Advertisement
MIRROR FOCUS

ಕೃಷಿಯಲ್ಲಿ ಶ್ರಮ ಉಳಿತಾಯ ಮಾಡುವ ಸುಲಭ ಉಪಾಯ | ತಾಂತ್ರಿಕ ಐಡಿಯಾದ ಯುವ ಕೃಷಿಕರೇ ಈಗ ಕೃಷಿಗೆ ಬೇಕಿದೆ |

Share

ಕೃಷಿಯಲ್ಲಿ ಈಗ ಶ್ರಮ ಉಳಿತಾಯವಾಗಬೇಕು, ಈ ಮೂಲಕ ಕೃಷಿ ಆದಾಯವೂ ಉಳಿತಾಯವಾಗಬೇಕು, ಪ್ರಧಾನಿಗಳು ಹೇಳಿದ ಕೃಷಿ ಆದಾಯದ ದ್ವಿಗುಣದ ದಾರಿಯೂ ಸುಲಭ ಆಗಬೇಕು. ಕೃಷಿಯಲ್ಲಿನ ಹಲವು ಸಮಸ್ಯೆಗಳ ನಿವಾರಣೆಗೆ ತಾಂತ್ರಿಕ ವಿಧಾನಗಳ ಬಳಕೆಯೂ ಇಂದು ಅಗತ್ಯವಾಗಿದೆ. ಇದಕ್ಕೆ ಯುವಕರ ವಿನೂತನ ಟೆಕ್ನಿಕಲ್ ಐಡಿಯಾಗಳೂ ಕಾರಣವಾಗುತ್ತದೆ.ಇಂತಹದ್ದೊಂದು ಐಡಿಯಾವನ್ನು ಯುವಕ ಉಣ್ಣಿಕೃಷ್ಣನ್ ಮಾಡಿದ್ದಾರೆ.‌ ಹಲವು ಕೃಷಿಕರಿಗೆ ಈ ಐಡಿಯಾ ಮೆಚ್ಚುಗೆಯೂ ಆಗಿದೆ.

Advertisement
Advertisement

Advertisement

ಸರಕಾರ ಕೃಷಿ ಉಳಿಸಲು ಇನ್ನಿಲ್ಲದ ಸರಕಾರ ನೀಡುತ್ತಿದೆ. ಬಡ್ಡಿ ರಹಿತ ಸಾಲದಿಂದ ತೊಡಗಿ ಕೃಷಿ ಬೆಳವಣಿಗೆಗೆ ಏನೆಲ್ಲಾ ಮಾಡಬಹುದೋ ಅದನ್ನೆಲ್ಲಾ ಮಾಡುತ್ತಿದೆ. ಹಾಗಿದ್ದರೂ ದೇಶದಲ್ಲಿ ಕೃಷಿಯಲ್ಲಿ ಭಾರೀ ಪ್ರಗತಿ ಕಾಣುತ್ತಿಲ್ಲ. ಇದಕ್ಕೆ ಹಲವು ಕಾರಣಗಳು ಇದ್ದರೂ, ತಾಂತ್ರಿಕ ಐಡಿಯಾ ಹೊಂದಿದ ಹಾಗೂ ಉತ್ಸಾಹದ ಯುವ ಕೃಷಿಕರು ಮಣ್ಣಿನ ಆರಾಧನೆಗೆ ಇಳಿಯದೇ ಇರುವುದೂ ಒಂದು ಕಾರಣ. ಹಾಗಿದ್ದರೂ ಈಗಾಗಲೇ ಕೃಷಿಯಲ್ಲಿ  ತೊಡಗಿಸಿಕೊಂಡಿರುವ ಕೆಲವು ಯುವ ಕೃಷಿಕರು ಉನ್ನತ ವ್ಯಾಸಾಂಗ ಮಾಡಿ ಹೊಸ ಹೊಸ ವಿಧಾನದ ಮೂಲಕ ಕೃಷಿ ಮಾಡುತ್ತಿದ್ದಾರೆ. ಈ ಮೂಲಕ ಕೃಷಿ ಬೆಳವಣಿಗೆಗೂ ಕಾರಣವಾಗುತ್ತಿದ್ದಾರೆ.

ಇದೀಗ ಸುಳ್ಯ ತಾಲೂಕಿನ ನಾಲ್ಕೂರು ಗ್ರಾಮದ ಉಣ್ಣಿಕೃಷ್ಣನ್‌ ಎಂಬ ಯುವಕ ಅವರ ಕೃಷಿ ಭೂಮಿಯಲ್ಲಿ  ವಿವಿಧ ರೀತಿಯಲ್ಲಿ  ತಾಂತ್ರಿಕ ವಿಧಾನವನ್ನು  ಅಳವಡಿಸಿಕೊಂಡಿದ್ದಾರೆ. ಅಡಿಕೆ ಹಾಗೂ ರಬ್ಬರ್‌ ಬೆಳೆಯುವ ಇವರು  ರಬ್ಬರ್‌ ಕೃಷಿಯಲ್ಲೂ ತಾಂತ್ರಿಕ ವಿಧಾನ ಬಳಕೆ ಮಾಡಿದರೆ, ಅಡಿಕೆ ಕೃಷಿಯಲ್ಲೂ ತಾಂತ್ರಿಕವಾಗಿಯೇ ಕೆಲಸ ಮಾಡುತ್ತಿದ್ದಾರೆ. ಈಗ ಬ್ರೆಶ್‌ ಕಟ್ಟರ್‌ ಮೂಲಕ ಕೆರೆಯಿಂದ ನೀರೆಳೆಯುವ ಪ್ರಯತ್ನ ಮಾಡಿದ್ದಾರೆ. ಒಂದೇ ಯಂತ್ರದ ಮೂಲಕ ವಿವಿಧ ಕೆಲಸಗಳು ಆಗಬೇಕು ಎನ್ನುವ ಯೋಚನೆಯಿಂದ ಪ್ರಯತ್ನ ಮಾಡುತ್ತಿರುವ ಉಣ್ಣಿಕೃಷ್ಣನ್‌, ಅಡಿಕೆ ತೋಟಕ್ಕೆ ಬೋರ್ಡೋ ಸಿಂಪಡಣೆಯ ಸಂದರ್ಭ ನೀರು ಅಗತ್ಯವಾಗಿದೆ, ಇದಕ್ಕೆ ಆನ್‌ ಲೈನ್‌ ಮೂಲಕ ಯಂತ್ರವನ್ನು  ಹುಡುಕಿ ಅದನ್ನು ತರಿಸಿ  ಬ್ರೆಶ್‌ ಕಟ್ಟರ್‌ ಗೆ ಅಳವಡಿಕೆ ಮಾಡಿದ್ದಾರೆ. ಈ ಮೂಲಕ ಹೊಸದೊಂದು ಪ್ರಯೋಗ ಮಾಡಿ ಯಶಸ್ಸು ಕಂಡಿದ್ದಾರೆ. ಎರಡು ನಿಮಿಷದ ಒಳಗೆ 200 ಲೀಟರ್‌ ನೀರನ್ನು  ತುಂಬಿಸಲು ಸಾಧ್ಯವಾಗುತ್ತದೆ ಎನ್ನುತ್ತಾರೆ ಉಣ್ಣಿಕೃಷ್ಣನ್.‌ ಯುವಕರ ಇಂತಹ ವಿನೂತನ ಯೋಚನೆಗಳು ಕೃಷಿಕರಿಂದಲೂ ಬೆಂಬಲ ದೊರೆಯುತ್ತಿರುವುದು  ಆಶಾದಾಯಕ ಬೆಳವಣಿಗೆ.

Advertisement

 

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ  ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…

5 hours ago

ವೆದರ್‌ ಮಿರರ್‌ | 03.05.2024 |ಮೇ. 4ರಿಂದ ಮೋಡ| ಮೇ.6 ರಿಂದ ಅಲ್ಲಲ್ಲಿ ಮಳೆ ನಿರೀಕ್ಷೆ

04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…

14 hours ago

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

2 days ago

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

2 days ago

ಅಡಿಕೆ ಹಳದಿ ಎಲೆರೋಗ – ಚುನಾವಣೆ

ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…

2 days ago

ವಾರದ ಅತಿಥಿ | ಸುಬ್ರಾಯ ಚೊಕ್ಕಾಡಿ ಮಾತು

https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್‌ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…

2 days ago