MIRROR FOCUS

ಕೃಷಿಯಲ್ಲಿ ಶ್ರಮ ಉಳಿತಾಯ ಮಾಡುವ ಸುಲಭ ಉಪಾಯ | ತಾಂತ್ರಿಕ ಐಡಿಯಾದ ಯುವ ಕೃಷಿಕರೇ ಈಗ ಕೃಷಿಗೆ ಬೇಕಿದೆ |

Share

ಕೃಷಿಯಲ್ಲಿ ಈಗ ಶ್ರಮ ಉಳಿತಾಯವಾಗಬೇಕು, ಈ ಮೂಲಕ ಕೃಷಿ ಆದಾಯವೂ ಉಳಿತಾಯವಾಗಬೇಕು, ಪ್ರಧಾನಿಗಳು ಹೇಳಿದ ಕೃಷಿ ಆದಾಯದ ದ್ವಿಗುಣದ ದಾರಿಯೂ ಸುಲಭ ಆಗಬೇಕು. ಕೃಷಿಯಲ್ಲಿನ ಹಲವು ಸಮಸ್ಯೆಗಳ ನಿವಾರಣೆಗೆ ತಾಂತ್ರಿಕ ವಿಧಾನಗಳ ಬಳಕೆಯೂ ಇಂದು ಅಗತ್ಯವಾಗಿದೆ. ಇದಕ್ಕೆ ಯುವಕರ ವಿನೂತನ ಟೆಕ್ನಿಕಲ್ ಐಡಿಯಾಗಳೂ ಕಾರಣವಾಗುತ್ತದೆ.ಇಂತಹದ್ದೊಂದು ಐಡಿಯಾವನ್ನು ಯುವಕ ಉಣ್ಣಿಕೃಷ್ಣನ್ ಮಾಡಿದ್ದಾರೆ.‌ ಹಲವು ಕೃಷಿಕರಿಗೆ ಈ ಐಡಿಯಾ ಮೆಚ್ಚುಗೆಯೂ ಆಗಿದೆ.

Advertisement

ಸರಕಾರ ಕೃಷಿ ಉಳಿಸಲು ಇನ್ನಿಲ್ಲದ ಸರಕಾರ ನೀಡುತ್ತಿದೆ. ಬಡ್ಡಿ ರಹಿತ ಸಾಲದಿಂದ ತೊಡಗಿ ಕೃಷಿ ಬೆಳವಣಿಗೆಗೆ ಏನೆಲ್ಲಾ ಮಾಡಬಹುದೋ ಅದನ್ನೆಲ್ಲಾ ಮಾಡುತ್ತಿದೆ. ಹಾಗಿದ್ದರೂ ದೇಶದಲ್ಲಿ ಕೃಷಿಯಲ್ಲಿ ಭಾರೀ ಪ್ರಗತಿ ಕಾಣುತ್ತಿಲ್ಲ. ಇದಕ್ಕೆ ಹಲವು ಕಾರಣಗಳು ಇದ್ದರೂ, ತಾಂತ್ರಿಕ ಐಡಿಯಾ ಹೊಂದಿದ ಹಾಗೂ ಉತ್ಸಾಹದ ಯುವ ಕೃಷಿಕರು ಮಣ್ಣಿನ ಆರಾಧನೆಗೆ ಇಳಿಯದೇ ಇರುವುದೂ ಒಂದು ಕಾರಣ. ಹಾಗಿದ್ದರೂ ಈಗಾಗಲೇ ಕೃಷಿಯಲ್ಲಿ  ತೊಡಗಿಸಿಕೊಂಡಿರುವ ಕೆಲವು ಯುವ ಕೃಷಿಕರು ಉನ್ನತ ವ್ಯಾಸಾಂಗ ಮಾಡಿ ಹೊಸ ಹೊಸ ವಿಧಾನದ ಮೂಲಕ ಕೃಷಿ ಮಾಡುತ್ತಿದ್ದಾರೆ. ಈ ಮೂಲಕ ಕೃಷಿ ಬೆಳವಣಿಗೆಗೂ ಕಾರಣವಾಗುತ್ತಿದ್ದಾರೆ.

ಇದೀಗ ಸುಳ್ಯ ತಾಲೂಕಿನ ನಾಲ್ಕೂರು ಗ್ರಾಮದ ಉಣ್ಣಿಕೃಷ್ಣನ್‌ ಎಂಬ ಯುವಕ ಅವರ ಕೃಷಿ ಭೂಮಿಯಲ್ಲಿ  ವಿವಿಧ ರೀತಿಯಲ್ಲಿ  ತಾಂತ್ರಿಕ ವಿಧಾನವನ್ನು  ಅಳವಡಿಸಿಕೊಂಡಿದ್ದಾರೆ. ಅಡಿಕೆ ಹಾಗೂ ರಬ್ಬರ್‌ ಬೆಳೆಯುವ ಇವರು  ರಬ್ಬರ್‌ ಕೃಷಿಯಲ್ಲೂ ತಾಂತ್ರಿಕ ವಿಧಾನ ಬಳಕೆ ಮಾಡಿದರೆ, ಅಡಿಕೆ ಕೃಷಿಯಲ್ಲೂ ತಾಂತ್ರಿಕವಾಗಿಯೇ ಕೆಲಸ ಮಾಡುತ್ತಿದ್ದಾರೆ. ಈಗ ಬ್ರೆಶ್‌ ಕಟ್ಟರ್‌ ಮೂಲಕ ಕೆರೆಯಿಂದ ನೀರೆಳೆಯುವ ಪ್ರಯತ್ನ ಮಾಡಿದ್ದಾರೆ. ಒಂದೇ ಯಂತ್ರದ ಮೂಲಕ ವಿವಿಧ ಕೆಲಸಗಳು ಆಗಬೇಕು ಎನ್ನುವ ಯೋಚನೆಯಿಂದ ಪ್ರಯತ್ನ ಮಾಡುತ್ತಿರುವ ಉಣ್ಣಿಕೃಷ್ಣನ್‌, ಅಡಿಕೆ ತೋಟಕ್ಕೆ ಬೋರ್ಡೋ ಸಿಂಪಡಣೆಯ ಸಂದರ್ಭ ನೀರು ಅಗತ್ಯವಾಗಿದೆ, ಇದಕ್ಕೆ ಆನ್‌ ಲೈನ್‌ ಮೂಲಕ ಯಂತ್ರವನ್ನು  ಹುಡುಕಿ ಅದನ್ನು ತರಿಸಿ  ಬ್ರೆಶ್‌ ಕಟ್ಟರ್‌ ಗೆ ಅಳವಡಿಕೆ ಮಾಡಿದ್ದಾರೆ. ಈ ಮೂಲಕ ಹೊಸದೊಂದು ಪ್ರಯೋಗ ಮಾಡಿ ಯಶಸ್ಸು ಕಂಡಿದ್ದಾರೆ. ಎರಡು ನಿಮಿಷದ ಒಳಗೆ 200 ಲೀಟರ್‌ ನೀರನ್ನು  ತುಂಬಿಸಲು ಸಾಧ್ಯವಾಗುತ್ತದೆ ಎನ್ನುತ್ತಾರೆ ಉಣ್ಣಿಕೃಷ್ಣನ್.‌ ಯುವಕರ ಇಂತಹ ವಿನೂತನ ಯೋಚನೆಗಳು ಕೃಷಿಕರಿಂದಲೂ ಬೆಂಬಲ ದೊರೆಯುತ್ತಿರುವುದು  ಆಶಾದಾಯಕ ಬೆಳವಣಿಗೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಮಣಿಪುರದಲ್ಲಿ 68 ಟನ್ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಅಡಿಕೆ ವಶ

ಅಕ್ರಮವಾಗಿ ಸುಮಾರು 68 ಟನ್‌ ಅಡಿಕೆ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಅಸ್ಸಾಂ ಪೊಲೀಸರು…

2 hours ago

ಅಡುಗೆ ಮನೆ ‘ಬೇಯಿಸುವ ಕೋಣೆ’ಯಲ್ಲ!

ಬದುಕಿನ ಒಂದೊಂದು ಅಂಗವೂ ‘ಕಲಾತ್ಮಕ’. ಒದಗುವ ಸುಭಗತನವು ಅನುಭವವೇದ್ಯ. ಅಡುಗೆ ಮನೆಯು ಬರೇ…

3 hours ago

2025ರಲ್ಲಿ ಶನಿ ತಮ್ಮ ನಕ್ಷತ್ರ ಅಥವಾ ರಾಶಿಯಲ್ಲಿ ಅಧೋಗತಿಯ ಚಲನೆ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜೋತಿಷಿಗಳನ್ನು ಸಂಪರ್ಕಿಸಿ 9535156490

3 hours ago

ತಾಪಮಾನ ಹೆಚ್ಚಳ | ಬನ್ನೇರುಘಟ್ಟ ಉದ್ಯಾನವನದಲ್ಲಿ ಪ್ರಾಣಿಗಳಿಗೆ ತಂಪಾದ ಆಹಾರ ಪದಾರ್ಥ |

ಬೇಸಿಗೆ ತಾಪಮಾನ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮೃಗಾಲಯದ ಪ್ರಾಣಿಗಳು ಸುಡುಬಿಸಿಲಿಗೆ ಕಂಗಾಲಾಗಿದ್ದು, ಮಧ್ಯಾಹ್ನದ ವೇಳೆಯಲ್ಲಿ…

13 hours ago

ತೊಗರಿ ಉತ್ಪನ್ನ ಖರೀದಿ ಅವಧಿ ಎ.25 ರವರೆಗೆ ವಿಸ್ತರಣೆ

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ತೊಗರಿ ಉತ್ಪನ್ನವನ್ನು ಖರೀದಿಸುವ…

13 hours ago

ತಾಂತ್ರಿಕ ಸಮಸ್ಯೆ | ದೇಶಾದ್ಯಂತ ಯುಪಿಐ, ಬ್ಯಾಂಕಿಂಗ್ ಸೇವೆಗಳಲ್ಲಿ ವ್ಯತ್ಯಯ

ತಾಂತ್ರಿಕ ಸಮಸ್ಯೆ ಹಿನ್ನೆಲೆಯಲ್ಲಿ ಏಕೀಕೃತ ಪಾವತಿ ಇಂಟರ್ ಫೇಸ್ - ಯುಪಿಐ ಸೇವೆಯ…

13 hours ago