Advertisement
MIRROR FOCUS

ಕೃಷಿಯಲ್ಲಿ ಶ್ರಮ ಉಳಿತಾಯ ಮಾಡುವ ಸುಲಭ ಉಪಾಯ | ತಾಂತ್ರಿಕ ಐಡಿಯಾದ ಯುವ ಕೃಷಿಕರೇ ಈಗ ಕೃಷಿಗೆ ಬೇಕಿದೆ |

Share

ಕೃಷಿಯಲ್ಲಿ ಈಗ ಶ್ರಮ ಉಳಿತಾಯವಾಗಬೇಕು, ಈ ಮೂಲಕ ಕೃಷಿ ಆದಾಯವೂ ಉಳಿತಾಯವಾಗಬೇಕು, ಪ್ರಧಾನಿಗಳು ಹೇಳಿದ ಕೃಷಿ ಆದಾಯದ ದ್ವಿಗುಣದ ದಾರಿಯೂ ಸುಲಭ ಆಗಬೇಕು. ಕೃಷಿಯಲ್ಲಿನ ಹಲವು ಸಮಸ್ಯೆಗಳ ನಿವಾರಣೆಗೆ ತಾಂತ್ರಿಕ ವಿಧಾನಗಳ ಬಳಕೆಯೂ ಇಂದು ಅಗತ್ಯವಾಗಿದೆ. ಇದಕ್ಕೆ ಯುವಕರ ವಿನೂತನ ಟೆಕ್ನಿಕಲ್ ಐಡಿಯಾಗಳೂ ಕಾರಣವಾಗುತ್ತದೆ.ಇಂತಹದ್ದೊಂದು ಐಡಿಯಾವನ್ನು ಯುವಕ ಉಣ್ಣಿಕೃಷ್ಣನ್ ಮಾಡಿದ್ದಾರೆ.‌ ಹಲವು ಕೃಷಿಕರಿಗೆ ಈ ಐಡಿಯಾ ಮೆಚ್ಚುಗೆಯೂ ಆಗಿದೆ.

ಸರಕಾರ ಕೃಷಿ ಉಳಿಸಲು ಇನ್ನಿಲ್ಲದ ಸರಕಾರ ನೀಡುತ್ತಿದೆ. ಬಡ್ಡಿ ರಹಿತ ಸಾಲದಿಂದ ತೊಡಗಿ ಕೃಷಿ ಬೆಳವಣಿಗೆಗೆ ಏನೆಲ್ಲಾ ಮಾಡಬಹುದೋ ಅದನ್ನೆಲ್ಲಾ ಮಾಡುತ್ತಿದೆ. ಹಾಗಿದ್ದರೂ ದೇಶದಲ್ಲಿ ಕೃಷಿಯಲ್ಲಿ ಭಾರೀ ಪ್ರಗತಿ ಕಾಣುತ್ತಿಲ್ಲ. ಇದಕ್ಕೆ ಹಲವು ಕಾರಣಗಳು ಇದ್ದರೂ, ತಾಂತ್ರಿಕ ಐಡಿಯಾ ಹೊಂದಿದ ಹಾಗೂ ಉತ್ಸಾಹದ ಯುವ ಕೃಷಿಕರು ಮಣ್ಣಿನ ಆರಾಧನೆಗೆ ಇಳಿಯದೇ ಇರುವುದೂ ಒಂದು ಕಾರಣ. ಹಾಗಿದ್ದರೂ ಈಗಾಗಲೇ ಕೃಷಿಯಲ್ಲಿ  ತೊಡಗಿಸಿಕೊಂಡಿರುವ ಕೆಲವು ಯುವ ಕೃಷಿಕರು ಉನ್ನತ ವ್ಯಾಸಾಂಗ ಮಾಡಿ ಹೊಸ ಹೊಸ ವಿಧಾನದ ಮೂಲಕ ಕೃಷಿ ಮಾಡುತ್ತಿದ್ದಾರೆ. ಈ ಮೂಲಕ ಕೃಷಿ ಬೆಳವಣಿಗೆಗೂ ಕಾರಣವಾಗುತ್ತಿದ್ದಾರೆ.

ಇದೀಗ ಸುಳ್ಯ ತಾಲೂಕಿನ ನಾಲ್ಕೂರು ಗ್ರಾಮದ ಉಣ್ಣಿಕೃಷ್ಣನ್‌ ಎಂಬ ಯುವಕ ಅವರ ಕೃಷಿ ಭೂಮಿಯಲ್ಲಿ  ವಿವಿಧ ರೀತಿಯಲ್ಲಿ  ತಾಂತ್ರಿಕ ವಿಧಾನವನ್ನು  ಅಳವಡಿಸಿಕೊಂಡಿದ್ದಾರೆ. ಅಡಿಕೆ ಹಾಗೂ ರಬ್ಬರ್‌ ಬೆಳೆಯುವ ಇವರು  ರಬ್ಬರ್‌ ಕೃಷಿಯಲ್ಲೂ ತಾಂತ್ರಿಕ ವಿಧಾನ ಬಳಕೆ ಮಾಡಿದರೆ, ಅಡಿಕೆ ಕೃಷಿಯಲ್ಲೂ ತಾಂತ್ರಿಕವಾಗಿಯೇ ಕೆಲಸ ಮಾಡುತ್ತಿದ್ದಾರೆ. ಈಗ ಬ್ರೆಶ್‌ ಕಟ್ಟರ್‌ ಮೂಲಕ ಕೆರೆಯಿಂದ ನೀರೆಳೆಯುವ ಪ್ರಯತ್ನ ಮಾಡಿದ್ದಾರೆ. ಒಂದೇ ಯಂತ್ರದ ಮೂಲಕ ವಿವಿಧ ಕೆಲಸಗಳು ಆಗಬೇಕು ಎನ್ನುವ ಯೋಚನೆಯಿಂದ ಪ್ರಯತ್ನ ಮಾಡುತ್ತಿರುವ ಉಣ್ಣಿಕೃಷ್ಣನ್‌, ಅಡಿಕೆ ತೋಟಕ್ಕೆ ಬೋರ್ಡೋ ಸಿಂಪಡಣೆಯ ಸಂದರ್ಭ ನೀರು ಅಗತ್ಯವಾಗಿದೆ, ಇದಕ್ಕೆ ಆನ್‌ ಲೈನ್‌ ಮೂಲಕ ಯಂತ್ರವನ್ನು  ಹುಡುಕಿ ಅದನ್ನು ತರಿಸಿ  ಬ್ರೆಶ್‌ ಕಟ್ಟರ್‌ ಗೆ ಅಳವಡಿಕೆ ಮಾಡಿದ್ದಾರೆ. ಈ ಮೂಲಕ ಹೊಸದೊಂದು ಪ್ರಯೋಗ ಮಾಡಿ ಯಶಸ್ಸು ಕಂಡಿದ್ದಾರೆ. ಎರಡು ನಿಮಿಷದ ಒಳಗೆ 200 ಲೀಟರ್‌ ನೀರನ್ನು  ತುಂಬಿಸಲು ಸಾಧ್ಯವಾಗುತ್ತದೆ ಎನ್ನುತ್ತಾರೆ ಉಣ್ಣಿಕೃಷ್ಣನ್.‌ ಯುವಕರ ಇಂತಹ ವಿನೂತನ ಯೋಚನೆಗಳು ಕೃಷಿಕರಿಂದಲೂ ಬೆಂಬಲ ದೊರೆಯುತ್ತಿರುವುದು  ಆಶಾದಾಯಕ ಬೆಳವಣಿಗೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಕರ್ನಾಟಕದ ಕೊಪ್ಪಳ ಹಸು, ಮದಗ್ಯಾಳ ಕುರಿಗೆ ರಾಷ್ಟ್ರೀಯ ಮಾನ್ಯತೆ – ದೇಶದ ಸ್ಥಳೀಯ ಜಾನುವಾರು ತಳಿಗಳ ಸಂಖ್ಯೆ 262ಕ್ಕೆ ಏರಿಕೆ

ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…

56 minutes ago

ಹವಾಮಾನ ವರದಿ | 24-08-2026 | ಕರಾವಳಿಯಲ್ಲಿ ಮಳೆ ಮುಂದುವರಿಕೆ – ಕರ್ನಾಟಕದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…

1 hour ago

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?

ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…

7 hours ago

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

18 hours ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

22 hours ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

23 hours ago