ. ಸುಮಾರು 8 ಲಕ್ಷ ಜನರು — ರೈತರು, ಕಾರ್ಮಿಕರು ಹಾಗೂ ವ್ಯಾಪಾರಿಗಳು — ಜಲಚರ ಸಾಕಣೆಯನ್ನು ಅವಲಂಬಿಸಿದ್ದಾರೆ. ಹಿಂದಿನ ಅವಧಿಯಲ್ಲಿ ತೆರಿಗೆ 7 ಶೇಕಡೆಯಿಂದ ಸುಮಾರು 60 ಶೇಕಡೆಗೆ ಏರಿಕೆಯಾದ ಪರಿಣಾಮ, ರಫ್ತು ಕುಸಿತ ಕಂಡಿತ್ತು. ಈಗ ತೆರಿಗೆ ಕಡಿತವು ಈ ವಲಯಕ್ಕೂ ಹೊಸ ಉಸಿರು ತುಂಬುವ ನಿರೀಕ್ಷೆ ಇದೆ.

ಇದನ್ನೂ ಓದಿ…

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

5 hours ago

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ

ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…

5 hours ago

ತಂಬಾಕು ನಿಷೇಧ ಜಾರಿ: ಅಡಿಕೆ ಬೆಳೆಗಾರರ ಹಿತ ಕಾಪಾಡಲು ಸ್ಪಷ್ಟ ಚೌಕಟ್ಟು ರೂಪಿಸಿ – ಕ್ಯಾಂಪ್ಕೊ

ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…

5 hours ago

ಹವಾಮಾನ ವರದಿ | 12-08-2026 | ಕರ್ನಾಟಕದಲ್ಲಿ ಮುಂದುವರಿಯಲಿದೆ ಬಿಡುವಿನ ಮಳೆ

ಕರಾವಳಿ ಹಾಗೂ ಮಲೆನಾಡಿನಲ್ಲಿ ಬಿಸಿಲು, ಮೋಡ ಮತ್ತು ಬಿಡುವಿನ ಸಾಮಾನ್ಯ ಮಳೆ ಮುಂದುವರಿಯುವ…

6 hours ago

ತೋಟಗಾರಿಕಾ ಬೆಳೆಗಾರರ ಪರ ಲೋಕಸಭೆಯಲ್ಲಿ ಧ್ವನಿ – ಹವಾಮಾನ ಆಧಾರಿತ ಬೆಳೆ ವಿಮೆ ಮರುಪರಿಷ್ಕರಣೆಗೆ ಕ್ಯಾ. ಚೌಟ ಒತ್ತಾಯ

ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…

18 hours ago

ಅಡಿಕೆ ಅಕ್ರಮ ಆಮದು ಕಡಿವಾಣ – ರೋಸ್ಟೆಡ್ ಅಡಿಕೆಗೆ ₹351 ಕನಿಷ್ಠ ದರ – ಕಸ್ಟಮ್ಸ್‌ ನಿಗಾ ಎಂದ ಕೇಂದ್ರ

ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್‌ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…

1 day ago